Homeಮುಖಪುಟಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

ಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಬಂಧನ ಬಿಜೆಪಿಯ ಶವಪಟ್ಟಿಗೆಗಿರುವ ಕೊನೆಯ ಮೊಳೆ, ಎಎಪಿಯ ಉಪವಾಸ ಸತ್ಯಾಗ್ರಹ ಬಿಜೆಪಿಗರ ನಿದ್ದೆಗೆಡಿಸಿದೆ ಎಂದು ಎಎಪಿ ಹೇಳಿಕೊಂಡಿದೆ.

ಅರವಿಂದ್ ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿ ಎಎಪಿಯ ಹಿರಿಯ ನಾಯಕರು, ದೆಹಲಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ಶಾಸಕರು ಭಾನುವಾರ ಜಂತರ್ ಮಂತರ್‌ನಲ್ಲಿ ಸಾಮೂಹಿಕವಾಗಿ ಉಪಾಸ ಕೈಗೊಂಡಿದ್ದರು. ಈ ವೇಳೆ ಬಿಜೆಪಿ ಸರ್ವಾಧಿಕಾರ ಧೋರಣೆಯನ್ನು ತೋರುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ “ಜನರು ತಮ್ಮ ಮತಗಳ ಮೂಲಕ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ. .

ಬೆಳಿಗ್ಗೆ 11 ಗಂಟೆಗೆ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು. ಪ್ರತಿಭಟನೆಯಲ್ಲಿ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಉಪ ಸ್ಪೀಕರ್ ರಾಖಿ ಬಿರ್ಲಾ, ಕ್ಯಾಬಿನೆಟ್ ಸಚಿವರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ಅತಿಶಿ, ಕೈಲಾಶ್ ಗಹ್ಲೋಟ್, ಇಮ್ರಾನ್ ಹುಸೇನ್, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ದೆಹಲಿಯ ಸಚಿವೆ ಪ್ರತಿಭಟನೆಯ ವೇಳೆ ಮಾತನಾಡಿದ್ದು, ಬಿಜೆಪಿ ಸರ್ವಾಧಿಕಾರವನ್ನು ಆಶ್ರಯಿಸುತ್ತಿದೆ. ಎಎಪಿಯ ಉಪವಾಸವು ಬಿಜೆಪಿಗೆ “ನಿದ್ರೆಯಿಲ್ಲದ ರಾತ್ರಿಗಳನ್ನು” ನೀಡುತ್ತಿದೆ. ಕೇಜ್ರಿವಾಲ್ ಬಂಧನವು ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಸ್ವಾತಂತ್ರ್ಯದ ಮೊದಲು, ಮಹಾತ್ಮರ ಉಪವಾಸವು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಅಡಿಪಾಯವನ್ನು ಅಲ್ಲಾಡಿಸಿತು. ಇಂದು ಎಎಪಿಯ ಈ ಉಪವಾಸ ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಕಸಿದುಕೊಳ್ಳಲಿದೆ. ಈ ದೇಶ ಈಗ ಎಚ್ಚೆತ್ತುಕೊಂಡಿದೆ, ಸರ್ವಾಧಿಕಾರಿಯ ಅಂತ್ಯ ಹತ್ತಿರವಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಸಂಜಯ್‌ ಸಿಂಗ್ ಮಾತನಾಡಿ, ಸುಳ್ಳು ಸಾಕ್ಷಿಗಳ ಸಹಾಯದಿಂದ ಅಮಾಯಕನನ್ನು ನಕಲಿ ಪ್ರಕರಣದಲ್ಲಿ ಜೈಲಿಗೆ ಹಾಕಲಾಗಿದೆ ಎಂದು ಹೇಳಿದರು. ಕೇಜ್ರಿವಾಲ್ ಅವರನ್ನು ಬೆಂಬಲಿಸಿ ದೇಶದಲ್ಲಿ ಮಾತ್ರವಲ್ಲದೆ ವಿಶ್ವದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದು ನಮ್ಮ ದೊಡ್ಡ ಸಾಧನೆ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ನಮ್ಮ ಸಂದೇಶ ಜನರಿಗೆ ತಲುಪುತ್ತಿದೆ. ನಿಜವಾದ ಮದ್ಯದ ಹಗರಣವನ್ನು ಬಿಜೆಪಿ ಮಾಡಿದ್ದು, ಅದರ ಹಣದ ಜಾಡು ಕೂಡ ಪತ್ತೆಯಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆ ಬಿಜೆಪಿ ನಾಯಕರ ವಿರುದ್ಧ ತನಿಖೆ ನಡೆಸಬೇಕು ಎಂದು ಸಿಂಗ್ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರು ಈಗ ಎಎಪಿಯ ಸಂದೇಶವನ್ನು ತಲುಪಿಸಲು ಮನೆ- ಮನೆಗೆ ತೆರಳುತ್ತಾರೆ ಎಂದು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ‘ಸಿಬಿಐ’ ಮತ್ತು ‘ಇಡಿ’ಯ 456 ಸಾಕ್ಷಿಗಳಲ್ಲಿ ಕೇವಲ ನಾಲ್ವರು ಎಎಪಿ ರಾಷ್ಟ್ರೀಯ ಸಂಚಾಲಕರ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಸಾಕ್ಷಿಗಳು ಯಾವ ಸಂದರ್ಭದಲ್ಲಿ ಕೇಜ್ರಿವಾಲ್ ಹೆಸರನ್ನು ಹೇಳಿದ್ದಾರೆ ಎಂಬುವುದು ಜನರಿಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಪ್ರತಿಭಟನೆಯ ವೇಳೆ ಭಗತ್ ಸಿಂಗ್, ಡಾ ಬಿಆರ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರ ಫೋಟೋಗಳನ್ನು ಹಾಕಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಎಎಪಿ ಕಾರ್ಯಕರ್ತರು ದೇಶಭಕ್ತಿ ಗೀತೆಗಳನ್ನು ಹಾಡುತ್ತಾ, ಕವಿತೆಗಳನ್ನು ಓದುತ್ತಾ, ಕೇಜ್ರಿವಾಲ್ ಅವರ ಪೋಟೋಗಳನ್ನು ಪ್ರದರ್ಶಿಸಿದ್ದಾರೆ. ಎಎಪಿ ರಾಜ್ಯ ಘಟಕಗಳಿಂದ ಇತರ ರಾಜ್ಯಗಳಲ್ಲಿ ಕೂಡ ಇದೇ ರೀತಿಯ ಪ್ರತಿಭಟನೆಗಳು ನಡೆದಿದೆ.

ಇದನ್ನು ಓದಿ: ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...