Homeಮುಖಪುಟಅರವಿಂದ್ ಕೇಜ್ರಿವಾಲ್ ಬಂಧನದಿಂದ ಬಿಜೆಪಿಗೆ ವಿಶ್ವದಾದ್ಯಂತ ಅವಮಾನ: ಅಖಿಲೇಶ್ ಯಾದವ್

ಅರವಿಂದ್ ಕೇಜ್ರಿವಾಲ್ ಬಂಧನದಿಂದ ಬಿಜೆಪಿಗೆ ವಿಶ್ವದಾದ್ಯಂತ ಅವಮಾನ: ಅಖಿಲೇಶ್ ಯಾದವ್

- Advertisement -
- Advertisement -

‘ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಶ್ವದಾದ್ಯಂತ ನಾಚಿಕೆಪಡುತ್ತಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.

ವಿರೋಧ ಪಕ್ಷದ ಇಂಡಿಯಾ ಬ್ಲಾಕ್‌ನ ಮೆಗಾ ರ್ಯಾಲಿಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ಆಗಮಿಸಿದ ಅಖಿಲೇಶ್ ಯಾದವ್, ಚುನಾವಣಾ ಬಾಂಡ್‌ಗಳ ವಿಷಯವಾಗಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು, ಬಿಜೆಪಿ ಹೇಳಿದಷ್ಟು ಸುಳ್ಳುಗಳನ್ನು ವಿಶ್ವದಲ್ಲಿ ಯಾರೂ ಹೇಳುವುದಿಲ್ಲ ಎಂದು ಹೇಳಿದರು.

“ಬಿಜೆಪಿಯ ಕಳವಳವೆಂದರೆ ಅದು ಅಧಿಕಾರದಿಂದ ಹೋಗುತ್ತಿದೆ ಎಂಬುದು” ಎಂದು ಯಾದವ್ ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇಂದು ಮೀರತ್‌ನಲ್ಲಿ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿ ಮತ್ತು ದೆಹಲಿಯಲ್ಲಿ ಪ್ರತಿಪಕ್ಷಗಳ ರ್ಯಾಲಿಯನ್ನು ಉಲ್ಲೇಖಿಸಿದ ಎಸ್‌ಪಿ ಮುಖ್ಯಸ್ಥರು, ಇದು ಯಾರು ಅಧಿಕಾರಕ್ಕೆ ಬರುತ್ತಾರೆ ಮತ್ತು ಯಾರು ಹೊರಬರುತ್ತಾರೆ ಎಂಬುದರ ಸಂಕೇತವಾಗಿದೆ ಎಂದು ಹೇಳಿದ್ದಾರೆ.

“ಇಡಿ, ಸಿಬಿಐ ಮತ್ತು ಐಟಿ ನಿಯೋಜಿಸಿ ದೇಣಿಗೆ ಸಂಗ್ರಹಿಸಲಾಗಿದೆ ಎಂಬುದು ಹೊಸ ಆವಿಷ್ಕಾರವಾಗಿದೆ. ವಿಶ್ವದಲ್ಲಿ ಬಿಜೆಪಿಯವರಷ್ಟು ಸುಳ್ಳು ಯಾರೂ ಹೇಳಿಲ್ಲ. ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ಬಿಜೆಪಿಗೆ ವಿಶ್ವದಾದ್ಯಂತ ನಾಚಿಕೆಯಾಗುತ್ತಿದೆ” ಎಂದು ಹೇಳಿದರು.

ಕೇಜ್ರಿವಾಲ್ ಅವರ ಬಂಧನ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ವಿರುದ್ಧ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ನಡೆದ ಇಂಡಿಯಾ ಬ್ಲಾಕ್ ನಾಯಕರ ರ್ಯಾಲಿಯಲ್ಲಿ ಪಾಲ್ಗೊಳ್ಳಲು ವಿರೋಧ ಪಕ್ಷದ ನಾಯಕರು ಐತಿಹಾಸಿಕ ರಾಮಲೀಲಾ ಮೈದಾನಕ್ಕೆ ಆಗಮಿಸಲು ಪ್ರಾರಂಭಿಸಿದ್ದಾರೆ.

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್, ಉದ್ಧವ್ ಠಾಕ್ರೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ ಭಾರತದ ಪ್ರಮುಖ ನಾಯಕರು ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಸಿದ್ಧರಾಗಿದ್ದಾರೆ.

ಆದರೆ, ಇಂಡಿಯಾ ಒಕ್ಕೂಟದ ರ್ಯಾಲಿಯನ್ನು ಭ್ರಷ್ಟಾಚಾರವನ್ನು ಮರೆಮಾಚುವ ಪ್ರಯತ್ನ ಎಂದು ಬಿಜೆಪಿ ಬಣ್ಣಿಸಿದೆ. “ಇದು ಯಾವ ರ್ಯಾಲಿ? ಇದು ‘ಭ್ರಷ್ಟಾಚಾರ್ ಬಚಾವೋ ಆಂದೋಲನ’ ಹೊರತು ಬೇರೇನೂ ಅಲ್ಲ, ಇದರ ಘೋಷಣೆಯು ‘ಕರೇಂಗೆ ಹಮ್ ಭ್ರಷ್ಟಾಚಾರ್, ಕಹೆಂಗೆ ಇಸ್ಕೋ ಶಿಷ್ಟಾಚಾರ್, ಕರವೇ (ತನಿಖೆ) ನಡೆದಾಗ, ಹಮ್ ಚಿಲಯೇಂಗೆ ಅತ್ಯಚಾರ್, ಅತ್ಯಚಾರ್’ ಆಗಿರಬಹುದು” ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಲ್ಲ ಹೇಳಿದರು.

ಇದನ್ನೂ ಓದಿ; ರಾಜ್ಯಪಾಲರು ಸಂವಿಧಾನದ ಪ್ರಕಾರ ನಡೆದುಕೊಳ್ಳಬೇಕು: ನ್ಯಾಯಮೂರ್ತಿ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...