Homeಮುಖಪುಟಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

ಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಬಂಧನ ಬಿಜೆಪಿಯ ಶವಪಟ್ಟಿಗೆಗಿರುವ ಕೊನೆಯ ಮೊಳೆ, ಎಎಪಿಯ ಉಪವಾಸ ಸತ್ಯಾಗ್ರಹ ಬಿಜೆಪಿಗರ ನಿದ್ದೆಗೆಡಿಸಿದೆ ಎಂದು ಎಎಪಿ ಹೇಳಿಕೊಂಡಿದೆ.

ಅರವಿಂದ್ ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿ ಎಎಪಿಯ ಹಿರಿಯ ನಾಯಕರು, ದೆಹಲಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ಶಾಸಕರು ಭಾನುವಾರ ಜಂತರ್ ಮಂತರ್‌ನಲ್ಲಿ ಸಾಮೂಹಿಕವಾಗಿ ಉಪಾಸ ಕೈಗೊಂಡಿದ್ದರು. ಈ ವೇಳೆ ಬಿಜೆಪಿ ಸರ್ವಾಧಿಕಾರ ಧೋರಣೆಯನ್ನು ತೋರುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ “ಜನರು ತಮ್ಮ ಮತಗಳ ಮೂಲಕ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ. .

ಬೆಳಿಗ್ಗೆ 11 ಗಂಟೆಗೆ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು. ಪ್ರತಿಭಟನೆಯಲ್ಲಿ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಉಪ ಸ್ಪೀಕರ್ ರಾಖಿ ಬಿರ್ಲಾ, ಕ್ಯಾಬಿನೆಟ್ ಸಚಿವರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ಅತಿಶಿ, ಕೈಲಾಶ್ ಗಹ್ಲೋಟ್, ಇಮ್ರಾನ್ ಹುಸೇನ್, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ದೆಹಲಿಯ ಸಚಿವೆ ಪ್ರತಿಭಟನೆಯ ವೇಳೆ ಮಾತನಾಡಿದ್ದು, ಬಿಜೆಪಿ ಸರ್ವಾಧಿಕಾರವನ್ನು ಆಶ್ರಯಿಸುತ್ತಿದೆ. ಎಎಪಿಯ ಉಪವಾಸವು ಬಿಜೆಪಿಗೆ “ನಿದ್ರೆಯಿಲ್ಲದ ರಾತ್ರಿಗಳನ್ನು” ನೀಡುತ್ತಿದೆ. ಕೇಜ್ರಿವಾಲ್ ಬಂಧನವು ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಸ್ವಾತಂತ್ರ್ಯದ ಮೊದಲು, ಮಹಾತ್ಮರ ಉಪವಾಸವು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಅಡಿಪಾಯವನ್ನು ಅಲ್ಲಾಡಿಸಿತು. ಇಂದು ಎಎಪಿಯ ಈ ಉಪವಾಸ ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಕಸಿದುಕೊಳ್ಳಲಿದೆ. ಈ ದೇಶ ಈಗ ಎಚ್ಚೆತ್ತುಕೊಂಡಿದೆ, ಸರ್ವಾಧಿಕಾರಿಯ ಅಂತ್ಯ ಹತ್ತಿರವಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಸಂಜಯ್‌ ಸಿಂಗ್ ಮಾತನಾಡಿ, ಸುಳ್ಳು ಸಾಕ್ಷಿಗಳ ಸಹಾಯದಿಂದ ಅಮಾಯಕನನ್ನು ನಕಲಿ ಪ್ರಕರಣದಲ್ಲಿ ಜೈಲಿಗೆ ಹಾಕಲಾಗಿದೆ ಎಂದು ಹೇಳಿದರು. ಕೇಜ್ರಿವಾಲ್ ಅವರನ್ನು ಬೆಂಬಲಿಸಿ ದೇಶದಲ್ಲಿ ಮಾತ್ರವಲ್ಲದೆ ವಿಶ್ವದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದು ನಮ್ಮ ದೊಡ್ಡ ಸಾಧನೆ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ನಮ್ಮ ಸಂದೇಶ ಜನರಿಗೆ ತಲುಪುತ್ತಿದೆ. ನಿಜವಾದ ಮದ್ಯದ ಹಗರಣವನ್ನು ಬಿಜೆಪಿ ಮಾಡಿದ್ದು, ಅದರ ಹಣದ ಜಾಡು ಕೂಡ ಪತ್ತೆಯಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆ ಬಿಜೆಪಿ ನಾಯಕರ ವಿರುದ್ಧ ತನಿಖೆ ನಡೆಸಬೇಕು ಎಂದು ಸಿಂಗ್ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರು ಈಗ ಎಎಪಿಯ ಸಂದೇಶವನ್ನು ತಲುಪಿಸಲು ಮನೆ- ಮನೆಗೆ ತೆರಳುತ್ತಾರೆ ಎಂದು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ‘ಸಿಬಿಐ’ ಮತ್ತು ‘ಇಡಿ’ಯ 456 ಸಾಕ್ಷಿಗಳಲ್ಲಿ ಕೇವಲ ನಾಲ್ವರು ಎಎಪಿ ರಾಷ್ಟ್ರೀಯ ಸಂಚಾಲಕರ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಸಾಕ್ಷಿಗಳು ಯಾವ ಸಂದರ್ಭದಲ್ಲಿ ಕೇಜ್ರಿವಾಲ್ ಹೆಸರನ್ನು ಹೇಳಿದ್ದಾರೆ ಎಂಬುವುದು ಜನರಿಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಪ್ರತಿಭಟನೆಯ ವೇಳೆ ಭಗತ್ ಸಿಂಗ್, ಡಾ ಬಿಆರ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರ ಫೋಟೋಗಳನ್ನು ಹಾಕಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಎಎಪಿ ಕಾರ್ಯಕರ್ತರು ದೇಶಭಕ್ತಿ ಗೀತೆಗಳನ್ನು ಹಾಡುತ್ತಾ, ಕವಿತೆಗಳನ್ನು ಓದುತ್ತಾ, ಕೇಜ್ರಿವಾಲ್ ಅವರ ಪೋಟೋಗಳನ್ನು ಪ್ರದರ್ಶಿಸಿದ್ದಾರೆ. ಎಎಪಿ ರಾಜ್ಯ ಘಟಕಗಳಿಂದ ಇತರ ರಾಜ್ಯಗಳಲ್ಲಿ ಕೂಡ ಇದೇ ರೀತಿಯ ಪ್ರತಿಭಟನೆಗಳು ನಡೆದಿದೆ.

ಇದನ್ನು ಓದಿ: ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...