Homeಮುಖಪುಟ"ಕೇಜ್ರಿವಾಲ್ ಕಿ ಗ್ಯಾರಂಟಿ" ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

“ಕೇಜ್ರಿವಾಲ್ ಕಿ ಗ್ಯಾರಂಟಿ” ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

- Advertisement -
- Advertisement -

ಲೋಕಸಭೆ ಚುನಾವಣೆಯ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೇಶದ ಜನರಿಗೆ ಭರಪೂರ ಭರವಸೆಯನ್ನು ನೀಡುವ “ಕೇಜ್ರಿವಾಲ್ ಕಿ ಗ್ಯಾರಂಟಿ” ಯೋಜನೆಯನ್ನು ಘೋಷಿಸಿದ್ದಾರೆ.

ಭಾನುವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ತಮ್ಮ ’10 ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ. ದೇಶಾದ್ಯಂತ 24 ಗಂಟೆಗಳ ಕಾಲ ಉಚಿತ ವಿದ್ಯುತ್, ಉಚಿತ ಶಿಕ್ಷಣ ಮತ್ತು ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಮತ್ತು ಭಾರತದ ಗಡಿಯಲ್ಲಿ ಚೀನಾ ವಶಪಡಿಸಿಕೊಂಡಿದೆ ಎನ್ನಲಾದ ಭೂಮಿಯನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದಾರೆ.

ಈ ಖಾತರಿಗಳ ಬಗ್ಗೆ ಇತರ ಇಂಡಿಯಾ ಬ್ಲಾಕ್ ಪಾಲುದಾರರೊಂದಿಗೆ ಚರ್ಚಿಸಿಲ್ಲ, ಆದರೆ ಯಾರಿಗೂ ಯಾವುದೇ ತಕರಾರು ಇಲ್ಲ ಎಂದು ಭಾವಿಸಿರುವುದಾಗಿ ಕೇಜ್ರಿವಾಲ್‌ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ ನಂತರ, ಈ ಭರವಸೆಗಳನ್ನು ಕಾರ್ಯಗತಗೊಳಿಸುವುದನ್ನು ನಾನು ಖಚಿತಪಡಿಸಿಕೊಳ್ಳುತ್ತೇನೆ ಕೇಜ್ರಿವಾಲ್‌ ಹೇಳಿದ್ದಾರೆ.

“ಕೇಜ್ರಿವಾಲ್ ಕಿ ಗ್ಯಾರಂಟಿ”ಯಡಿಯಲ್ಲಿನ 10 ಗ್ಯಾರೆಂಟಿಗಳು

ವಿದ್ಯುಚ್ಛಕ್ತಿ ಖಾತ್ರಿ: ದೇಶದಾದ್ಯಂತ ಮೊದಲ 200 ಯೂನಿಟ್ ವಿದ್ಯುತ್ ಉಚಿತದೊಂದಿಗೆ 24-ಗಂಟೆಗಳ ಕಾಲ ವಿದ್ಯುತ್ ಸರಬರಾಜು.

ಶಿಕ್ಷಣ ಖಾತ್ರಿ: ಎಲ್ಲರಿಗೂ ಉಚಿತ ಶಿಕ್ಷಣದ ವ್ಯವಸ್ಥೆ ಮಾಡುವ ಮತ್ತು ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಭರವಸೆ.

ಆರೋಗ್ಯ ಖಾತ್ರಿ: ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಕಲ್ಪಿಸುವ ಭರವಸೆ.

ಚೀನಾ ಆಕ್ರಮಿಸಿಕೊಂಡಿರುವ ಭಾರತದ ಭೂಮಿಯನ್ನು ಮುಕ್ತಗೊಳಿಸುವ  ಗ್ಯಾರಂಟಿ: ಭಾರತದ ಭೂಮಿಯನ್ನು ಚೀನಾದಿಂದ ಮುಕ್ತಗೊಳಿಸಲಾಗುವುದು, ಸೇನೆಗೆ ಮುಕ್ತ ಕಾರ್ಯ ನಿರ್ವಹಣೆಗೆ ಅವಕಾಶ ನೀಡುವ ಭರವಸೆ.

ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರಂಟಿ: ನರೇಂದ್ರ ಮೋದಿ ಸರ್ಕಾರ ಆರಂಭಿಸಿದ ಅಗ್ನಿವೀರ್ ಯೋಜನೆ ರದ್ದುಗೊಳಿಸುವ ಗ್ಯಾರೆಂಟಿ.

MSPಯ ಖಾತರಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರೆಂಟಿ.

ರಾಜ್ಯದ ಸ್ಥಾನಮಾನದ ಭರವಸೆ: ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನದ ಭರವಸೆ.

ಉದ್ಯೋಗ ಖಾತ್ರಿ: ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಯೋಜನೆ.

ಭ್ರಷ್ಟಾಚಾರದ ವಿರುದ್ಧ ಕ್ರಮ: ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಭರವಸೆ.

GST ಮೇಲೆ ಗ್ಯಾರಂಟಿ: ಸರಕು ಮತ್ತು ಸೇವಾ ತೆರಿಗೆಯನ್ನು (GST) ಸರಳಗೊಳಿಸುವ ಯೋಜನೆಗಳನ್ನು ಜಾರಿಗೆ ತರುವ ಭರವಸೆಯನ್ನು ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಉಪಸ್ಥಿತರಿದ್ದರು. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಬಿಡಗಡೆಯಾಗಿದ್ದರು. ನಿನ್ನೆ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...