Homeಮುಖಪುಟ60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರಿದ್ದಾರೆ.

- Advertisement -
- Advertisement -

ಭಾನುವಾರ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರು ’ದೆಹಲಿಯ ನಿರ್ಮಾತೃಗಳು’ ಎಂದು ಕರೆಯಲ್ಪಡುವ 60 ಜನರ ಗುಂಪಿನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಮೂಲಕ ಆಮ್‌ ಆದ್ಮಿ ಪಾರ್ಟಿ ಹುಟ್ಟಿದ ರಾಮ್‌ಲೀಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯವಾಗಿ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಪಕ್ಷಗಳ ಮುಖಂಡರನ್ನು ಆಹ್ವಾನಿಸದಿರುವುದು ಗಮನಾರ್ಹವಾಗಿದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಗರದ ಏಳು ಬಿಜೆಪಿ ಸಂಸದರಿಗೆ ಆಹ್ವಾನವನ್ನು ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಮುಖಂಡ ಗೋಪಾಲ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಪಿಎಂಒಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಪಕ್ಷದ ಇತರ ಹಿರಿಯ ಸದಸ್ಯರು ಪ್ರಧಾನಮಂತ್ರಿಯ ಆಹ್ವಾನ ಕೇವಲ “ಪ್ರೋಟೋಕಾಲ್” ಎಂದು ಹೇಳಿದ್ದಾರೆ. ಆದಾಗ್ಯೂ, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಪ್ರಧಾನಿ ಕಚೇರಿಯ ವೇಳಾಪಟ್ಟಿಯ ಪ್ರಕಾರ, 30 ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಗೆ ಭಾನುವಾರ ಪ್ರಯಾಣಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಸಾಮಾನ್ಯರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವ ವಿಚಾರದ ಕುರಿತು ತ್ವರಿತ ಕರಡನ್ನು – ‘ದೆಹಲಿ ಕೆ ನಿರ್ಮಾತಾ’ ಬ್ಯಾನರ್ ಅಡಿಯಲ್ಲಿ – ಕೇಜ್ರಿವಾಲ್ ಅವರ ಕಚೇರಿಗೆ ಶುಕ್ರವಾರ ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಮಹಿಳಾ ಭದ್ರತೆಗಾಗಿ ನಿಯೋಜಿಸಲಾದ ಮಾರ್ಷಲ್‌ಗಳು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ಐಐಟಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಪಿಡಬ್ಲ್ಯೂಡಿ ಎಂಜಿನಿಯರ್‌ಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ವಿತರಣಾ ಏಜಂಟು ಸೇರಿದ್ದಾರೆ ಎನ್ನಲಾಗುತ್ತಿದೆ.

“ಅತಿಥಿಗಳನ್ನು ತಮ್ಮ ಉದ್ಯೋಗಗಳಲ್ಲಿನ ಸಾಧನೆಯ ಆಧಾರದ ಮೇಲೆ ಸರ್ಕಾರಗಳು, ನಾಗರಿಕ ಸಂಸ್ಥೆಗಳು ಅಥವಾ ಮಾಧ್ಯಮಗಳು ಅಥವಾ ಕೆಲವು ಸಂದರ್ಭಗಳಲ್ಲಿ ವಿಭಾಗದ ಮುಖ್ಯಸ್ಥರಿಂದ ಉಲ್ಲೇಖದ ಆಧಾರದ ಮೇಲೆ ಆಯ್ಕೆಯಾಗಿದ್ದಾರೆ” ಎಂದು ಹಿರಿಯ ಎಎಪಿ ಮುಖಂಡರು ಹೇಳಿದರು.

ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯೇತರ ಆಡಳಿತದ ರಾಜ್ಯಗಳಿಂದ ಬೇರೆ ಯಾವುದೇ ಮುಖ್ಯಮಂತ್ರಿ ಅಥವಾ ರಾಜಕೀಯ ಮುಖಂಡರನ್ನು ಆಹ್ವಾನಿಸದಿರುವುದು, ಈ ಸಮಯದಲ್ಲಿ ಪಕ್ಷವು ಯಾವುದೇ ಸೈದ್ಧಾಂತಿಕ ವಯಲದೊಂದಿಗೆ ಗುರುತಿಸಿಕೊಳ್ಳದಿರಲು ಬಯಸುವುದಿಲ್ಲ ಎಂಬುದರ ಸ್ಪಷ್ಟ ಸಂಕೇತವಾಗಿದೆ ಎಂದು ಅಭಿವೃದ್ಧಿಶೀಲ ಸಂಘಗಳ ಅಧ್ಯಯನ ಕೇಂದ್ರದ ರಾಜಕೀಯ ವಿಶ್ಲೇಷಕ ಪ್ರವೀಣ್ ರೈ ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ತನ್ನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಸಾಮಾನ್ಯ ಜನರನ್ನು ಆಹ್ವಾನಿಸುವ ಮಟ್ಟಿಗೆ, ಇದು ದೆಹಲಿಯ ನಾಗರಿಕರ ಮೇಲಿನ ನಂಬಿಕೆಯ ಪುನರ್ ದೃಢೀಕರಣ ಮತ್ತು ಒಳಗೊಳ್ಳುವ ಆಡಳಿತದ ಎಎಪಿ ಕಲ್ಪನೆಯ ಪ್ರತಿಬಿಂಬವಾಗಿದೆ. ವಿಎಪಿ ಸಂಸ್ಕೃತಿ ಮತ್ತು ಸೆಲೆಬ್ರಿಟಿಗಳ ಅನುಮೋದನೆಯನ್ನು ಎಎಪಿ ನಂಬುವುದಿಲ್ಲ ಎಂಬ ದೊಡ್ಡ ರಾಜಕೀಯ ಸಂದೇಶವನ್ನೂ ಇದು ಕಳುಹಿಸುತ್ತದೆ. ಇದಕ್ಕೆ ತದ್ವಿರುದ್ಧವಾಗಿ ಅದೇ ಜಾಗವನ್ನು ಸಾಮಾನ್ಯರೊಂದಿಗೆ ಹಂಚಿಕೊಳ್ಳಲು ಮತ್ತು ಹೊಸ ರಾಜಕೀಯ ಇನ್ನಿಂಗ್ಸ್‌ಗಾಗಿ ಅವರ ಆಶೀರ್ವಾದ ಪಡೆಯಲು ಎಎಪಿ ಬಯಸಿದೆ ಎಂದು ಅವರು ಹೇಳಿದ್ದಾರೆ.

ಎಎಪಿಯ ಈ ವಿನೂತನ ಯೋಜನೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿಯ ಮಾಧ್ಯಮ ವಕ್ತಾರ ನೀಲಕಂತ್ ಬಕ್ಷಿ, “ಇದು ಅವರ ಪ್ರದರ್ಶನ. ಅವರು ಬಯಸಿದ್ದನ್ನು ಅವರು ಮಾಡಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...