Homeಮುಖಪುಟಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

- Advertisement -
- Advertisement -

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ  ಮೇ 7ರವರೆಗೆ ವಿಸ್ತರಿಸಿದೆ.

ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡ ಹಿನ್ನೆಲೆ ಅವರನ್ನು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಪೀಠದ ಮುಂದೆ ವೀಡಿಯೊ ಕಾನ್ಫರೆನ್ಸ್ ಮೂಲಕ ಇಡಿ ಮತ್ತು ಸಿಬಿಐ ಅಧಿಕಾರಿಗಳು ಹಾಜರುಪಡಿಸಿದ್ದರು.

ಭ್ರಷ್ಟಾಚಾರ ಪ್ರಕರಣದಲ್ಲಿ ತೆಲಂಗಾಣ ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಕೂಡ ಮೇ 7ರವರೆಗೆ ನ್ಯಾಯಾಧೀಶರು ವಿಸ್ತರಿಸಿದ್ದಾರೆ.

ಸುನೀತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಕೇಜ್ರಿವಾಲ್‌ಗೆ ವೈದ್ಯರೊಂದಿಗೆ ಪ್ರತಿದಿನ 15 ನಿಮಿಷಗಳ ವೈದ್ಯಕೀಯ ಸಮಾಲೋಚನೆಗೆ ಅವಕಾಶ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕನ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ಒಂದು ದಿನದ ನಂತರ ನ್ಯಾಯಾಲಯದ ಈ ನಿರ್ಧಾರವು ಹೊರ ಬಂದಿದೆ. ದೆಹಲಿ ನ್ಯಾಯಾಲಯವು ಕೇಜ್ರಿವಾಲ್‌ಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವಂತೆ ನಿರ್ದೇಶಿಸಿದೆ ಮತ್ತು ಯಾವುದೇ ವಿಶೇಷ ಸಮಾಲೋಚನೆಯ ಅಗತ್ಯವಿದ್ದಲ್ಲಿ, ತಿಹಾರ್ ಜೈಲು ಅಧಿಕಾರಿಗಳು AIIMS ನಿರ್ದೇಶಕರು ರಚಿಸಿರುವ ವೈದ್ಯಕೀಯ ಮಂಡಳಿಯ ಸಲಹೆಯನ್ನು ಪಡೆಯಬೇಕು ಎಂದು ಹೇಳಿದೆ.

ಸೋಮವಾರ ಸಂಜೆ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಿದ ನಂತರ ಕೇಜ್ರಿವಾಲ್ ಅವರಿಗೆ “ಕಡಿಮೆ ಪ್ರಮಾಣದ” ಇನ್ಸುಲಿನ್‌ನ್ನು ನೀಡಲಾಯಿತು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಏಮ್ಸ್ ವೈದ್ಯರ ಸಲಹೆಯ ಮೇರೆಗೆ ಕೇಜ್ರಿವಾಲ್ ಅವರಿಗೆ ಸೋಮವಾರ ಸಂಜೆ ಕಡಿಮೆ ಪ್ರಮಾಣದ ಇನ್ಸುಲಿನ್ ನೀಡಲಾಯಿತು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.

‘ಇಡಿ’ಯ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಮಾ. 21ರಂದು ಜಾರಿ ನಿರ್ದೇಶನಾಲಯ (ಇಡಿ) ಕೇಜ್ರಿವಾಲ್ ಅವರನ್ನು ಬಂಧಿಸಿದೆ. ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ‘ಇಡಿ’ ಮತ್ತು ‘ಸಿಬಿಐ’ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನು ಓದಿ: ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...