Homeಮುಖಪುಟಎಎಪಿ ಜೊತೆಗಿನ ಮೈತ್ರಿಗೆ ಅಸಮಾಧಾನ: ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ರಾಜೀನಾಮೆ

ಎಎಪಿ ಜೊತೆಗಿನ ಮೈತ್ರಿಗೆ ಅಸಮಾಧಾನ: ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ರಾಜೀನಾಮೆ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ದೆಹಲಿ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದು, ಎಎಪಿ ಜೊತೆಗೆ ರಾಜ್ಯದಲ್ಲಿ ಮೈತ್ರಿಯಿಂದ ಅಸಮಾಧಾನಗೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಅರವಿಂದರ್ ಸಿಂಗ್ ಲವ್ಲಿ ಅವರನ್ನು ಆಗಸ್ಟ್ 31, 2023ರಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ದಿವಂಗತ ಶೀಲಾ ದೀಕ್ಷಿತ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಅವರು ಸಚಿವರೂ ಕೂಡ ಆಗಿದ್ದರು.

ಅರವಿಂದರ್ ಸಿಂಗ್ ಲವ್ಲಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ದೆಹಲಿ ಕಾಂಗ್ರೆಸ್‌ ಘಟಕವು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದೊಂದಿಗಿನ(ಎಎಪಿ) ಮೈತ್ರಿಗೆ ವಿರುದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದಿಲ್ಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿತ್ತು. ಅದರೂ  ಪಕ್ಷವು ದಿಲ್ಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿದೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಲೋಕಸಭೆ ಚುನಾವಣೆಗಾಗಿ ದೆಹಲಿಯಲ್ಲಿ ಎಎಪಿ ಜೊತೆ 4:3 ಸೀಟು ಹಂಚಿಕೆ ಒಪ್ಪಂದಕ್ಕೆ ಕಾಂಗ್ರೆಸ್ ಆಗಮಿಸಿತ್ತು. ಈ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಕಾಂಗ್ರೆಸ್ 3 ಸ್ಥಾನಗಳನ್ನು ಪಡೆದುಕೊಂಡಿದೆ. ವಾಯವ್ಯ ದೆಹಲಿ, ಈಶಾನ್ಯ ದೆಹಲಿ ಮತ್ತು ಚಾಂದಿನಿ ಚೌಕ್‌ನ್ನು ಕಾಂಗ್ರೆಸ್‌ಗೆ ಬಿಟ್ಟಕೊಡಲಾಗಿತ್ತು.

ದೆಹಲಿ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನದ ಹೊರತಾಗಿಯೂ, ಇಡೀ ರಾಜ್ಯ ಘಟಕವು ಹೈಕಮಾಂಡ್‌ನ ಅಂತಿಮ ಆದೇಶವನ್ನು ಅನುಸರಿಸುತ್ತದೆ ಎಂದು ಅವರು ಖಚಿತಪಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯ ಸೂಚನೆಯ ಮೇರೆಗೆ, ನಾನು ಕೇಜ್ರಿವಾಲ್ ಅವರ ಬಂಧನದ ರಾತ್ರಿ ಸುಭಾಷ್ ಚೋಪ್ರಾ ಮತ್ತು ಸಂದೀಪ್ ದೀಕ್ಷಿತ್ ಅವರೊಂದಿಗೆ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿದ್ದೆ, ಇದು ನನಗೆ ಇಷ್ಟವಿರಲಿಲ್ಲ ಎಂದು ಹೇಳಿದ್ದಾರೆ.

ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಿದ ಕೂಡಲೇ ಚುನಾವಣಾ ಕಣದಿಂದ ಸಾರ್ವಜನಿಕವಾಗಿ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದೇನೆ ಮತ್ತು ದೆಹಲಿಯ ಇತರ ಹಿರಿಯ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ಸಿಗುವಂತೆ ಮಾಡಲು ನಾನು ಈ ರೀತಿಯ ನಿರ್ಧಾರಕ್ಕೆ ಬಂದಿದ್ದೆ ಎಂದು ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...