Homeಮುಖಪುಟಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

- Advertisement -
- Advertisement -

ಆರ್ಯನ್ ಖಾನ್ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಮತ್ತು ಅವರು ಮಾದಕದ್ರವ್ಯ ನಿಯಂತ್ರಣ ಬ್ಯೂರೋದ (NCB) ಅಧಿಕಾರಿಯ ಹಗೆತನಕ್ಕೆ ಬಲಿಯಾಗಿದ್ದಾರೆ ಹೀಗಾಗಿ ಇದರಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಎಂದು ಶಿವಸೇನಾ ಮುಖಂಡರೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಎನ್‌ಸಿಬಿ ಅಧಿಕಾರಿಯ ಪತ್ನಿ ಚಿತ್ರರಂಗದಲ್ಲಿ ಗೆಲುವು ಕಾಣಲು ವಿಫಲರಾದ ಕಾರಣ ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಮೇಲೆ ಹಗೆ ಸಾಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಶಿವಸೇನಾ ನಾಯಕ, ರಾಜ್ಯ ಸಚಿವ ಕಿಶೋರ್ ತಿವಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮುಂಬೈನ ಕಡಲತೀರದಲ್ಲಿ ಕ್ರೂಸ್ ಹಡಗಿನ ಮೇಲಿನ ದಾಳಿ ಪ್ರಕರಣದಲ್ಲಿ ರಾಜಕೀಯ ತಾರಕಕ್ಕೇರಿದೆ. ಈ ತಿಂಗಳ ಅಕ್ಟೋಬರ್ 2 ರಂದು ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಇತರ ಏಳು ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: ಆರ್ಯನ್ ಡ್ರಗ್ ಕೇಸ್‌: ಎನ್‌ಸಿಬಿ ಅಧಿಕಾರಿ ಮೇಲೆ ಬೇಹುಗಾರಿಕೆ

ಮಹಾರಾಷ್ಟ್ರದ ಆಡಳಿತ ಸರ್ಕಾರ ವಿಶೇಷವಾಗಿ ಶಿವಸೇನೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP), ಒಕ್ಕೂಟ ಸರ್ಕಾರದ ಆದೇಶದ ಮೇರೆಗೆ NCB ಆರ್ಯನ್ ಖಾನ್ ಅವರನ್ನು ಗುರಿಯಾಗಿಸಿದೆ ಎಂದು ಆರೋಪಿಸಿವೆ.

ಕಿಶೋರ್ ತಿವಾರಿ ಸಲ್ಲಿಸಿರುವ ಅರ್ಜಿಯಲ್ಲಿ, ಡ್ರಗ್ಸ್ ವಿರೋಧಿ ಏಜೆನ್ಸಿಯು ಚಲನಚಿತ್ರರಂಗದ ವ್ಯಕ್ತಿಗಳು ಮತ್ತು ಮಾಡೆಲ್‌ಗಳನ್ನು ಗುರಿಯಾಗಿಸಿಕೊಂಡು ಕೊಳಕು ಹಗೆತನ ಸಾಧಿಸುತ್ತಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಮತ್ತು ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವಿ ಮಾಡಲಾಗಿದೆ.

ಮುಂಬಯಿ ನ್ಯಾಯಾಲಯವು ಆರ್ಯನ್ ಖಾನ್ ಜಾಮೀನು ಅರ್ಜಿಯ ತೀರ್ಪನ್ನು ನಾಳೆಗೆ (ಅ.20) ಮುಂದೂಡುಡಿರುವುದನ್ನು ಉಲ್ಲೇಖಿಸಿರುವ, ಶಿವಸೇನಾ ನಾಯಕ ಇದು ದೊಡ್ಡ ಅವಮಾನ ಎಂದಿದ್ದಾರೆ. 23 ವರ್ಷ ವಯಸ್ಸಿನ ಆರ್ಯನ್‌ ಖಾನ್‌ರನ್ನು ಕಾನೂನುಬಾಹಿರವಾಗಿ ಬಂಧಿಸಿ, 17 ರಾತ್ರಿಗಳು ಜೈಲಿನಲ್ಲಿ ಇಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಶಿವಸೇನಾ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಮಾದಕದ್ರವ್ಯ ವಿರೋಧಿ ಏಜೆನ್ಸಿ(NCB) ಸೆಲೆಬ್ರಿಟಿಗಳನ್ನು ಹಿಡಿಯಲು ಮಾತ್ರ ಆಸಕ್ತಿ ಹೊಂದಿದೆ ಎಂದು ಆರೋಪಿಸಿದ್ದರು. ಆರ್ಯನ್ ಖಾನ್ ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.

ಡ್ರಗ್ಸ್ ವಿರೋಧಿ ಏಜೆನ್ಸಿಯ ಅಧಿಕಾರಿಗಳು ಅಕ್ಟೋಬರ್ 2 ರಂದು ಮಾರುವೇಷದಲ್ಲಿ ಮುಂಬೈನ ಕಡಲತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಪಾರ್ಟಿಯಲ್ಲಿ ಮೇಲೆ ದಾಳಿ ಮಾಡಿದ ಕೆಲವೇ ಗಂಟೆಗಳಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಅರ್ಬಾಜ್ ಮರ್ಚೆಂಟ್ ಸೇರಿದಂತೆ ಇತರ 7 ಮಂದಿಯನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿದೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ಆರ್ಯನ್ ಖಾನ್‌ಗೆ ಸಿಗದ ಜಾಮೀನು, ಅ.20 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...