Homeಮುಖಪುಟಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಗುರುಗ್ರಾಮದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌, “ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!” ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿಯ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಕೆಲವು ಹಿಂದೂ ಸಂಘಟನೆಗಳು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ. ಈ  ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಪ್ರಾರ್ಥನೆ ಸಲ್ಲಿಸುತ್ತಿರುವ ಜನರ ಮುಂದೆ ಬಜರಂಗದಳದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ಕ್ಲಿಪ್ ಹಂಚಿಕೊಂಡಿದ್ದಾರೆ.

ಸ್ವರಾ ಭಾಸ್ಕರ್ ತಮ್ಮ ಟ್ವಿಟರ್‌ ಖಾತೆಯಲ್ಲಿ, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ಇದೇ ಘಟನೆಯನ್ನು ಖಂಡಿಸಿರುವ ಮತ್ತೊಬ್ಬ ಟ್ವಿಟರ್ ಬಳಕೆದಾರರು “ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

ನಗರದ ಸೆಕ್ಟರ್ 47ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಹಿರಂಗ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿ ಬಂದಿರುವಾಗಲೇ ಈ ಘಟನೆ ಮುನ್ನೆಲೆಗೆ ಬಂದಿದೆ. ಮುಸ್ಲಿಂ ಸಮುದಾಯದ ಜನರು ಪ್ರಾರ್ಥನೆಗಾಗಿ ಸೇರುತ್ತಿದ್ದರು. ಈ ವೇಳೆ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ.

ಗುರುಗ್ರಾಮ ಆಡಳಿತವು ಗುರುತಿಸಿದ 37 ಸ್ಥಳಗಳಲ್ಲಿ ಪ್ರಾರ್ಥನಾ ಸ್ಥಳಗಳಲ್ಲಿ ಸೆಕ್ಟರ್ 47 ಮತ್ತು ಸೆಕ್ಟರ್ 12-ಎ ಕೂಡ ಸೇರಿವೆ, ಅಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಅವಕಾಶವಿದೆ. 2018 ರಲ್ಲಿ ಇದೇ ರೀತಿಯ ಘಟನೆ ನಡೆದ ನಂತರ, ಆಡಳಿತವು ಹಿಂದೂ ಮತ್ತು ಮುಸ್ಲಿಮರ ನಡುವೆ ಮಾತುಕತೆ ನಡೆಸಿ ಈ ಸ್ಥಳಗಳನ್ನು ನಿರ್ಧರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್‌ಪಿಸಿ ಸೆಕ್ಷನ್ 354 ಡಿ, 509 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿನಗೆ ಹಿಂದೂ ಆಗಿರೋದಕ್ಕೆ ನಾಚಿಕೆ ಆಗಿದ್ದರೆ ,ಹಿಂದೂಸ್ಥಾನ ಭಾರತವನ್ನು ಬಿಟ್ಟು ತೊಲುಗು ,ನಿಮ್ಮಂತ ಅಯೋಗ್ಯರು ನಮಗೆ ನಮ್ಮ ಧರ್ಮದ ಬಗ್ಗೆ ಹೇಳುವ ಅಗತ್ಯ ಇಲ್ಲಾ ,ನಿಮ್ಮಂತವರಿಗೆ ಅಫ್ಘಾನಿಸ್ತಾನ,ಪಾಕಿಸ್ತಾನವೇ ಸರಿ ,ಇರೋದಕ್ಕೆ ಬೆಳೆಯೋಕೆ ನಮ್ಮ ಧರ್ಮದ ಅಗತ್ಯ ನಿಮಗೆ ಬೇಕು ,ಬೆಳೆದ ಮೇಲೆ ಪಯಕೀಯರ ಸಹವಾಸ ಮೇಲು ನಿಮಗೆ ಅಲ್ಲವೇ ,ನಿಮ್ಮಂತ ಧರ್ಮ ದ್ರೋಹಿ ,ದೇಶ ದ್ರೋಹಿಗಳು ಆದಷ್ಟು ಬೇಗ ದೇಶ ಬಿಟ್ಟು ತೊಲಗಿ ಅಯೋಗ್ಯರಾ.

  2. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದು ಹಿಂದೂಗಳು ಸತ್ತಾಗ ಇವಳು ಎಲ್ಲಿ ಅವಿತುಕೊಂಡಿದ್ದಳು ,ಇವಳಿಗೆ ಯಾವೋನೊ ಪರಧರ್ಮಿಯನ ಸಹವಾಸ ಇರಬೇಕು ಈ ರೀತಿ ಈಗ ಹಿಂದೂ ಧರ್ಮದ ಬಗ್ಗೆ ಹೇಳೋಕೆ.

  3. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ಆಕ್ರಮಣ ನಡೆಯುವುದು ಖಂಡನೀಯ….
    ಅದನ್ನು ಬುದ್ದಿ ಇರುವ ಯಾರೂ ಸಮರ್ಥಿಸಲಾರನು.
    ಸಮರ್ಥಿಸುವವನು ಮನುಶ್ಯನೇ ಅಲ್ಲ.
    ಹಾಗಂತ ಆ ಹೆಸರಿನಲ್ಲಿ ಭಾರತದ ನಿರಪರಾದಿಗಳಾದ ಮುಗ್ದ ಮುಸಲ್ಮಾನರನ್ನೇಕೆ ಹತ್ಯೆ ಮಾಡಲಾಗುತ್ತದೆ.
    ಅವರ ಇಲ್ಲಿನ ಪ್ರಾರ್ಥನಾ ಮಂದಿರಗಳನ್ನೇಕೆ ದ್ವಂಸ ಮಾಡಲಾಗುತ್ತದೆ.
    ಅದಕ್ಕಾಗಿ ನಟಿ ನಾಚಿಕೆಪಡುತ್ತಿಫ್ದಾರೆ. ಅಷ್ಟೆ
    ಇಲ್ಲಿನ ಮುಸಲ್ಮಾನರು ವಿನಾ ಕಾರಣ ಹಿಂದುಗಳಿಂದ ಹಿಂಸೆಗೊಳಗಾಗುತ್ತಾರೆ ತಾನೇ
    ಅದು ಅದಕ್ಕೆ ಪ್ರತೀಕಾರವೇ
    ಅವರೇನು ತಪ್ಪು ಮಾಡಿದ್ದಾರೆ..
    ಸಾಧ್ಯವಾದರೆ ಬಾಂಗ್ಲಾ ದೇಶದ ಸರಕಾರಕ್ಕೆ ಭಾರತ ಸರಕಾರ ನಿರ್ಭಂದವೇರಲಿ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...