Homeಮುಖಪುಟಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ನಾನು ಅನುಮತಿ ನೀಡಲಿಲ್ಲ’- ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಕೇಜ್ರಿವಾಲ್ ಬೆಳಿಗ್ಗೆ 10 ಗಂಟೆಗೆ  ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿದ್ದರು.

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮೊದಲ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್. ಕೇಂದ್ರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ನಾಳೆ ಕರೆ ನೀಡಲಾಗಿರುವ, “ಭಾರತ್ ಬಂದ್” ಗೆ ಬೆಂಬಲ ನೀಡಿದ ಹಲವಾರು ವಿರೋಧ ಪಕ್ಷದ ನಾಯಕರಲ್ಲಿ ಕೇಜ್ರಿವಾಲ್ ಕೂಡ ಇದ್ದಾರೆ.

“ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ನಿನ್ನೆ ಟ್ವೀಟ್‌ನಲ್ಲಿ ತಿಳಿಸಿದ್ದರು.

ಸಿಂಗು ಮತ್ತು ಟಿಕ್ರಿ ಗಡಿಗಳಲ್ಲಿ ಸುಮಾರು 10 ದಿನಗಳಿಂದ ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿವೆ, ಅಲ್ಲಿ ಪಂಜಾಬ್ ಮತ್ತು ಹರಿಯಾಣದಿಂದ ಬಂದಿರುವ ಸಾವಿರಾರು ರೈತರು ಜಮಾಯಿಸಿದ್ದಾರೆ. ಇತ್ತ ಗಾಜಿಪುರ ಗಡಿಯಲ್ಲಿ ರೈತರ ಸಂಖ್ಯೆ ಹೆಚ್ಚಾಗಿದ್ದು, ಉತ್ತರಪ್ರದೇಶದಿಂದ ಬಂದಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಂಡಿದ್ದಾರೆ.

ಇದನ್ನು ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

’ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಆಪ್ ಸರ್ಕಾರ, ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ನೇತೃತ್ವದಲ್ಲಿ ಶೆಡ್‌ಗಳು, ನೀರು, ವಿದ್ಯುತ್ ಇತ್ಯಾದಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಿತ್ತು. ಇದನ್ನು ರಾಜಕಾರಣ ಎಂದು ಬಿಜೆಪಿ ಟೀಕಿಸಿತ್ತು.

“ಇದು ಕೇವಲ ರೈತರ ಹೋರಾಟವಲ್ಲ, ಎಲ್ಲಾ ದೇಶವಾಸಿಗಳ ಹೋರಾಟ. ಭಾರತವು ಕೃಷಿ ದೇಶವಾಗಿದ್ದು, ರೈತರು ಅತೃಪ್ತರಾಗಿದ್ದರೆ, ಅದು ದೇಶದ ಮೇಲೆ ಪರಿಣಾಮ ಬೀರುತ್ತದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ”ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದರು.


ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...