ದೆಹಲಿಯ ಗುರುಗ್ರಾಮದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್, “ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!” ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಕೆಲವು ಹಿಂದೂ ಸಂಘಟನೆಗಳು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ಪ್ರಾರ್ಥನೆ ಸಲ್ಲಿಸುತ್ತಿರುವ ಜನರ ಮುಂದೆ ಬಜರಂಗದಳದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ಕ್ಲಿಪ್ ಹಂಚಿಕೊಂಡಿದ್ದಾರೆ.
ಸ್ವರಾ ಭಾಸ್ಕರ್ ತಮ್ಮ ಟ್ವಿಟರ್ ಖಾತೆಯಲ್ಲಿ, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.
ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು
As a Hindu I’m ashamed! https://t.co/26OfIqTeHO
— Swara Bhasker (@ReallySwara) October 22, 2021
ಇದೇ ಘಟನೆಯನ್ನು ಖಂಡಿಸಿರುವ ಮತ್ತೊಬ್ಬ ಟ್ವಿಟರ್ ಬಳಕೆದಾರರು “ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.
ನಗರದ ಸೆಕ್ಟರ್ 47ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಹಿರಂಗ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿ ಬಂದಿರುವಾಗಲೇ ಈ ಘಟನೆ ಮುನ್ನೆಲೆಗೆ ಬಂದಿದೆ. ಮುಸ್ಲಿಂ ಸಮುದಾಯದ ಜನರು ಪ್ರಾರ್ಥನೆಗಾಗಿ ಸೇರುತ್ತಿದ್ದರು. ಈ ವೇಳೆ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ.
ಗುರುಗ್ರಾಮ ಆಡಳಿತವು ಗುರುತಿಸಿದ 37 ಸ್ಥಳಗಳಲ್ಲಿ ಪ್ರಾರ್ಥನಾ ಸ್ಥಳಗಳಲ್ಲಿ ಸೆಕ್ಟರ್ 47 ಮತ್ತು ಸೆಕ್ಟರ್ 12-ಎ ಕೂಡ ಸೇರಿವೆ, ಅಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಅವಕಾಶವಿದೆ. 2018 ರಲ್ಲಿ ಇದೇ ರೀತಿಯ ಘಟನೆ ನಡೆದ ನಂತರ, ಆಡಳಿತವು ಹಿಂದೂ ಮತ್ತು ಮುಸ್ಲಿಮರ ನಡುವೆ ಮಾತುಕತೆ ನಡೆಸಿ ಈ ಸ್ಥಳಗಳನ್ನು ನಿರ್ಧರಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್ಪಿಸಿ ಸೆಕ್ಷನ್ 354 ಡಿ, 509 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು



ನಿನಗೆ ಹಿಂದೂ ಆಗಿರೋದಕ್ಕೆ ನಾಚಿಕೆ ಆಗಿದ್ದರೆ ,ಹಿಂದೂಸ್ಥಾನ ಭಾರತವನ್ನು ಬಿಟ್ಟು ತೊಲುಗು ,ನಿಮ್ಮಂತ ಅಯೋಗ್ಯರು ನಮಗೆ ನಮ್ಮ ಧರ್ಮದ ಬಗ್ಗೆ ಹೇಳುವ ಅಗತ್ಯ ಇಲ್ಲಾ ,ನಿಮ್ಮಂತವರಿಗೆ ಅಫ್ಘಾನಿಸ್ತಾನ,ಪಾಕಿಸ್ತಾನವೇ ಸರಿ ,ಇರೋದಕ್ಕೆ ಬೆಳೆಯೋಕೆ ನಮ್ಮ ಧರ್ಮದ ಅಗತ್ಯ ನಿಮಗೆ ಬೇಕು ,ಬೆಳೆದ ಮೇಲೆ ಪಯಕೀಯರ ಸಹವಾಸ ಮೇಲು ನಿಮಗೆ ಅಲ್ಲವೇ ,ನಿಮ್ಮಂತ ಧರ್ಮ ದ್ರೋಹಿ ,ದೇಶ ದ್ರೋಹಿಗಳು ಆದಷ್ಟು ಬೇಗ ದೇಶ ಬಿಟ್ಟು ತೊಲಗಿ ಅಯೋಗ್ಯರಾ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದು ಹಿಂದೂಗಳು ಸತ್ತಾಗ ಇವಳು ಎಲ್ಲಿ ಅವಿತುಕೊಂಡಿದ್ದಳು ,ಇವಳಿಗೆ ಯಾವೋನೊ ಪರಧರ್ಮಿಯನ ಸಹವಾಸ ಇರಬೇಕು ಈ ರೀತಿ ಈಗ ಹಿಂದೂ ಧರ್ಮದ ಬಗ್ಗೆ ಹೇಳೋಕೆ.
ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ಆಕ್ರಮಣ ನಡೆಯುವುದು ಖಂಡನೀಯ….
ಅದನ್ನು ಬುದ್ದಿ ಇರುವ ಯಾರೂ ಸಮರ್ಥಿಸಲಾರನು.
ಸಮರ್ಥಿಸುವವನು ಮನುಶ್ಯನೇ ಅಲ್ಲ.
ಹಾಗಂತ ಆ ಹೆಸರಿನಲ್ಲಿ ಭಾರತದ ನಿರಪರಾದಿಗಳಾದ ಮುಗ್ದ ಮುಸಲ್ಮಾನರನ್ನೇಕೆ ಹತ್ಯೆ ಮಾಡಲಾಗುತ್ತದೆ.
ಅವರ ಇಲ್ಲಿನ ಪ್ರಾರ್ಥನಾ ಮಂದಿರಗಳನ್ನೇಕೆ ದ್ವಂಸ ಮಾಡಲಾಗುತ್ತದೆ.
ಅದಕ್ಕಾಗಿ ನಟಿ ನಾಚಿಕೆಪಡುತ್ತಿಫ್ದಾರೆ. ಅಷ್ಟೆ
ಇಲ್ಲಿನ ಮುಸಲ್ಮಾನರು ವಿನಾ ಕಾರಣ ಹಿಂದುಗಳಿಂದ ಹಿಂಸೆಗೊಳಗಾಗುತ್ತಾರೆ ತಾನೇ
ಅದು ಅದಕ್ಕೆ ಪ್ರತೀಕಾರವೇ
ಅವರೇನು ತಪ್ಪು ಮಾಡಿದ್ದಾರೆ..
ಸಾಧ್ಯವಾದರೆ ಬಾಂಗ್ಲಾ ದೇಶದ ಸರಕಾರಕ್ಕೆ ಭಾರತ ಸರಕಾರ ನಿರ್ಭಂದವೇರಲಿ.