Homeಮುಖಪುಟಆರ್ಯನ್ ಡ್ರಗ್ ಕೇಸ್‌: ಎನ್‌ಸಿಬಿ ಅಧಿಕಾರಿ ಮೇಲೆ ಬೇಹುಗಾರಿಕೆ

ಆರ್ಯನ್ ಡ್ರಗ್ ಕೇಸ್‌: ಎನ್‌ಸಿಬಿ ಅಧಿಕಾರಿ ಮೇಲೆ ಬೇಹುಗಾರಿಕೆ

- Advertisement -
- Advertisement -

ಖ್ಯಾತ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್‌ ಖಾನ್‌  ಪ್ರಕರಣದ ತನಿಖೆ ನಡೆಸುತ್ತಿರುವ ಮಾದಕದ್ರವ್ಯ ವಿರೋಧಿ ಏಜೆನ್ಸಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಉನ್ನತ ಅಧಿಕಾರಿಯನ್ನು ಬೇರೊಬ್ಬರು ಬೇಹುಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಈ ತಿಂಗಳ ಆರಂಭದಲ್ಲಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದರು. ಇದು ಆರ್ಯನ್ ಖಾನ್ ಬಂಧನಕ್ಕೆ ಕಾರಣವಾಯಿತು.

ವಾಂಖೆಡೆ ಮತ್ತು ಹಿರಿಯ ಅಧಿಕಾರಿ ಮುತ್ತ ಜೈನ್ ಅವರು ಬೇಹುಗಾರಿಕೆ ಬಗ್ಗೆ ದೂರು ನೀಡಲು ಮಹಾರಾಷ್ಟ್ರ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ್ದಾರೆ. ಕೆಲವರು ಅಧಿಕಾರಿಯ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ.

ವಾಂಖೆಡೆ ಅವರು ತಮ್ಮ ತಾಯಿ ಸಮಾಧಿ ಸ್ಥಳಕ್ಕೆ ಆಗಾಗ್ಗೆ ಭೇಟಿ ನೀಡುತ್ತಾರೆ. ವಾಂಖೆಡೆ ಅವರು ಸ್ಮಶಾನಕ್ಕೆ ತೆರಳಿದಾಗ ಕೆಲವರು ಹಿಂಬಾಲಿಸಿದ್ದಾರೆ ಎಂಬುದು ಸಿಸಿಟಿವಿ ಫೂಟೇಜ್ ದೃಢಪಡಿಸಿದೆ ಎಂದು ಏಜೆನ್ಸಿ ಹೇಳಿದೆ.

ವಾಖೆಂಡೆ ಅವರು ಈ ಕುರಿತು ವಿವರಿಸಲು ನಿರಾಕಸಿದ್ದು, “ವಿಷಯ ತುಂಬಾ ಗಂಭೀರವಾಗಿದೆ” ಎಂದಿದ್ದಾರೆ. ಆರೋಪಗಳ ಕುರಿತು ಮುತ ಜೈನ್ ಸುದ್ದಿಗಾರರಿಗೆ ಹೀಗೆ ಹೇಳಿದರು: “ನೀವು ಏನು ಕೇಳುತ್ತೀರೋ ಅದು ಈಗಾಗಲೇ ಪೇಪರ್‌ಗಳಲ್ಲಿದೆ. ನಾವು ಈಗಾಗಲೇ ಮಹಾರಾಷ್ಟ್ರ ಪೊಲೀಸರೊಂದಿಗೆ ಮಾತನಾಡಿದ್ದೇವೆ. ನಾನು ಇನ್ನು ಮುಂದೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಮೂರನೇ ಬಾರಿಗೆ, ಆರ್ಯನ್ ಖಾನ್‌ಗೆ ಸೋಮವಾರ ಜಾಮೀನು ನಿರಾಕರಿಸಲಾಯಿತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಂತರಾಷ್ಟ್ರೀಯ ಡ್ರಗ್ ಕಾರ್ಟೆಲ್ ಅನ್ನು ಪತ್ತೆಹಚ್ಚಲು ಇತರ ಆರೋಪಿಗಳೊಂದಿಗೆ ಆತನನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಸಂಸ್ಥೆ ಹೇಳಿದೆ.

ಆರ್ಯನ್ ಖಾನ್, ಆತನ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಇತರ ಆರು ಮಂದಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಆರ್ಯನ್ ಖಾನ್ ಯಾವುದೇ ಡ್ರಗ್‌ ಕಂಡುಕೊಂಡಿಲ್ಲ, ಆದರೆ ಆತನ ವಾಟ್ಸಾಪ್ ಚಾಟ್‌ಗಳು ಅಪರಾಧ ಕೃತ್ಯಗಳಿಂದ ಕೂಡಿವೆ ಎಂದು ಏಜೆನ್ಸಿ ಹೇಳಿದೆ. ಆರ್ಯನ್ ಖಾನ್ ಬಂಧನವು ಈಗ ರಾಜಕೀಯ ವಿಷಯವಾಗಿ ಬದಲಾಗಿದೆ.

ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಕ್ರೂಸ್‌ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಶನಿವಾರ (ಅ.2) ರಾತ್ರಿ ದಾಳಿ ಮಾಡಿದ ಅಧಿಕಾರಿಗಳು ಸುಮಾರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್  ಅವರ ಪುತ್ರ ಆರ್ಯನ್ ಖಾನ್  ಕೂಡ ಸೇರಿದ್ದರು.

ಇಬ್ಬರು ಯುವತಿಯರು ಸೇರಿದಂತೆ ಆರ್ಯನ್ ಖಾನ್, ಮುನ್ಮುನ್ ಧಮೇಚಾ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎಂಬುವವರನ್ನು ವಶಕ್ಕೆ ಪಡೆಯಲಾಗಿತ್ತು.

“ಆರ್ಯನ್ ಖಾನ್ ಸೇರಿದಂತೆ ಎಲ್ಲ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಿಳಿಸಿತ್ತು.

NCB ತಂಡವು ಪ್ರಯಾಣಿಕರ ವೇಷದಲ್ಲಿ ಹಡಗನ್ನು ಹತ್ತಿತ್ತು ಎಂದು ಮೂಲಗಳು ಹೇಳಿದ್ದವು. Ecstasy, Cocaine (ಕೊಕೇನ್), ಎಂಡಿ (ಮೆಫೆಡ್ರೋನ್) ಮತ್ತು ಚರಸ್‌ನಂತಹ ಡ್ರಗ್ಸ್‌ಗಳನ್ನು ಹಡಗಿನಿಂದ ವಶಪಡಿಸಿಕೊಳ್ಳಲಾಗಿತ್ತು. ಹಡಗು ಮುಂಬೈಯಿಂದ ಹೊರಟ ನಂತರ ಸಮುದ್ರದ ಮಧ್ಯದಲ್ಲಿ ಪಾರ್ಟಿ ಆರಂಭವಾಯಿತು ಎಂದು NCB ಅಧಿಕಾರಿಗಳು ಹೇಳಿದ್ದರು.

“ನಾವು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದೇವೆ. ಈ ಪ್ರಕ್ರಿಯೆಯಲ್ಲಿ, ಬಾಲಿವುಡ್ ಅಥವಾ ಶ್ರೀಮಂತರೊಂದಿಗೆ ಕೆಲವು ಲಿಂಕ್‌ಗಳು ಸಿಕ್ಕರೆ, ಕಾನೂನಿನ ವ್ಯಾಪ್ತಿಯಲ್ಲಿ ನಾವು ಕಾರ್ಯನಿರ್ವಹಿಸಬೇಕು” ಎಂದು ಎನ್‌ಸಿಬಿ ಮುಖ್ಯಸ್ಥ ಎಸ್‌ಎನ್ ಪ್ರಧಾನ್ ಹೇಳಿದ್ದರು.

ಕಳೆದ ವರ್ಷದ ಜೂನ್‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವಿನ ನಂತರ ಬಾಲಿವುಡ್‌ನಲ್ಲಿ ಮಾದಕದ್ರವ್ಯ ಸೇವನೆ ಆರೋಪದ ಮೇಲೆ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಅಂದಿನಿಂದ ಡ್ರಗ್ಸ್ ವಿರೋಧಿ ಪ್ರಕರಣಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿರಿ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It is very funny that every time government of India impose condition on ordinary people not to use plastics and tobacco etcetera but then never in struct to any industry to ban the the production thereby we are unable to understand actual policy of the ruling government how long this kind of policy will going to help for the betterment of the society now the selling centres are allowed but the customers are captured and the subjected to punishment

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...