Homeಮುಖಪುಟ60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರಿದ್ದಾರೆ.

- Advertisement -
- Advertisement -

ಭಾನುವಾರ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರು ’ದೆಹಲಿಯ ನಿರ್ಮಾತೃಗಳು’ ಎಂದು ಕರೆಯಲ್ಪಡುವ 60 ಜನರ ಗುಂಪಿನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಮೂಲಕ ಆಮ್‌ ಆದ್ಮಿ ಪಾರ್ಟಿ ಹುಟ್ಟಿದ ರಾಮ್‌ಲೀಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯವಾಗಿ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಪಕ್ಷಗಳ ಮುಖಂಡರನ್ನು ಆಹ್ವಾನಿಸದಿರುವುದು ಗಮನಾರ್ಹವಾಗಿದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಗರದ ಏಳು ಬಿಜೆಪಿ ಸಂಸದರಿಗೆ ಆಹ್ವಾನವನ್ನು ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಮುಖಂಡ ಗೋಪಾಲ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಪಿಎಂಒಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಪಕ್ಷದ ಇತರ ಹಿರಿಯ ಸದಸ್ಯರು ಪ್ರಧಾನಮಂತ್ರಿಯ ಆಹ್ವಾನ ಕೇವಲ “ಪ್ರೋಟೋಕಾಲ್” ಎಂದು ಹೇಳಿದ್ದಾರೆ. ಆದಾಗ್ಯೂ, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಪ್ರಧಾನಿ ಕಚೇರಿಯ ವೇಳಾಪಟ್ಟಿಯ ಪ್ರಕಾರ, 30 ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಗೆ ಭಾನುವಾರ ಪ್ರಯಾಣಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಸಾಮಾನ್ಯರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವ ವಿಚಾರದ ಕುರಿತು ತ್ವರಿತ ಕರಡನ್ನು – ‘ದೆಹಲಿ ಕೆ ನಿರ್ಮಾತಾ’ ಬ್ಯಾನರ್ ಅಡಿಯಲ್ಲಿ – ಕೇಜ್ರಿವಾಲ್ ಅವರ ಕಚೇರಿಗೆ ಶುಕ್ರವಾರ ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಮಹಿಳಾ ಭದ್ರತೆಗಾಗಿ ನಿಯೋಜಿಸಲಾದ ಮಾರ್ಷಲ್‌ಗಳು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ಐಐಟಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಪಿಡಬ್ಲ್ಯೂಡಿ ಎಂಜಿನಿಯರ್‌ಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ವಿತರಣಾ ಏಜಂಟು ಸೇರಿದ್ದಾರೆ ಎನ್ನಲಾಗುತ್ತಿದೆ.

“ಅತಿಥಿಗಳನ್ನು ತಮ್ಮ ಉದ್ಯೋಗಗಳಲ್ಲಿನ ಸಾಧನೆಯ ಆಧಾರದ ಮೇಲೆ ಸರ್ಕಾರಗಳು, ನಾಗರಿಕ ಸಂಸ್ಥೆಗಳು ಅಥವಾ ಮಾಧ್ಯಮಗಳು ಅಥವಾ ಕೆಲವು ಸಂದರ್ಭಗಳಲ್ಲಿ ವಿಭಾಗದ ಮುಖ್ಯಸ್ಥರಿಂದ ಉಲ್ಲೇಖದ ಆಧಾರದ ಮೇಲೆ ಆಯ್ಕೆಯಾಗಿದ್ದಾರೆ” ಎಂದು ಹಿರಿಯ ಎಎಪಿ ಮುಖಂಡರು ಹೇಳಿದರು.

ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯೇತರ ಆಡಳಿತದ ರಾಜ್ಯಗಳಿಂದ ಬೇರೆ ಯಾವುದೇ ಮುಖ್ಯಮಂತ್ರಿ ಅಥವಾ ರಾಜಕೀಯ ಮುಖಂಡರನ್ನು ಆಹ್ವಾನಿಸದಿರುವುದು, ಈ ಸಮಯದಲ್ಲಿ ಪಕ್ಷವು ಯಾವುದೇ ಸೈದ್ಧಾಂತಿಕ ವಯಲದೊಂದಿಗೆ ಗುರುತಿಸಿಕೊಳ್ಳದಿರಲು ಬಯಸುವುದಿಲ್ಲ ಎಂಬುದರ ಸ್ಪಷ್ಟ ಸಂಕೇತವಾಗಿದೆ ಎಂದು ಅಭಿವೃದ್ಧಿಶೀಲ ಸಂಘಗಳ ಅಧ್ಯಯನ ಕೇಂದ್ರದ ರಾಜಕೀಯ ವಿಶ್ಲೇಷಕ ಪ್ರವೀಣ್ ರೈ ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ತನ್ನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಸಾಮಾನ್ಯ ಜನರನ್ನು ಆಹ್ವಾನಿಸುವ ಮಟ್ಟಿಗೆ, ಇದು ದೆಹಲಿಯ ನಾಗರಿಕರ ಮೇಲಿನ ನಂಬಿಕೆಯ ಪುನರ್ ದೃಢೀಕರಣ ಮತ್ತು ಒಳಗೊಳ್ಳುವ ಆಡಳಿತದ ಎಎಪಿ ಕಲ್ಪನೆಯ ಪ್ರತಿಬಿಂಬವಾಗಿದೆ. ವಿಎಪಿ ಸಂಸ್ಕೃತಿ ಮತ್ತು ಸೆಲೆಬ್ರಿಟಿಗಳ ಅನುಮೋದನೆಯನ್ನು ಎಎಪಿ ನಂಬುವುದಿಲ್ಲ ಎಂಬ ದೊಡ್ಡ ರಾಜಕೀಯ ಸಂದೇಶವನ್ನೂ ಇದು ಕಳುಹಿಸುತ್ತದೆ. ಇದಕ್ಕೆ ತದ್ವಿರುದ್ಧವಾಗಿ ಅದೇ ಜಾಗವನ್ನು ಸಾಮಾನ್ಯರೊಂದಿಗೆ ಹಂಚಿಕೊಳ್ಳಲು ಮತ್ತು ಹೊಸ ರಾಜಕೀಯ ಇನ್ನಿಂಗ್ಸ್‌ಗಾಗಿ ಅವರ ಆಶೀರ್ವಾದ ಪಡೆಯಲು ಎಎಪಿ ಬಯಸಿದೆ ಎಂದು ಅವರು ಹೇಳಿದ್ದಾರೆ.

ಎಎಪಿಯ ಈ ವಿನೂತನ ಯೋಜನೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿಯ ಮಾಧ್ಯಮ ವಕ್ತಾರ ನೀಲಕಂತ್ ಬಕ್ಷಿ, “ಇದು ಅವರ ಪ್ರದರ್ಶನ. ಅವರು ಬಯಸಿದ್ದನ್ನು ಅವರು ಮಾಡಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...