Homeಮುಖಪುಟಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

ಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

- Advertisement -
- Advertisement -

ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಶುಕ್ರವಾರ ನವ ದೆಹಲಿಯಲ್ಲಿ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ‘ಸಂಸದ್ ಮೇ ಭಿ ಕೇಜ್ರಿವಾಲ್, ದಿಲ್ಲಿ ಹೋಗಿ ಔರ್ ಖುಷ್ ಹಾಲ್’ ಎಂಬ ಘೋಷಣೆಯೊಂದಿಗೆ ಪ್ರಾರಂಭಿಸಿದರು. ಏಪ್ರಿಲ್-ಮೇksabha ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿದೆ.

ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಚಾರವನ್ನು ಪ್ರಾರಂಭಿಸಲಾಯಿತು. ‘ನನ್ನ ಕುಟುಂಬವಾಗಿರುವ ದೆಹಲಿಯ ಜನರಿಗೆ ಸೇವೆ ಸಲ್ಲಿಸಲು ನಾನು ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ’ ಎಂದು ಕೇಜ್ರಿವಾಲ್ ಹೇಳಿದರು.

‘ನಮ್ಮ ಘೋಷವಾಕ್ಯ ‘ಸಂಸದ್ ಮೇ ಭಿ ಕೇಜ್ರಿವಾಲ್, ತೊ ದಿಲ್ಲಿ ಹೋಗಿ ಔರ್ ಖುಷ್ ಹಾಲ್’ (ಸಂಸತ್‌ನಲ್ಲಿ ಕೇಜ್ರಿವಾಲ್ ಅವರೊಂದಿಗೆ ದೆಹಲಿ ಹೆಚ್ಚು ಸಮೃದ್ಧವಾಗಲಿದೆ)’ ಎಂದು ಅವರು ಹೇಳಿದರು.

ದೆಹಲಿ -ಪಂಜಾಬ್ ರಾಜ್ಯಗಳು ಎಎಪಿ ಆಡಳಿತದಲ್ಲಿವೆ; ಈ ಎರಡು ರಾಜ್ಯಗಳಲ್ಲಿ ಮಾತ್ರ ಉಚಿತ ವಿದ್ಯುತ್ ಸರಬರಾಜು ಇದೆ ಎಂದು ಅವರು ಹೇಳಿದರು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಎಪಿ ಸರ್ಕಾರವು ಪ್ರಾರಂಭಿಸಿದ ಪ್ರತಿಯೊಂದು ಯೋಜನೆಯನ್ನು ಸ್ಥಗಿತಗೊಳಿಸುತ್ತದೆ. ಎಲ್ಲ ಏಳು ವಿರೋಧ ಪಕ್ಷದ ಅಭ್ಯರ್ಥಿಗಳನ್ನು ಸಂಸತ್ತಿಗೆ ಕಳುಹಿಸುವ ಮೂಲಕ ನಮ್ಮನ್ನು ಬಲಪಡಿಸಬೇಕು ಎಂದು ಜನರನ್ನು ಒತ್ತಾಯಿಸಿದರು.

‘ನೀವು ದೆಹಲಿಯಲ್ಲಿ ಸಾಮಾನ್ಯ ವ್ಯಕ್ತಿಯನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದ ಕಾರಣ ಅವರು ನಿಮ್ಮನ್ನು ದ್ವೇಷಿಸುತ್ತಾರೆ. ಅವರು ಬುಲ್ಡೋಜರ್‌ಗಳಿಂದ ಮೊಹಲ್ಲಾ ಕ್ಲಿನಿಕ್‌ಗಳನ್ನು ಕೆಡವಿದರು, ಅವರು ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ, ಆಸ್ಪತ್ರೆಗಳಲ್ಲಿ ಪರೀಕ್ಷೆಗಳು ಮತ್ತು ಔಷಧಿಗಳನ್ನು ನಿಲ್ಲಿಸಿದರು’ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಆರೋಪ ಮಾಡಿದರು.

ಎಎಪಿ ಕಾರ್ಯಕರ್ತರು ಚುನಾವಣಾ ಪ್ರಚಾರದ ವೇಳೆ ಪಕ್ಷದ ಸರ್ಕಾರಗಳು ಮಾಡಿದ ಕೆಲಸಗಳನ್ನು ವಿವರಿಸುವ ಕರಪತ್ರಗಳನ್ನು ಹಂಚಲಿದ್ದಾರೆ ಎಂದು ಅವರು ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಮಾನ್ ಮಾತನಾಡಿ, ‘ನಮ್ಮ ರಾಜ್ಯವು ಲೋಕಸಭೆ ಚುನಾವಣೆಯಲ್ಲಿ 13-0 ಫಲಿತಾಂಶವನ್ನು ಎಎಪಿ ಪರವಾಗಿ ಪಡೆಯಲಿದೆ’ ಎಂದು ಹೇಳಿದರು. ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರದ ಕೆಲಸಕ್ಕೆ ಕೇಂದ್ರವು ಅಡ್ಡಿಪಡಿಸುತ್ತಿದೆ ಮತ್ತು ಪಂಜಾಬ್‌ನ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಆಪ್ ಉತ್ತಮ ಸಂಖ್ಯೆಯ ಸಂಸದರನ್ನು ಹೊಂದಿದ್ದರೆ ಪಂಜಾಬ್‌ನ ಹಣವನ್ನು ನಿಲ್ಲಿಸಲು ಮತ್ತು ದೆಹಲಿಯಲ್ಲಿ ಕೆಲಸ ತಡೆಯಲು ಯಾರೂ ಧೈರ್ಯ ಮಾಡುವುದಿಲ್ಲ ಎಂದು ಅವರು ಹೇಳಿದರು.

ದೆಹಲಿ, ಗುಜರಾತ್ ಮತ್ತು ಹರಿಯಾಣದಲ್ಲಿ ತನ್ನೊಂದಿಗೆ ಮಾಡಿಕೊಂಡಿರುವ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಇಂಡಿಯಾ ಬ್ಲಾಕ್ ಪಾಲುದಾರ ಕಾಂಗ್ರೆಸ್ ಸಹಯೋಗದೊಂದಿಗೆ ಎಎಪಿ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿದೆ.

ಆದರೆ, ಪಂಜಾಬ್‌ನಲ್ಲಿ ಎರಡೂ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಎಎಪಿ ಸ್ಪರ್ಧಿಸಲಿದೆ ಮತ್ತು ಉಳಿದ ಮೂರರಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಒಪ್ಪಂದದಡಿಯಲ್ಲಿ ಗುಜರಾತ್‌ನ ಭರೂಚ್, ಜಾಮ್‌ನಗರ ಮತ್ತು ಹರಿಯಾಣದ ಕುರುಕ್ಷೇತ್ರ ಎಂಬ ಎರಡು ಕ್ಷೇತ್ರಗಳನ್ನು ಪಕ್ಷವು ಪಡೆದುಕೊಂಡಿದೆ. ಪ್ರತ್ಯೇಕವಾಗಿ, ಎಎಪಿ ಅಸ್ಸಾಂನ ಗುವಾಹಟಿ, ದಿಬ್ರುಗಢ ಮತ್ತು ಸೋನಿತ್‌ಪುರ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...