Homeಮುಖಪುಟಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

ಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

- Advertisement -
- Advertisement -

ನಟ ಶಾರುಖ್ ಖಾನ್‌ರವರ ಪುತ್ರ ಆರ್ಯನ್ ಖಾನ್ ಮತ್ತು ಇತರ 05 ಜನರ ಮೇಲಿನ ಡ್ರಗ್ಸ್ ಸೇವನೆ ಮತ್ತು ಸಾಗಣೆ ಆರೋಪದಿಂದ NCB ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಅವರು ಡ್ರಗ್ಸ್ ಪಿತೂರಿ ಅಥವಾ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಅಲ್ಲದೆ ಅವರನ್ನು ಬಂಧಿಸಿದ ಕಾರ್ಡೆಲಿಯಾ ವಿಹಾರ ನೌಕೆಯ ಮೇಲಿನ ದಾಳಿಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಶೇಷ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ತಿಳಿಸಿದೆ.

ವಾಟ್ಸಾಪ್‌ ಚಾಟ್‌ಗಳ ಆಧಾರದ ಮೇಲೆ ಸಹ ಆರೋಪಿಯು ಆರ್ಯನ್‌ ಖಾನ್‌ಗೆ ಡ್ರಗ್ಸ್‌ ಸರಬರಾಜು ಮಾಡಿದ್ದಾನೆ ಎಂಬುದನ್ನು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಅಕ್ಟೋಬರ್ 3 ರಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿತ್ತು. ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಬಂಧಿಸಲಾಗಿತ್ತು. ಸುದ್ದಿ ಚಾನೆಲ್‌ಗಳನ್ನು ಇದನ್ನೊಂದು ರಾಷ್ಟ್ರೀಯ ವಿಷಯವನ್ನಾಗಿ ಮಾಡಿ ಭಾರೀ ಕವರೇಜ್ ನೀಡಿದ್ದರು. 3 ವಾರಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಆರ್ಯನ್ ಖಾನ್ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಆರ್ಯನ್ ಖಾನ್ ಬಳಿ ಡ್ರಗ್ಸ್ ಪತ್ತೆಯಾಗಿದ್ದೆ ಎಂದು ಆರೋಪಿಸಿದ್ದ ಎನ್‌ಸಿಬಿ 14 ಆರೋಪಿಗಳನ್ನು ಹೆಸರಿಸಿ 6,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತ್ತು. ಆರ್ಯನ್ ಮತ್ತು ಮೋಹಕ್ ಹೊರತುಪಡಿಸಿ ಎಲ್ಲಾ ಆರೋಪಿಗಳು ಮಾದಕ ದ್ರವ್ಯಗಳನ್ನು ಹೊಂದಿದ್ದರು. ಆರ್ಯನ್ ಖಾನ್ ಮತ್ತು ಇತರ ಐವರ ವಿರುದ್ಧ ನಮಗೆ ಸಾಕಷ್ಟು ಪುರಾವೆಗಳು ಸಿಗಲಿಲ್ಲ ಎಂದು ಎನ್‌ಸಿಬಿ ಹಿರಿಯ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ಹೇಳಿದ್ದರು.

ಉದ್ದೇಶಪೂರ್ವಕವಾಗಿ ಆರ್ಯನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಆರೋಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಯತ್ನಿಸಿದರು ಎಂಬ ಆರೋಪ ತನಿಖೆಯ ಉಸ್ತುವಾರಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಕೇಳಿಬಂದಿತ್ತು. ನಂತರ ಅವರನ್ನು ಆ ಹುದ್ದೆಯಿಂದ ಕೈಬಿಡಲಾಯಿತು. ಅಲ್ಲದೆ ತನಿಖೆಯಲ್ಲಿ ಲೋಪವಾದ ನಂತರ ಪ್ರಕರಣವನ್ನು ಎನ್‌ಸಿಬಿಯ ಮುಂಬೈ ಮೂಲದ ತಂಡದಿಂದ ದೆಹಲಿ ಮೂಲದ ತಂಡಕ್ಕೆ ವರ್ಗಾಯಿಸಲಾಗಿತ್ತು.

ಈಗ ಎನ್‌ಸಿಬಿ ನ್ಯಾಯಾಲಯವು ಆರ್ಯನ್ ಖಾನ್ ದೋಷಮುಕ್ತನೆಂದು ಘೋಷಿಸಿದೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದೆ.

ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಮತ್ತು ಅಸಮರ್ಪಕ ತನಿಖೆ ತನಿಖೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದು ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ; ಭಾರತದಲ್ಲಿ ಮಾತಿನ ಸ್ವಾತಂತ್ಯ್ರ ಇದೆ; ಮಾತಿನ ನಂತರ ಸ್ವಾತಂತ್ಯ್ರ ಇಲ್ಲ: ಮೇ ಸಾಹಿತ್ಯ ಮೇಳದಲ್ಲಿ ಪಿ ಸಾಯಿನಾಥ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...