”ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದಿನ ದಿನಗಳಲ್ಲಿ ಬಂಧಿಸಿದರೆ ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ” ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.
”ಮಂಗಳವಾರ ನಡೆದ ಆಮ್ ಆದ್ಮಿ ಪಕ್ಷದ ಶಾಸಕರ ಸಭೆಯಲ್ಲಿ ಬಿಜೆಪಿ ಯಾವುದಾದರೂ ಪಿತೂರಿ ಮೂಲಕ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದರೂ ಅವರು ರಾಜೀನಾಮೆ ನೀಡಬಾರದು ಎಂದು ಪಕ್ಷದ ಎಲ್ಲಾ ನಾಯಕರು ಒಮ್ಮತದಿಂದ ಹೇಳಿದ್ದಾರೆ” ಎಂದು ದೆಹಲಿ ಸಚಿವ ಅತಿಶಿ ಹೇಳಿದ್ದಾರೆ.
VIDEO | "A meeting of AAP MLAs was held today in which the leaders unanimously said that even if the BJP sends Arvind Kejriwal to jail by hatching a conspiracy, he must not resign. The people of Delhi have given him the mandate to run the government, even if it has to be done… pic.twitter.com/uJwbJOVBok
— Press Trust of India (@PTI_News) November 6, 2023
”ಸರ್ಕಾರವನ್ನು ನಡೆಸಲು ದೆಹಲಿಯ ಜನರು ಅವರಿಗೆ ಜನಾದೇಶ ನೀಡಿದ್ದಾರೆ. ಅಗತ್ಯವಿದ್ದರೆ ನಾವು ಪ್ರಮುಖ ಕಡತಗಳನ್ನು ತಿಹಾರ್ ಜೈಲಿಗೆ ಕಳುಹಿಸಲು ನ್ಯಾಯಾಲಯದಿಂದ ಅನುಮತಿ ಪಡೆಯುತ್ತೇವೆ. ಅಗತ್ಯವಿದ್ದರೆ ನಾವು ಅಲ್ಲಿ ಕ್ಯಾಬಿನೆಟ್ ಸಭೆ ನಡೆಸಿ ಅಧಿಕಾರಿಗಳನ್ನು ಕರೆಸುತ್ತೇವೆ” ಎಂದು ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಪಿಟಿಐಗೆ ತಿಳಿಸಿದರು.
ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ನಾಲ್ಕು ದಿನಗಳ ನಂತರ ಅತಿಶಿ ಈ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಅವರು ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ಪ್ರಯಾಣಿಸಿರುವ ಕಾರಣ ಸಮನ್ಸ್ನ್ನು ಹಿಂಪಡೆಯುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.
ಈ ಪ್ರಕರಣವು ಆಮ್ ಆದ್ಮಿ ಪಕ್ಷದ ಸರ್ಕಾರವು ಈಗ ರದ್ದುಗೊಳಿಸಿರುವ ಅಬಕಾರಿ ನೀತಿಯಲ್ಲಿ ಅಕ್ರಮಗಳು ನಡೆದಿವೆ ಎನ್ನುವ ಆರೋಪದ ಮೇಲೆ ಏಪ್ರಿಲ್ 16 ರಂದು ಕೇಂದ್ರ ತನಿಖಾ ದಳವು ಕೇಜ್ರಿವಾಲ್ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತು.
ಇದನ್ನೂ ಓದಿ: “ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್ನೊಂದಿಗೆ ಕೇಂದ್ರದ ರಹಸ್ಯ ಒಪ್ಪಂದ”: ಭೂಪೇಶ್ ಬಾಘೆಲ್