Homeಮುಖಪುಟ60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

60 ಜನಸಾಮಾನ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ವಿನೂತನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೇಜ್ರಿವಾಲ್‌ ಸಜ್ಜು..

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರಿದ್ದಾರೆ.

- Advertisement -
- Advertisement -

ಭಾನುವಾರ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರು ’ದೆಹಲಿಯ ನಿರ್ಮಾತೃಗಳು’ ಎಂದು ಕರೆಯಲ್ಪಡುವ 60 ಜನರ ಗುಂಪಿನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಮೂಲಕ ಆಮ್‌ ಆದ್ಮಿ ಪಾರ್ಟಿ ಹುಟ್ಟಿದ ರಾಮ್‌ಲೀಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯವಾಗಿ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಪಕ್ಷಗಳ ಮುಖಂಡರನ್ನು ಆಹ್ವಾನಿಸದಿರುವುದು ಗಮನಾರ್ಹವಾಗಿದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಗರದ ಏಳು ಬಿಜೆಪಿ ಸಂಸದರಿಗೆ ಆಹ್ವಾನವನ್ನು ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಮುಖಂಡ ಗೋಪಾಲ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಪಿಎಂಒಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಪಕ್ಷದ ಇತರ ಹಿರಿಯ ಸದಸ್ಯರು ಪ್ರಧಾನಮಂತ್ರಿಯ ಆಹ್ವಾನ ಕೇವಲ “ಪ್ರೋಟೋಕಾಲ್” ಎಂದು ಹೇಳಿದ್ದಾರೆ. ಆದಾಗ್ಯೂ, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಪ್ರಧಾನಿ ಕಚೇರಿಯ ವೇಳಾಪಟ್ಟಿಯ ಪ್ರಕಾರ, 30 ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಗೆ ಭಾನುವಾರ ಪ್ರಯಾಣಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಸಾಮಾನ್ಯರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವ ವಿಚಾರದ ಕುರಿತು ತ್ವರಿತ ಕರಡನ್ನು – ‘ದೆಹಲಿ ಕೆ ನಿರ್ಮಾತಾ’ ಬ್ಯಾನರ್ ಅಡಿಯಲ್ಲಿ – ಕೇಜ್ರಿವಾಲ್ ಅವರ ಕಚೇರಿಗೆ ಶುಕ್ರವಾರ ಕಳುಹಿಸಲಾಗಿದೆ ಎಂದು ಎಎಪಿ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಈ 60 ಜನರ ಗುಂಪಿನಲ್ಲಿ ವೈದ್ಯರು, ಶಿಕ್ಷಕರು, ಪೌರ ಕಾರ್ಮಿಕರು, ಬಸ್ ಕಂಡಕ್ಟರ್‌ಗಳು, ಬಸ್ ಚಾಲಕರು, ಮಹಿಳಾ ಭದ್ರತೆಗಾಗಿ ನಿಯೋಜಿಸಲಾದ ಮಾರ್ಷಲ್‌ಗಳು, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ಐಐಟಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಪಿಡಬ್ಲ್ಯೂಡಿ ಎಂಜಿನಿಯರ್‌ಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ವಿತರಣಾ ಏಜಂಟು ಸೇರಿದ್ದಾರೆ ಎನ್ನಲಾಗುತ್ತಿದೆ.

“ಅತಿಥಿಗಳನ್ನು ತಮ್ಮ ಉದ್ಯೋಗಗಳಲ್ಲಿನ ಸಾಧನೆಯ ಆಧಾರದ ಮೇಲೆ ಸರ್ಕಾರಗಳು, ನಾಗರಿಕ ಸಂಸ್ಥೆಗಳು ಅಥವಾ ಮಾಧ್ಯಮಗಳು ಅಥವಾ ಕೆಲವು ಸಂದರ್ಭಗಳಲ್ಲಿ ವಿಭಾಗದ ಮುಖ್ಯಸ್ಥರಿಂದ ಉಲ್ಲೇಖದ ಆಧಾರದ ಮೇಲೆ ಆಯ್ಕೆಯಾಗಿದ್ದಾರೆ” ಎಂದು ಹಿರಿಯ ಎಎಪಿ ಮುಖಂಡರು ಹೇಳಿದರು.

ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯೇತರ ಆಡಳಿತದ ರಾಜ್ಯಗಳಿಂದ ಬೇರೆ ಯಾವುದೇ ಮುಖ್ಯಮಂತ್ರಿ ಅಥವಾ ರಾಜಕೀಯ ಮುಖಂಡರನ್ನು ಆಹ್ವಾನಿಸದಿರುವುದು, ಈ ಸಮಯದಲ್ಲಿ ಪಕ್ಷವು ಯಾವುದೇ ಸೈದ್ಧಾಂತಿಕ ವಯಲದೊಂದಿಗೆ ಗುರುತಿಸಿಕೊಳ್ಳದಿರಲು ಬಯಸುವುದಿಲ್ಲ ಎಂಬುದರ ಸ್ಪಷ್ಟ ಸಂಕೇತವಾಗಿದೆ ಎಂದು ಅಭಿವೃದ್ಧಿಶೀಲ ಸಂಘಗಳ ಅಧ್ಯಯನ ಕೇಂದ್ರದ ರಾಜಕೀಯ ವಿಶ್ಲೇಷಕ ಪ್ರವೀಣ್ ರೈ ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ತನ್ನೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಸಾಮಾನ್ಯ ಜನರನ್ನು ಆಹ್ವಾನಿಸುವ ಮಟ್ಟಿಗೆ, ಇದು ದೆಹಲಿಯ ನಾಗರಿಕರ ಮೇಲಿನ ನಂಬಿಕೆಯ ಪುನರ್ ದೃಢೀಕರಣ ಮತ್ತು ಒಳಗೊಳ್ಳುವ ಆಡಳಿತದ ಎಎಪಿ ಕಲ್ಪನೆಯ ಪ್ರತಿಬಿಂಬವಾಗಿದೆ. ವಿಎಪಿ ಸಂಸ್ಕೃತಿ ಮತ್ತು ಸೆಲೆಬ್ರಿಟಿಗಳ ಅನುಮೋದನೆಯನ್ನು ಎಎಪಿ ನಂಬುವುದಿಲ್ಲ ಎಂಬ ದೊಡ್ಡ ರಾಜಕೀಯ ಸಂದೇಶವನ್ನೂ ಇದು ಕಳುಹಿಸುತ್ತದೆ. ಇದಕ್ಕೆ ತದ್ವಿರುದ್ಧವಾಗಿ ಅದೇ ಜಾಗವನ್ನು ಸಾಮಾನ್ಯರೊಂದಿಗೆ ಹಂಚಿಕೊಳ್ಳಲು ಮತ್ತು ಹೊಸ ರಾಜಕೀಯ ಇನ್ನಿಂಗ್ಸ್‌ಗಾಗಿ ಅವರ ಆಶೀರ್ವಾದ ಪಡೆಯಲು ಎಎಪಿ ಬಯಸಿದೆ ಎಂದು ಅವರು ಹೇಳಿದ್ದಾರೆ.

ಎಎಪಿಯ ಈ ವಿನೂತನ ಯೋಜನೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿಯ ಮಾಧ್ಯಮ ವಕ್ತಾರ ನೀಲಕಂತ್ ಬಕ್ಷಿ, “ಇದು ಅವರ ಪ್ರದರ್ಶನ. ಅವರು ಬಯಸಿದ್ದನ್ನು ಅವರು ಮಾಡಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...