Homeಮುಖಪುಟಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

- Advertisement -
- Advertisement -

ಆರ್ಯನ್ ಖಾನ್ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಮತ್ತು ಅವರು ಮಾದಕದ್ರವ್ಯ ನಿಯಂತ್ರಣ ಬ್ಯೂರೋದ (NCB) ಅಧಿಕಾರಿಯ ಹಗೆತನಕ್ಕೆ ಬಲಿಯಾಗಿದ್ದಾರೆ ಹೀಗಾಗಿ ಇದರಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಎಂದು ಶಿವಸೇನಾ ಮುಖಂಡರೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಎನ್‌ಸಿಬಿ ಅಧಿಕಾರಿಯ ಪತ್ನಿ ಚಿತ್ರರಂಗದಲ್ಲಿ ಗೆಲುವು ಕಾಣಲು ವಿಫಲರಾದ ಕಾರಣ ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಮೇಲೆ ಹಗೆ ಸಾಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಶಿವಸೇನಾ ನಾಯಕ, ರಾಜ್ಯ ಸಚಿವ ಕಿಶೋರ್ ತಿವಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮುಂಬೈನ ಕಡಲತೀರದಲ್ಲಿ ಕ್ರೂಸ್ ಹಡಗಿನ ಮೇಲಿನ ದಾಳಿ ಪ್ರಕರಣದಲ್ಲಿ ರಾಜಕೀಯ ತಾರಕಕ್ಕೇರಿದೆ. ಈ ತಿಂಗಳ ಅಕ್ಟೋಬರ್ 2 ರಂದು ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಇತರ ಏಳು ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: ಆರ್ಯನ್ ಡ್ರಗ್ ಕೇಸ್‌: ಎನ್‌ಸಿಬಿ ಅಧಿಕಾರಿ ಮೇಲೆ ಬೇಹುಗಾರಿಕೆ

ಮಹಾರಾಷ್ಟ್ರದ ಆಡಳಿತ ಸರ್ಕಾರ ವಿಶೇಷವಾಗಿ ಶಿವಸೇನೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP), ಒಕ್ಕೂಟ ಸರ್ಕಾರದ ಆದೇಶದ ಮೇರೆಗೆ NCB ಆರ್ಯನ್ ಖಾನ್ ಅವರನ್ನು ಗುರಿಯಾಗಿಸಿದೆ ಎಂದು ಆರೋಪಿಸಿವೆ.

ಕಿಶೋರ್ ತಿವಾರಿ ಸಲ್ಲಿಸಿರುವ ಅರ್ಜಿಯಲ್ಲಿ, ಡ್ರಗ್ಸ್ ವಿರೋಧಿ ಏಜೆನ್ಸಿಯು ಚಲನಚಿತ್ರರಂಗದ ವ್ಯಕ್ತಿಗಳು ಮತ್ತು ಮಾಡೆಲ್‌ಗಳನ್ನು ಗುರಿಯಾಗಿಸಿಕೊಂಡು ಕೊಳಕು ಹಗೆತನ ಸಾಧಿಸುತ್ತಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಮತ್ತು ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವಿ ಮಾಡಲಾಗಿದೆ.

ಮುಂಬಯಿ ನ್ಯಾಯಾಲಯವು ಆರ್ಯನ್ ಖಾನ್ ಜಾಮೀನು ಅರ್ಜಿಯ ತೀರ್ಪನ್ನು ನಾಳೆಗೆ (ಅ.20) ಮುಂದೂಡುಡಿರುವುದನ್ನು ಉಲ್ಲೇಖಿಸಿರುವ, ಶಿವಸೇನಾ ನಾಯಕ ಇದು ದೊಡ್ಡ ಅವಮಾನ ಎಂದಿದ್ದಾರೆ. 23 ವರ್ಷ ವಯಸ್ಸಿನ ಆರ್ಯನ್‌ ಖಾನ್‌ರನ್ನು ಕಾನೂನುಬಾಹಿರವಾಗಿ ಬಂಧಿಸಿ, 17 ರಾತ್ರಿಗಳು ಜೈಲಿನಲ್ಲಿ ಇಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಶಿವಸೇನಾ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಮಾದಕದ್ರವ್ಯ ವಿರೋಧಿ ಏಜೆನ್ಸಿ(NCB) ಸೆಲೆಬ್ರಿಟಿಗಳನ್ನು ಹಿಡಿಯಲು ಮಾತ್ರ ಆಸಕ್ತಿ ಹೊಂದಿದೆ ಎಂದು ಆರೋಪಿಸಿದ್ದರು. ಆರ್ಯನ್ ಖಾನ್ ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.

ಡ್ರಗ್ಸ್ ವಿರೋಧಿ ಏಜೆನ್ಸಿಯ ಅಧಿಕಾರಿಗಳು ಅಕ್ಟೋಬರ್ 2 ರಂದು ಮಾರುವೇಷದಲ್ಲಿ ಮುಂಬೈನ ಕಡಲತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಪಾರ್ಟಿಯಲ್ಲಿ ಮೇಲೆ ದಾಳಿ ಮಾಡಿದ ಕೆಲವೇ ಗಂಟೆಗಳಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಅರ್ಬಾಜ್ ಮರ್ಚೆಂಟ್ ಸೇರಿದಂತೆ ಇತರ 7 ಮಂದಿಯನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿದೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ಆರ್ಯನ್ ಖಾನ್‌ಗೆ ಸಿಗದ ಜಾಮೀನು, ಅ.20 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...