Homeಮುಖಪುಟವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

ವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

- Advertisement -
- Advertisement -

ದೆಹಲಿ ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಹುಮತ ಸಾಬೀತುಪಡಿಸಿದ್ದಾರೆ.

ಒಟ್ಟು 62 ಎಎಪಿ ಶಾಸಕರ ಪೈಕಿ 54 ಮಂದಿ ವಿಶ್ವಾಸ ಮತಯಾಚನೆ ವೇಳೆ ಹಾಜರಿದ್ದರು. ಎಲ್ಲರೂ ಮುಖ್ಯಮಂತ್ರಿ ಪರ ಮತ ಚಲಾಯಿಸಿದ್ದಾರೆ. “ನಮ್ಮ ಯಾವುದೇ ಶಾಸಕ ಪಕ್ಷಾಂತರ ಮಾಡಿಲ್ಲ. ಇಬ್ಬರು ಶಾಸಕರು ಜೈಲಿನಲ್ಲಿದ್ದಾರೆ, ಕೆಲವರಿಗೆ ಅನಾರೋಗ್ಯವಿದೆ, ಇನ್ನೂ ಕೆಲವರು ಹೊರಗಿದ್ದಾರೆ” ಎಂದು ವಿಶ್ವಾಸಮತ ಗೆದ್ದ ಬಳಿಕ ಕೇಜ್ರಿವಾಲ್ ಹೇಳಿದ್ದಾರೆ.

“ನಮ್ಮ ಸರ್ಕಾರಕ್ಕೆ ಬಹುಮತವಿತ್ತು. ಆದರೆ, ಬಿಜೆಪಿ ಕೆಲ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದೆ. ಈ ಕಾರಣಕ್ಕೆ ವಿಶ್ವಾಸಮತ ಯಾಚನೆಯ ಅಗತ್ಯ ಬಂತು” ಎಂದಿದ್ದಾರೆ.

“ನಮ್ಮ ಕೆಲ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಕ್ಷಾಂತರ ಮಾಡಲು ಹಣದ ಆಮಿಷವೊಡ್ಡಿದ್ದಾರೆ. ಸುಮಾರು ಏಳು ಮಂದಿ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಆಫರ್ ನೀಡಲಾಗಿದೆ. ನನ್ನನ್ನು ಬಂಧಿಸುವ ಮೂಲಕ ಸರ್ಕಾರವನ್ನು ಉರುಳಿಸಬಹುದು ಎಂದು ಬಿಜೆಪಿ ತಂತ್ರ ಹೂಡುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ನೀವು ನನ್ನನ್ನು ಬಂಧಿಸಬಹುದು. ಆದರೆ, ನನ್ನ ಆಲೋಚನೆಗಳನ್ನು ಹೇಗೆ ಬಂಧಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಎಎಪಿ ಬಿಜೆಪಿಗೆ ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಅದು ಎಲ್ಲಾ ಕಡೆಯಿಂದ ದಾಳಿಗೆ ಒಳಗಾಗುತ್ತಿದೆ. ನಮ್ಮ ಮಂತ್ರಿಗಳನ್ನು ಬಂಧಿಸಿದ್ದಾರೆ. ದೇಶದಾದ್ಯಂತ ಜನರಿಗೆ ಇದರ ಅರಿವಿದೆ. ಜನರು ಮೂರ್ಖರು ಎಂದು ಅವರು ಭಾವಿಸಿದ್ದಾರೆ. ಆದರೆ, ಅದು ಅವರ ತಪ್ಪು ಕಲ್ಪನೆ. ಮೋದಿ ಅವರು ಅರವಿಂದ್ ಕೇಜ್ರಿವಾಲ್‌ ಅನ್ನು ಹತ್ತಿಕಲು ಯತ್ನಿಸುತ್ತಿದ್ದಾರೆ ಎಂದು ಇತ್ತೀಚೆಗೆ ಪಾರ್ಕ್‌, ಗ್ರೌಂಡ್‌ಗಳಲ್ಲಿಯೂ ಚರ್ಚೆ ನಡೆಯುತ್ತಿದೆ. ಮಕ್ಕಳು ಕೂಡ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಗರು ತಮ್ಮನ್ನು ತಾವು ರಾಮಭಕ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ, ನಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಔಷಧಿ ಸರಬರಾಜು ನಿಲ್ಲಿಸಿದ್ದಾರೆ. ಬಡವರಿಗಾಗಿ ಇರುವ ಔಷಧಿಗಳನ್ನು ತಡೆಯುವಂತೆ ಭಗವಾನ್ ರಾಮ ನಿಮ್ಮತ್ರ ಹೇಳಿದ್ದಾನಾ? ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ. 2029ರ ಒಳಗೆ ದೇಶವನ್ನು ಬಿಜೆಪಿ ಮುಕ್ತ ಮಾಡುವುದಾಗಿ ಶಪಥ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಇಂದು (ಫೆ.17) ಬೆಳಿಗ್ಗೆ ರೂಸ್ ಅವೆನ್ಯೂ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಮಧ್ಯಾಹ್ನದ ಬಳಿಕ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ನಮ್ಮ ಸರ್ಕಾರ ಸುಭದ್ರವಾಗಿದೆ. ಎಲ್ಲಾ ಶಾಸಕರು ಜೊತೆಗಿದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...