Homeಮುಖಪುಟಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ 8 ಕೋಟಿ ರೂ.ಲಂಚದ ಆರೋಪಗಳು ಕೇಳಿ ಬಂದಿದೆ.

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ, ನಂತರ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿತ್ತು. ಈಗ ಈ ಪ್ರಕರಣವೇ ನಕಲಿ ಎಂದು ವಾದಿಸಲಾಗುತ್ತಿದೆ.

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಲಂಚದ ಆರೋಪಗಳು ಕೇಳಿ ಬಂದಿದ್ದು, 8 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಕೆಪಿ ಗೋಸಾವಿ ತಲೆ ಮರೆಸಿಕೊಂಡಿದ್ದಾರೆ. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಬಂದರಿನಲ್ಲಿರುವ ಕಚೇರಿಯ ಒಳಗೆ ಒಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ.

ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

PC:NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಇವರನ್ನು ಪ್ರಕರಣದ ಸಾಕ್ಷಿ ಎಂದು ಹೇಳಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ನಾಪತ್ತೆಯಾಗಿದ್ದಾರೆ. ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದ್ದು, ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಹೇಳಿದ್ದಾರೆ.

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್, ಪ್ರಕರಣವನ್ನು “ನಕಲಿ” ಎಂದು ಕರೆದಿದ್ದಾರೆ. ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ನಿರಂತರವಾಗಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಇಂದು (ಅ.26) ರಂದು ಸಮೀರ್‌ ವಾಂಖೆಡೆ ವಿರುದ್ಧ ಮತ್ತೊಂದು ಆರೋಪ ಮಾಡಿದ್ದು, ವಾಂಖೆಡೆ 26 ಪ್ರಕರಣಗಳಲ್ಲಿ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿಲ್ಲ ಎಂದು ಏಜೆನ್ಸಿ ಉದ್ಯೋಗಿಯ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

“ಹೆಸರು ಹೇಳಲಿಚ್ಛಿಸದ NCB ಅಧಿಕಾರಿಯಿಂದ ನನಗೆ ಬಂದ ಪತ್ರದ ವಿಷಯಗಳು ಇಲ್ಲಿವೆ.
ಜವಾಬ್ದಾರಿಯುತ ನಾಗರಿಕನಾಗಿ ನಾನು ಈ ಪತ್ರವನ್ನು ಡಿಜಿ ನಾರ್ಕೋಟಿಕ್ಸ್ ಅವರಿಗೆ ರವಾನಿಸುತ್ತೇನೆ, ಈ ಪತ್ರವನ್ನು ಸಮೀರ್ ವಾಂಖೆಡೆ ವಿರುದ್ಧ ನಡೆಸುತ್ತಿರುವ ಆಂತರಿಕೆ ತನಿಖೆಯಲ್ಲಿ ಸೇರಿಸಲು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ನವಾಬ್ ಮಲಿಕ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ಎನ್‌ಸಿಬಿ ಉಪ ಮಹಾನಿರ್ದೇಶಕ ಮುತಾ ಅಶೋಕ್ ಜೈನ್, ಪತ್ರದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆರ್ಯನ್ ಖಾನ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಖಾಸಗಿ ತನಿಖಾಧಿಕಾರಿ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದ ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು.


ಇದನ್ನೂ ಓದಿ: ಆರ್ಯನ್ ಖಾನ್ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ: ಆರೋಪ ನಿರಾಕರಿಸಿದ ಎನ್‌ಸಿಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....