Homeಮುಖಪುಟಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

ಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

- Advertisement -
- Advertisement -

ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಶುಕ್ರವಾರ ನವ ದೆಹಲಿಯಲ್ಲಿ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ‘ಸಂಸದ್ ಮೇ ಭಿ ಕೇಜ್ರಿವಾಲ್, ದಿಲ್ಲಿ ಹೋಗಿ ಔರ್ ಖುಷ್ ಹಾಲ್’ ಎಂಬ ಘೋಷಣೆಯೊಂದಿಗೆ ಪ್ರಾರಂಭಿಸಿದರು. ಏಪ್ರಿಲ್-ಮೇksabha ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿದೆ.

ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಚಾರವನ್ನು ಪ್ರಾರಂಭಿಸಲಾಯಿತು. ‘ನನ್ನ ಕುಟುಂಬವಾಗಿರುವ ದೆಹಲಿಯ ಜನರಿಗೆ ಸೇವೆ ಸಲ್ಲಿಸಲು ನಾನು ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ’ ಎಂದು ಕೇಜ್ರಿವಾಲ್ ಹೇಳಿದರು.

‘ನಮ್ಮ ಘೋಷವಾಕ್ಯ ‘ಸಂಸದ್ ಮೇ ಭಿ ಕೇಜ್ರಿವಾಲ್, ತೊ ದಿಲ್ಲಿ ಹೋಗಿ ಔರ್ ಖುಷ್ ಹಾಲ್’ (ಸಂಸತ್‌ನಲ್ಲಿ ಕೇಜ್ರಿವಾಲ್ ಅವರೊಂದಿಗೆ ದೆಹಲಿ ಹೆಚ್ಚು ಸಮೃದ್ಧವಾಗಲಿದೆ)’ ಎಂದು ಅವರು ಹೇಳಿದರು.

ದೆಹಲಿ -ಪಂಜಾಬ್ ರಾಜ್ಯಗಳು ಎಎಪಿ ಆಡಳಿತದಲ್ಲಿವೆ; ಈ ಎರಡು ರಾಜ್ಯಗಳಲ್ಲಿ ಮಾತ್ರ ಉಚಿತ ವಿದ್ಯುತ್ ಸರಬರಾಜು ಇದೆ ಎಂದು ಅವರು ಹೇಳಿದರು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಎಪಿ ಸರ್ಕಾರವು ಪ್ರಾರಂಭಿಸಿದ ಪ್ರತಿಯೊಂದು ಯೋಜನೆಯನ್ನು ಸ್ಥಗಿತಗೊಳಿಸುತ್ತದೆ. ಎಲ್ಲ ಏಳು ವಿರೋಧ ಪಕ್ಷದ ಅಭ್ಯರ್ಥಿಗಳನ್ನು ಸಂಸತ್ತಿಗೆ ಕಳುಹಿಸುವ ಮೂಲಕ ನಮ್ಮನ್ನು ಬಲಪಡಿಸಬೇಕು ಎಂದು ಜನರನ್ನು ಒತ್ತಾಯಿಸಿದರು.

‘ನೀವು ದೆಹಲಿಯಲ್ಲಿ ಸಾಮಾನ್ಯ ವ್ಯಕ್ತಿಯನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದ ಕಾರಣ ಅವರು ನಿಮ್ಮನ್ನು ದ್ವೇಷಿಸುತ್ತಾರೆ. ಅವರು ಬುಲ್ಡೋಜರ್‌ಗಳಿಂದ ಮೊಹಲ್ಲಾ ಕ್ಲಿನಿಕ್‌ಗಳನ್ನು ಕೆಡವಿದರು, ಅವರು ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ, ಆಸ್ಪತ್ರೆಗಳಲ್ಲಿ ಪರೀಕ್ಷೆಗಳು ಮತ್ತು ಔಷಧಿಗಳನ್ನು ನಿಲ್ಲಿಸಿದರು’ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಆರೋಪ ಮಾಡಿದರು.

ಎಎಪಿ ಕಾರ್ಯಕರ್ತರು ಚುನಾವಣಾ ಪ್ರಚಾರದ ವೇಳೆ ಪಕ್ಷದ ಸರ್ಕಾರಗಳು ಮಾಡಿದ ಕೆಲಸಗಳನ್ನು ವಿವರಿಸುವ ಕರಪತ್ರಗಳನ್ನು ಹಂಚಲಿದ್ದಾರೆ ಎಂದು ಅವರು ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಮಾನ್ ಮಾತನಾಡಿ, ‘ನಮ್ಮ ರಾಜ್ಯವು ಲೋಕಸಭೆ ಚುನಾವಣೆಯಲ್ಲಿ 13-0 ಫಲಿತಾಂಶವನ್ನು ಎಎಪಿ ಪರವಾಗಿ ಪಡೆಯಲಿದೆ’ ಎಂದು ಹೇಳಿದರು. ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರದ ಕೆಲಸಕ್ಕೆ ಕೇಂದ್ರವು ಅಡ್ಡಿಪಡಿಸುತ್ತಿದೆ ಮತ್ತು ಪಂಜಾಬ್‌ನ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಆಪ್ ಉತ್ತಮ ಸಂಖ್ಯೆಯ ಸಂಸದರನ್ನು ಹೊಂದಿದ್ದರೆ ಪಂಜಾಬ್‌ನ ಹಣವನ್ನು ನಿಲ್ಲಿಸಲು ಮತ್ತು ದೆಹಲಿಯಲ್ಲಿ ಕೆಲಸ ತಡೆಯಲು ಯಾರೂ ಧೈರ್ಯ ಮಾಡುವುದಿಲ್ಲ ಎಂದು ಅವರು ಹೇಳಿದರು.

ದೆಹಲಿ, ಗುಜರಾತ್ ಮತ್ತು ಹರಿಯಾಣದಲ್ಲಿ ತನ್ನೊಂದಿಗೆ ಮಾಡಿಕೊಂಡಿರುವ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಇಂಡಿಯಾ ಬ್ಲಾಕ್ ಪಾಲುದಾರ ಕಾಂಗ್ರೆಸ್ ಸಹಯೋಗದೊಂದಿಗೆ ಎಎಪಿ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿದೆ.

ಆದರೆ, ಪಂಜಾಬ್‌ನಲ್ಲಿ ಎರಡೂ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಎಎಪಿ ಸ್ಪರ್ಧಿಸಲಿದೆ ಮತ್ತು ಉಳಿದ ಮೂರರಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಒಪ್ಪಂದದಡಿಯಲ್ಲಿ ಗುಜರಾತ್‌ನ ಭರೂಚ್, ಜಾಮ್‌ನಗರ ಮತ್ತು ಹರಿಯಾಣದ ಕುರುಕ್ಷೇತ್ರ ಎಂಬ ಎರಡು ಕ್ಷೇತ್ರಗಳನ್ನು ಪಕ್ಷವು ಪಡೆದುಕೊಂಡಿದೆ. ಪ್ರತ್ಯೇಕವಾಗಿ, ಎಎಪಿ ಅಸ್ಸಾಂನ ಗುವಾಹಟಿ, ದಿಬ್ರುಗಢ ಮತ್ತು ಸೋನಿತ್‌ಪುರ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...