Homeಮುಖಪುಟಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಗುರುಗ್ರಾಮದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌, “ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!” ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿಯ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಕೆಲವು ಹಿಂದೂ ಸಂಘಟನೆಗಳು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ. ಈ  ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಪ್ರಾರ್ಥನೆ ಸಲ್ಲಿಸುತ್ತಿರುವ ಜನರ ಮುಂದೆ ಬಜರಂಗದಳದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ಕ್ಲಿಪ್ ಹಂಚಿಕೊಂಡಿದ್ದಾರೆ.

ಸ್ವರಾ ಭಾಸ್ಕರ್ ತಮ್ಮ ಟ್ವಿಟರ್‌ ಖಾತೆಯಲ್ಲಿ, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ಇದೇ ಘಟನೆಯನ್ನು ಖಂಡಿಸಿರುವ ಮತ್ತೊಬ್ಬ ಟ್ವಿಟರ್ ಬಳಕೆದಾರರು “ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

ನಗರದ ಸೆಕ್ಟರ್ 47ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಹಿರಂಗ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿ ಬಂದಿರುವಾಗಲೇ ಈ ಘಟನೆ ಮುನ್ನೆಲೆಗೆ ಬಂದಿದೆ. ಮುಸ್ಲಿಂ ಸಮುದಾಯದ ಜನರು ಪ್ರಾರ್ಥನೆಗಾಗಿ ಸೇರುತ್ತಿದ್ದರು. ಈ ವೇಳೆ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ.

ಗುರುಗ್ರಾಮ ಆಡಳಿತವು ಗುರುತಿಸಿದ 37 ಸ್ಥಳಗಳಲ್ಲಿ ಪ್ರಾರ್ಥನಾ ಸ್ಥಳಗಳಲ್ಲಿ ಸೆಕ್ಟರ್ 47 ಮತ್ತು ಸೆಕ್ಟರ್ 12-ಎ ಕೂಡ ಸೇರಿವೆ, ಅಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಅವಕಾಶವಿದೆ. 2018 ರಲ್ಲಿ ಇದೇ ರೀತಿಯ ಘಟನೆ ನಡೆದ ನಂತರ, ಆಡಳಿತವು ಹಿಂದೂ ಮತ್ತು ಮುಸ್ಲಿಮರ ನಡುವೆ ಮಾತುಕತೆ ನಡೆಸಿ ಈ ಸ್ಥಳಗಳನ್ನು ನಿರ್ಧರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್‌ಪಿಸಿ ಸೆಕ್ಷನ್ 354 ಡಿ, 509 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿನಗೆ ಹಿಂದೂ ಆಗಿರೋದಕ್ಕೆ ನಾಚಿಕೆ ಆಗಿದ್ದರೆ ,ಹಿಂದೂಸ್ಥಾನ ಭಾರತವನ್ನು ಬಿಟ್ಟು ತೊಲುಗು ,ನಿಮ್ಮಂತ ಅಯೋಗ್ಯರು ನಮಗೆ ನಮ್ಮ ಧರ್ಮದ ಬಗ್ಗೆ ಹೇಳುವ ಅಗತ್ಯ ಇಲ್ಲಾ ,ನಿಮ್ಮಂತವರಿಗೆ ಅಫ್ಘಾನಿಸ್ತಾನ,ಪಾಕಿಸ್ತಾನವೇ ಸರಿ ,ಇರೋದಕ್ಕೆ ಬೆಳೆಯೋಕೆ ನಮ್ಮ ಧರ್ಮದ ಅಗತ್ಯ ನಿಮಗೆ ಬೇಕು ,ಬೆಳೆದ ಮೇಲೆ ಪಯಕೀಯರ ಸಹವಾಸ ಮೇಲು ನಿಮಗೆ ಅಲ್ಲವೇ ,ನಿಮ್ಮಂತ ಧರ್ಮ ದ್ರೋಹಿ ,ದೇಶ ದ್ರೋಹಿಗಳು ಆದಷ್ಟು ಬೇಗ ದೇಶ ಬಿಟ್ಟು ತೊಲಗಿ ಅಯೋಗ್ಯರಾ.

  2. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದು ಹಿಂದೂಗಳು ಸತ್ತಾಗ ಇವಳು ಎಲ್ಲಿ ಅವಿತುಕೊಂಡಿದ್ದಳು ,ಇವಳಿಗೆ ಯಾವೋನೊ ಪರಧರ್ಮಿಯನ ಸಹವಾಸ ಇರಬೇಕು ಈ ರೀತಿ ಈಗ ಹಿಂದೂ ಧರ್ಮದ ಬಗ್ಗೆ ಹೇಳೋಕೆ.

  3. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ಆಕ್ರಮಣ ನಡೆಯುವುದು ಖಂಡನೀಯ….
    ಅದನ್ನು ಬುದ್ದಿ ಇರುವ ಯಾರೂ ಸಮರ್ಥಿಸಲಾರನು.
    ಸಮರ್ಥಿಸುವವನು ಮನುಶ್ಯನೇ ಅಲ್ಲ.
    ಹಾಗಂತ ಆ ಹೆಸರಿನಲ್ಲಿ ಭಾರತದ ನಿರಪರಾದಿಗಳಾದ ಮುಗ್ದ ಮುಸಲ್ಮಾನರನ್ನೇಕೆ ಹತ್ಯೆ ಮಾಡಲಾಗುತ್ತದೆ.
    ಅವರ ಇಲ್ಲಿನ ಪ್ರಾರ್ಥನಾ ಮಂದಿರಗಳನ್ನೇಕೆ ದ್ವಂಸ ಮಾಡಲಾಗುತ್ತದೆ.
    ಅದಕ್ಕಾಗಿ ನಟಿ ನಾಚಿಕೆಪಡುತ್ತಿಫ್ದಾರೆ. ಅಷ್ಟೆ
    ಇಲ್ಲಿನ ಮುಸಲ್ಮಾನರು ವಿನಾ ಕಾರಣ ಹಿಂದುಗಳಿಂದ ಹಿಂಸೆಗೊಳಗಾಗುತ್ತಾರೆ ತಾನೇ
    ಅದು ಅದಕ್ಕೆ ಪ್ರತೀಕಾರವೇ
    ಅವರೇನು ತಪ್ಪು ಮಾಡಿದ್ದಾರೆ..
    ಸಾಧ್ಯವಾದರೆ ಬಾಂಗ್ಲಾ ದೇಶದ ಸರಕಾರಕ್ಕೆ ಭಾರತ ಸರಕಾರ ನಿರ್ಭಂದವೇರಲಿ.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...