Homeಮುಖಪುಟವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

ವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

- Advertisement -
- Advertisement -

ದೆಹಲಿ ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಹುಮತ ಸಾಬೀತುಪಡಿಸಿದ್ದಾರೆ.

ಒಟ್ಟು 62 ಎಎಪಿ ಶಾಸಕರ ಪೈಕಿ 54 ಮಂದಿ ವಿಶ್ವಾಸ ಮತಯಾಚನೆ ವೇಳೆ ಹಾಜರಿದ್ದರು. ಎಲ್ಲರೂ ಮುಖ್ಯಮಂತ್ರಿ ಪರ ಮತ ಚಲಾಯಿಸಿದ್ದಾರೆ. “ನಮ್ಮ ಯಾವುದೇ ಶಾಸಕ ಪಕ್ಷಾಂತರ ಮಾಡಿಲ್ಲ. ಇಬ್ಬರು ಶಾಸಕರು ಜೈಲಿನಲ್ಲಿದ್ದಾರೆ, ಕೆಲವರಿಗೆ ಅನಾರೋಗ್ಯವಿದೆ, ಇನ್ನೂ ಕೆಲವರು ಹೊರಗಿದ್ದಾರೆ” ಎಂದು ವಿಶ್ವಾಸಮತ ಗೆದ್ದ ಬಳಿಕ ಕೇಜ್ರಿವಾಲ್ ಹೇಳಿದ್ದಾರೆ.

“ನಮ್ಮ ಸರ್ಕಾರಕ್ಕೆ ಬಹುಮತವಿತ್ತು. ಆದರೆ, ಬಿಜೆಪಿ ಕೆಲ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದೆ. ಈ ಕಾರಣಕ್ಕೆ ವಿಶ್ವಾಸಮತ ಯಾಚನೆಯ ಅಗತ್ಯ ಬಂತು” ಎಂದಿದ್ದಾರೆ.

“ನಮ್ಮ ಕೆಲ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಕ್ಷಾಂತರ ಮಾಡಲು ಹಣದ ಆಮಿಷವೊಡ್ಡಿದ್ದಾರೆ. ಸುಮಾರು ಏಳು ಮಂದಿ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಆಫರ್ ನೀಡಲಾಗಿದೆ. ನನ್ನನ್ನು ಬಂಧಿಸುವ ಮೂಲಕ ಸರ್ಕಾರವನ್ನು ಉರುಳಿಸಬಹುದು ಎಂದು ಬಿಜೆಪಿ ತಂತ್ರ ಹೂಡುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ನೀವು ನನ್ನನ್ನು ಬಂಧಿಸಬಹುದು. ಆದರೆ, ನನ್ನ ಆಲೋಚನೆಗಳನ್ನು ಹೇಗೆ ಬಂಧಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಎಎಪಿ ಬಿಜೆಪಿಗೆ ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಅದು ಎಲ್ಲಾ ಕಡೆಯಿಂದ ದಾಳಿಗೆ ಒಳಗಾಗುತ್ತಿದೆ. ನಮ್ಮ ಮಂತ್ರಿಗಳನ್ನು ಬಂಧಿಸಿದ್ದಾರೆ. ದೇಶದಾದ್ಯಂತ ಜನರಿಗೆ ಇದರ ಅರಿವಿದೆ. ಜನರು ಮೂರ್ಖರು ಎಂದು ಅವರು ಭಾವಿಸಿದ್ದಾರೆ. ಆದರೆ, ಅದು ಅವರ ತಪ್ಪು ಕಲ್ಪನೆ. ಮೋದಿ ಅವರು ಅರವಿಂದ್ ಕೇಜ್ರಿವಾಲ್‌ ಅನ್ನು ಹತ್ತಿಕಲು ಯತ್ನಿಸುತ್ತಿದ್ದಾರೆ ಎಂದು ಇತ್ತೀಚೆಗೆ ಪಾರ್ಕ್‌, ಗ್ರೌಂಡ್‌ಗಳಲ್ಲಿಯೂ ಚರ್ಚೆ ನಡೆಯುತ್ತಿದೆ. ಮಕ್ಕಳು ಕೂಡ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಗರು ತಮ್ಮನ್ನು ತಾವು ರಾಮಭಕ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ, ನಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಔಷಧಿ ಸರಬರಾಜು ನಿಲ್ಲಿಸಿದ್ದಾರೆ. ಬಡವರಿಗಾಗಿ ಇರುವ ಔಷಧಿಗಳನ್ನು ತಡೆಯುವಂತೆ ಭಗವಾನ್ ರಾಮ ನಿಮ್ಮತ್ರ ಹೇಳಿದ್ದಾನಾ? ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ. 2029ರ ಒಳಗೆ ದೇಶವನ್ನು ಬಿಜೆಪಿ ಮುಕ್ತ ಮಾಡುವುದಾಗಿ ಶಪಥ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಇಂದು (ಫೆ.17) ಬೆಳಿಗ್ಗೆ ರೂಸ್ ಅವೆನ್ಯೂ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಮಧ್ಯಾಹ್ನದ ಬಳಿಕ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ನಮ್ಮ ಸರ್ಕಾರ ಸುಭದ್ರವಾಗಿದೆ. ಎಲ್ಲಾ ಶಾಸಕರು ಜೊತೆಗಿದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...