Homeಮುಖಪುಟ"ಕೇಜ್ರಿವಾಲ್ ಕಿ ಗ್ಯಾರಂಟಿ" ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

“ಕೇಜ್ರಿವಾಲ್ ಕಿ ಗ್ಯಾರಂಟಿ” ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

- Advertisement -
- Advertisement -

ಲೋಕಸಭೆ ಚುನಾವಣೆಯ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೇಶದ ಜನರಿಗೆ ಭರಪೂರ ಭರವಸೆಯನ್ನು ನೀಡುವ “ಕೇಜ್ರಿವಾಲ್ ಕಿ ಗ್ಯಾರಂಟಿ” ಯೋಜನೆಯನ್ನು ಘೋಷಿಸಿದ್ದಾರೆ.

ಭಾನುವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ತಮ್ಮ ’10 ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ. ದೇಶಾದ್ಯಂತ 24 ಗಂಟೆಗಳ ಕಾಲ ಉಚಿತ ವಿದ್ಯುತ್, ಉಚಿತ ಶಿಕ್ಷಣ ಮತ್ತು ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಮತ್ತು ಭಾರತದ ಗಡಿಯಲ್ಲಿ ಚೀನಾ ವಶಪಡಿಸಿಕೊಂಡಿದೆ ಎನ್ನಲಾದ ಭೂಮಿಯನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದಾರೆ.

ಈ ಖಾತರಿಗಳ ಬಗ್ಗೆ ಇತರ ಇಂಡಿಯಾ ಬ್ಲಾಕ್ ಪಾಲುದಾರರೊಂದಿಗೆ ಚರ್ಚಿಸಿಲ್ಲ, ಆದರೆ ಯಾರಿಗೂ ಯಾವುದೇ ತಕರಾರು ಇಲ್ಲ ಎಂದು ಭಾವಿಸಿರುವುದಾಗಿ ಕೇಜ್ರಿವಾಲ್‌ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ ನಂತರ, ಈ ಭರವಸೆಗಳನ್ನು ಕಾರ್ಯಗತಗೊಳಿಸುವುದನ್ನು ನಾನು ಖಚಿತಪಡಿಸಿಕೊಳ್ಳುತ್ತೇನೆ ಕೇಜ್ರಿವಾಲ್‌ ಹೇಳಿದ್ದಾರೆ.

“ಕೇಜ್ರಿವಾಲ್ ಕಿ ಗ್ಯಾರಂಟಿ”ಯಡಿಯಲ್ಲಿನ 10 ಗ್ಯಾರೆಂಟಿಗಳು

ವಿದ್ಯುಚ್ಛಕ್ತಿ ಖಾತ್ರಿ: ದೇಶದಾದ್ಯಂತ ಮೊದಲ 200 ಯೂನಿಟ್ ವಿದ್ಯುತ್ ಉಚಿತದೊಂದಿಗೆ 24-ಗಂಟೆಗಳ ಕಾಲ ವಿದ್ಯುತ್ ಸರಬರಾಜು.

ಶಿಕ್ಷಣ ಖಾತ್ರಿ: ಎಲ್ಲರಿಗೂ ಉಚಿತ ಶಿಕ್ಷಣದ ವ್ಯವಸ್ಥೆ ಮಾಡುವ ಮತ್ತು ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಭರವಸೆ.

ಆರೋಗ್ಯ ಖಾತ್ರಿ: ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಕಲ್ಪಿಸುವ ಭರವಸೆ.

ಚೀನಾ ಆಕ್ರಮಿಸಿಕೊಂಡಿರುವ ಭಾರತದ ಭೂಮಿಯನ್ನು ಮುಕ್ತಗೊಳಿಸುವ  ಗ್ಯಾರಂಟಿ: ಭಾರತದ ಭೂಮಿಯನ್ನು ಚೀನಾದಿಂದ ಮುಕ್ತಗೊಳಿಸಲಾಗುವುದು, ಸೇನೆಗೆ ಮುಕ್ತ ಕಾರ್ಯ ನಿರ್ವಹಣೆಗೆ ಅವಕಾಶ ನೀಡುವ ಭರವಸೆ.

ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರಂಟಿ: ನರೇಂದ್ರ ಮೋದಿ ಸರ್ಕಾರ ಆರಂಭಿಸಿದ ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರೆಂಟಿ.

MSPಯ ಖಾತರಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರೆಂಟಿ.

ರಾಜ್ಯದ ಸ್ಥಾನಮಾನದ ಭರವಸೆ: ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನದ ಭರವಸೆ.

ಉದ್ಯೋಗ ಖಾತ್ರಿ: ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಯೋಜನೆ.

ಭ್ರಷ್ಟಾಚಾರದ ವಿರುದ್ಧ ಕ್ರಮ: ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಭರವಸೆ.

GST ಮೇಲೆ ಗ್ಯಾರಂಟಿ: ಸರಕು ಮತ್ತು ಸೇವಾ ತೆರಿಗೆಯನ್ನು (GST) ಸರಳಗೊಳಿಸುವ ಯೋಜನೆಗಳನ್ನು ಜಾರಿಗೆ ತರುವ ಭರವಸೆಯನ್ನು ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಉಪಸ್ಥಿತರಿದ್ದರು. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಬಿಡಗಡೆಯಾಗಿದ್ದರು. ನಿನ್ನೆ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...