Homeಮುಖಪುಟಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

ಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಬಂಧನ ಬಿಜೆಪಿಯ ಶವಪಟ್ಟಿಗೆಗಿರುವ ಕೊನೆಯ ಮೊಳೆ, ಎಎಪಿಯ ಉಪವಾಸ ಸತ್ಯಾಗ್ರಹ ಬಿಜೆಪಿಗರ ನಿದ್ದೆಗೆಡಿಸಿದೆ ಎಂದು ಎಎಪಿ ಹೇಳಿಕೊಂಡಿದೆ.

ಅರವಿಂದ್ ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿ ಎಎಪಿಯ ಹಿರಿಯ ನಾಯಕರು, ದೆಹಲಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ಶಾಸಕರು ಭಾನುವಾರ ಜಂತರ್ ಮಂತರ್‌ನಲ್ಲಿ ಸಾಮೂಹಿಕವಾಗಿ ಉಪಾಸ ಕೈಗೊಂಡಿದ್ದರು. ಈ ವೇಳೆ ಬಿಜೆಪಿ ಸರ್ವಾಧಿಕಾರ ಧೋರಣೆಯನ್ನು ತೋರುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ “ಜನರು ತಮ್ಮ ಮತಗಳ ಮೂಲಕ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ. .

ಬೆಳಿಗ್ಗೆ 11 ಗಂಟೆಗೆ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು. ಪ್ರತಿಭಟನೆಯಲ್ಲಿ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಉಪ ಸ್ಪೀಕರ್ ರಾಖಿ ಬಿರ್ಲಾ, ಕ್ಯಾಬಿನೆಟ್ ಸಚಿವರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ಅತಿಶಿ, ಕೈಲಾಶ್ ಗಹ್ಲೋಟ್, ಇಮ್ರಾನ್ ಹುಸೇನ್, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ದೆಹಲಿಯ ಸಚಿವೆ ಪ್ರತಿಭಟನೆಯ ವೇಳೆ ಮಾತನಾಡಿದ್ದು, ಬಿಜೆಪಿ ಸರ್ವಾಧಿಕಾರವನ್ನು ಆಶ್ರಯಿಸುತ್ತಿದೆ. ಎಎಪಿಯ ಉಪವಾಸವು ಬಿಜೆಪಿಗೆ “ನಿದ್ರೆಯಿಲ್ಲದ ರಾತ್ರಿಗಳನ್ನು” ನೀಡುತ್ತಿದೆ. ಕೇಜ್ರಿವಾಲ್ ಬಂಧನವು ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಸ್ವಾತಂತ್ರ್ಯದ ಮೊದಲು, ಮಹಾತ್ಮರ ಉಪವಾಸವು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಅಡಿಪಾಯವನ್ನು ಅಲ್ಲಾಡಿಸಿತು. ಇಂದು ಎಎಪಿಯ ಈ ಉಪವಾಸ ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಕಸಿದುಕೊಳ್ಳಲಿದೆ. ಈ ದೇಶ ಈಗ ಎಚ್ಚೆತ್ತುಕೊಂಡಿದೆ, ಸರ್ವಾಧಿಕಾರಿಯ ಅಂತ್ಯ ಹತ್ತಿರವಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಸಂಜಯ್‌ ಸಿಂಗ್ ಮಾತನಾಡಿ, ಸುಳ್ಳು ಸಾಕ್ಷಿಗಳ ಸಹಾಯದಿಂದ ಅಮಾಯಕನನ್ನು ನಕಲಿ ಪ್ರಕರಣದಲ್ಲಿ ಜೈಲಿಗೆ ಹಾಕಲಾಗಿದೆ ಎಂದು ಹೇಳಿದರು. ಕೇಜ್ರಿವಾಲ್ ಅವರನ್ನು ಬೆಂಬಲಿಸಿ ದೇಶದಲ್ಲಿ ಮಾತ್ರವಲ್ಲದೆ ವಿಶ್ವದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದು ನಮ್ಮ ದೊಡ್ಡ ಸಾಧನೆ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ನಮ್ಮ ಸಂದೇಶ ಜನರಿಗೆ ತಲುಪುತ್ತಿದೆ. ನಿಜವಾದ ಮದ್ಯದ ಹಗರಣವನ್ನು ಬಿಜೆಪಿ ಮಾಡಿದ್ದು, ಅದರ ಹಣದ ಜಾಡು ಕೂಡ ಪತ್ತೆಯಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆ ಬಿಜೆಪಿ ನಾಯಕರ ವಿರುದ್ಧ ತನಿಖೆ ನಡೆಸಬೇಕು ಎಂದು ಸಿಂಗ್ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರು ಈಗ ಎಎಪಿಯ ಸಂದೇಶವನ್ನು ತಲುಪಿಸಲು ಮನೆ- ಮನೆಗೆ ತೆರಳುತ್ತಾರೆ ಎಂದು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ‘ಸಿಬಿಐ’ ಮತ್ತು ‘ಇಡಿ’ಯ 456 ಸಾಕ್ಷಿಗಳಲ್ಲಿ ಕೇವಲ ನಾಲ್ವರು ಎಎಪಿ ರಾಷ್ಟ್ರೀಯ ಸಂಚಾಲಕರ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಸಾಕ್ಷಿಗಳು ಯಾವ ಸಂದರ್ಭದಲ್ಲಿ ಕೇಜ್ರಿವಾಲ್ ಹೆಸರನ್ನು ಹೇಳಿದ್ದಾರೆ ಎಂಬುವುದು ಜನರಿಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಪ್ರತಿಭಟನೆಯ ವೇಳೆ ಭಗತ್ ಸಿಂಗ್, ಡಾ ಬಿಆರ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರ ಫೋಟೋಗಳನ್ನು ಹಾಕಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಎಎಪಿ ಕಾರ್ಯಕರ್ತರು ದೇಶಭಕ್ತಿ ಗೀತೆಗಳನ್ನು ಹಾಡುತ್ತಾ, ಕವಿತೆಗಳನ್ನು ಓದುತ್ತಾ, ಕೇಜ್ರಿವಾಲ್ ಅವರ ಪೋಟೋಗಳನ್ನು ಪ್ರದರ್ಶಿಸಿದ್ದಾರೆ. ಎಎಪಿ ರಾಜ್ಯ ಘಟಕಗಳಿಂದ ಇತರ ರಾಜ್ಯಗಳಲ್ಲಿ ಕೂಡ ಇದೇ ರೀತಿಯ ಪ್ರತಿಭಟನೆಗಳು ನಡೆದಿದೆ.

ಇದನ್ನು ಓದಿ: ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...