Homeಮುಖಪುಟಅರವಿಂದ್ ಕೇಜ್ರಿವಾಲ್ ಮೇಲೆ ನೀರು ಎರಚಿ ದಾಳಿಗೆ ಯತ್ನ; ಆರೋಪಿ ಬಂಧನ

ಅರವಿಂದ್ ಕೇಜ್ರಿವಾಲ್ ಮೇಲೆ ನೀರು ಎರಚಿ ದಾಳಿಗೆ ಯತ್ನ; ಆರೋಪಿ ಬಂಧನ

- Advertisement -
- Advertisement -

ಶನಿವಾರ ಸಂಜೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ನೀರು ಎರಚಿ ದಾಳಿಗೆ ಪ್ರಯತ್ನಿಸಿದ ಘಟನೆ ನಡೆದಿದೆ. ವ್ಯಕ್ತಿಯನ್ನು ತಕ್ಷಣವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ವ್ಯಕ್ತಿಯು ಕೇಜ್ರಿವಾಲ್ ಮೇಲೆ ನೀರು ಎರಚಿರುವುದು ದಾಖಲಾಗಿದೆ. ಆರೋಪಿಯನ್ನು ಖಾನ್ಪುರ್ ಡಿಪೋದ ಬಸ್ ಮಾರ್ಷಲ್ ಅಶೋಕ್ ಝಾ ಎಂದು ಗುರುತಿಸಲಾಗಿದೆ.

ರಾಷ್ಟ್ರ ರಾಜಧಾನಿಯ ಶೇಖ್ ಸರಾಯ್ ಪ್ರದೇಶದಲ್ಲಿ ಕೇಜ್ರಿವಾಲ್ ಅವರು ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದಾಗ ಕೇಜ್ರಿವಾಲ್ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ಕಿರಿದಾದ ಹಾದಿಯಲ್ಲಿ ನಡೆದು ಜನರಿಗೆ ಶುಭಾಶಯ ಕೋರುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜನಸಂದಣಿ ನಿಯಂತ್ರಣಕ್ಕಾಗಿ ಸರಿಯಾದ ಪೋಲೀಸ್ ನಿಯೋಜನೆಯ ಹೊರತಾಗಿಯೂ, ಸಂಜೆ 5.50 ರ ಸುಮಾರಿಗೆ, ಖಾನ್ಪುರ್ ಡಿಪೋದ ಬಸ್ ಮಾರ್ಷಲ್ ಅಶೋಕ್ ಝಾ ಅವರು ಕೇಜ್ರಿವಾಲ್ ಮೇಲೆ ನೀರು ಎರಚಲು ಪ್ರಯತ್ನಿಸಿದರು. ಸಮೀಪದಲ್ಲಿದ್ದ ಪೊಲೀಸರು ಝಾ ಅವರನ್ನು ಬಂಧಿಸಿದ್ದರಿಂದ ಅವರ ಪ್ರಯತ್ನವನ್ನು ತಕ್ಷಣವೇ ವಿಫಲಗೊಳಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾನ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಈ ಕೃತ್ಯದ ಹಿಂದಿನ ಉದ್ದೇಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಚೌಹಾಣ್ ಹೇಳಿದ್ದಾರೆ. ಅರಂಭದಲ್ಲಿ ಕೇಜ್ರಿವಾಲ್ ಅವರ ಮೇಲೆ ‘ದ್ರವ’ ಎರಚಲಾಗಿದೆ ಎಂದು ವರದಿಯಾಗಿತ್ತು. ನಂತರ ಎರಚಿದ್ದು ನೀರು ಎಂದು ಸ್ಪಷ್ಟಪಡಿಲಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಮೇಲೆ ದಾಳಿ ನಡೆಸಿದ ವ್ಯಕ್ತಿ ಬಿಜೆಪಿಯೊಂದಿಗೆ ನಂಟು ಹೊಂದಿದ್ದಾನೆ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ಬಿಜೆಪಿ ನಾಯಕರು ಎಲ್ಲಾ ರಾಜ್ಯಗಳಲ್ಲಿ ರ‍್ಯಾಲಿಗಳನ್ನು ನಡೆಸುತ್ತಾರೆ, ಆದರೆ ಅವರು ಎಂದಿಗೂ ದಾಳಿಗೆ ಒಳಗಾಗಿಲ್ಲ… ಅರವಿಂದ್ ಕೇಜ್ರಿವಾಲ್ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ… ನಂಗ್ಲೋಯ್‌ನಲ್ಲಿ ಬಿಜೆಪಿ ಅವರ ಮೇಲೆ ಹಲ್ಲೆ ನಡೆಸಿದೆ. ಛತ್ತರ್‌ಪುರದಲ್ಲಿ ಅವರ ಮೇಲೆ ದಾಳಿ ನಡೆದಿದೆ… ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದ್ದು, ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಏನೂ ಮಾಡುತ್ತಿಲ್ಲ…” ಎಂದು ” ಎಂದು ಗ್ರೇಟರ್ ಕೈಲಾಶ್ ಶಾಸಕ ತಿಳಿಸಿದ್ದಾರೆ.

ದೆಹಲಿಯ ನಂಗ್ಲೋಯ್ ಪ್ರದೇಶದಲ್ಲಿ ಬುಧವಾರ ಬಿಜೆಪಿ ನೇತೃತ್ವದಲ್ಲಿ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡಸಲಾಗಿತ್ತು. ಹಾಗಾಗಿ ಅವರ ಭೇಟಿಯನ್ನು ಮಧ್ಯದಲ್ಲಿ ರದ್ದುಗೊಳಿಸಬೇಕಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟನೆ ಬಗ್ಗೆ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಪ್ರತಿಕ್ರಿಯಿಸಿದ್ದು, “ಇಂದು ಹಗಲು ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತ ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆ ನಡೆಸಿದ್ದಾನೆ. ದೆಹಲಿ ಚುನಾವಣೆಯಲ್ಲಿ ಮೂರನೇ ಬಾರಿಗೆ ಸೋತಿರುವ ಬಗ್ಗೆ ಬಿಜೆಪಿ ಆತಂಕದಲ್ಲಿದೆ. ದೆಹಲಿಯ ಜನರು ಇಂತಹ ಅಗ್ಗದ ಕೃತ್ಯಗಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಾರೆ. ಕಳೆದ ಬಾರಿ ಅವರು [ಬಿಜೆಪಿ] ಎಂಟು ಸ್ಥಾನಗಳನ್ನು ಪಡೆದಿದ್ದರು. ಈ ಬಾರಿ ದೆಹಲಿ ಜನರು ಬಿಜೆಪಿಗೆ ಶೂನ್ಯ ಸ್ಥಾನಗಳನ್ನು ನೀಡುತ್ತಾರೆ” ಎಂದು ಹೇಳಿದ್ದಾರೆ.

ಅದಾಗ್ಯೂ ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ಚುನಾವಣೆಗೆ ಮುನ್ನ ಕೇಜ್ರಿವಾಲ್ ಹಳೆಯ ತಂತ್ರಕ್ಕೆ ಮರಳಿದ್ದಾರೆ ಎಂದು ಹೇಳಿದೆ.

“ಅರವಿಂದ್ ಕೇಜ್ರಿವಾಲ್ ಅವರ ಪ್ರತಿಯೊಂದು ರಾಜಕೀಯ ತಂತ್ರವೂ ವಿಫಲವಾಗಿದೆ. ಈಗ ಅವನು ತನ್ನ ಹಳೆಯ ತಂತ್ರಗಳಿಗೆ ಹೊರಳಿದ್ದಾರೆ. ಈ ಹಳೆಯ ತಂತ್ರಗಳಲ್ಲಿ ಅವರಿಗೆ ಕಪಾಳಮೋಕ್ಷ ಮತ್ತು ಅವನ ಮೇಲೆ ಶಾಯಿಯನ್ನು ಎರಚಲಾಗುತ್ತದೆ. ಅಂತಹದ್ದೇ ಘಟನೆ ಇಂದು ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರು ಇಂದು ಯಾವ ಹೊಸ ಆಟವನ್ನು ಪ್ರಾರಂಭಿಸಿದ್ದಾರೆ ಎಂದು ಅವರೇ ಹೇಳಬೇಕು” ಎಂದು ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಹೇಳಿದ್ದಾರೆ.

2016ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಜ್ರಿವಾಲ್ ಮೇಲೆ ಶಾಯಿ ಎರಚಿದ್ದ. ಆಗ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿದ್ದರು. ದೆಹಲಿಯಲ್ಲಿ ಫೆಬ್ರವರಿ ವೇಳೆ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...