Homeಮುಖಪುಟಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಗುರುಗ್ರಾಮದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌, “ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!” ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿಯ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಕೆಲವು ಹಿಂದೂ ಸಂಘಟನೆಗಳು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ. ಈ  ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಪ್ರಾರ್ಥನೆ ಸಲ್ಲಿಸುತ್ತಿರುವ ಜನರ ಮುಂದೆ ಬಜರಂಗದಳದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ಕ್ಲಿಪ್ ಹಂಚಿಕೊಂಡಿದ್ದಾರೆ.

ಸ್ವರಾ ಭಾಸ್ಕರ್ ತಮ್ಮ ಟ್ವಿಟರ್‌ ಖಾತೆಯಲ್ಲಿ, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ಇದೇ ಘಟನೆಯನ್ನು ಖಂಡಿಸಿರುವ ಮತ್ತೊಬ್ಬ ಟ್ವಿಟರ್ ಬಳಕೆದಾರರು “ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

ನಗರದ ಸೆಕ್ಟರ್ 47ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಹಿರಂಗ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿ ಬಂದಿರುವಾಗಲೇ ಈ ಘಟನೆ ಮುನ್ನೆಲೆಗೆ ಬಂದಿದೆ. ಮುಸ್ಲಿಂ ಸಮುದಾಯದ ಜನರು ಪ್ರಾರ್ಥನೆಗಾಗಿ ಸೇರುತ್ತಿದ್ದರು. ಈ ವೇಳೆ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ.

ಗುರುಗ್ರಾಮ ಆಡಳಿತವು ಗುರುತಿಸಿದ 37 ಸ್ಥಳಗಳಲ್ಲಿ ಪ್ರಾರ್ಥನಾ ಸ್ಥಳಗಳಲ್ಲಿ ಸೆಕ್ಟರ್ 47 ಮತ್ತು ಸೆಕ್ಟರ್ 12-ಎ ಕೂಡ ಸೇರಿವೆ, ಅಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಅವಕಾಶವಿದೆ. 2018 ರಲ್ಲಿ ಇದೇ ರೀತಿಯ ಘಟನೆ ನಡೆದ ನಂತರ, ಆಡಳಿತವು ಹಿಂದೂ ಮತ್ತು ಮುಸ್ಲಿಮರ ನಡುವೆ ಮಾತುಕತೆ ನಡೆಸಿ ಈ ಸ್ಥಳಗಳನ್ನು ನಿರ್ಧರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್‌ಪಿಸಿ ಸೆಕ್ಷನ್ 354 ಡಿ, 509 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿನಗೆ ಹಿಂದೂ ಆಗಿರೋದಕ್ಕೆ ನಾಚಿಕೆ ಆಗಿದ್ದರೆ ,ಹಿಂದೂಸ್ಥಾನ ಭಾರತವನ್ನು ಬಿಟ್ಟು ತೊಲುಗು ,ನಿಮ್ಮಂತ ಅಯೋಗ್ಯರು ನಮಗೆ ನಮ್ಮ ಧರ್ಮದ ಬಗ್ಗೆ ಹೇಳುವ ಅಗತ್ಯ ಇಲ್ಲಾ ,ನಿಮ್ಮಂತವರಿಗೆ ಅಫ್ಘಾನಿಸ್ತಾನ,ಪಾಕಿಸ್ತಾನವೇ ಸರಿ ,ಇರೋದಕ್ಕೆ ಬೆಳೆಯೋಕೆ ನಮ್ಮ ಧರ್ಮದ ಅಗತ್ಯ ನಿಮಗೆ ಬೇಕು ,ಬೆಳೆದ ಮೇಲೆ ಪಯಕೀಯರ ಸಹವಾಸ ಮೇಲು ನಿಮಗೆ ಅಲ್ಲವೇ ,ನಿಮ್ಮಂತ ಧರ್ಮ ದ್ರೋಹಿ ,ದೇಶ ದ್ರೋಹಿಗಳು ಆದಷ್ಟು ಬೇಗ ದೇಶ ಬಿಟ್ಟು ತೊಲಗಿ ಅಯೋಗ್ಯರಾ.

  2. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದು ಹಿಂದೂಗಳು ಸತ್ತಾಗ ಇವಳು ಎಲ್ಲಿ ಅವಿತುಕೊಂಡಿದ್ದಳು ,ಇವಳಿಗೆ ಯಾವೋನೊ ಪರಧರ್ಮಿಯನ ಸಹವಾಸ ಇರಬೇಕು ಈ ರೀತಿ ಈಗ ಹಿಂದೂ ಧರ್ಮದ ಬಗ್ಗೆ ಹೇಳೋಕೆ.

  3. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ಆಕ್ರಮಣ ನಡೆಯುವುದು ಖಂಡನೀಯ….
    ಅದನ್ನು ಬುದ್ದಿ ಇರುವ ಯಾರೂ ಸಮರ್ಥಿಸಲಾರನು.
    ಸಮರ್ಥಿಸುವವನು ಮನುಶ್ಯನೇ ಅಲ್ಲ.
    ಹಾಗಂತ ಆ ಹೆಸರಿನಲ್ಲಿ ಭಾರತದ ನಿರಪರಾದಿಗಳಾದ ಮುಗ್ದ ಮುಸಲ್ಮಾನರನ್ನೇಕೆ ಹತ್ಯೆ ಮಾಡಲಾಗುತ್ತದೆ.
    ಅವರ ಇಲ್ಲಿನ ಪ್ರಾರ್ಥನಾ ಮಂದಿರಗಳನ್ನೇಕೆ ದ್ವಂಸ ಮಾಡಲಾಗುತ್ತದೆ.
    ಅದಕ್ಕಾಗಿ ನಟಿ ನಾಚಿಕೆಪಡುತ್ತಿಫ್ದಾರೆ. ಅಷ್ಟೆ
    ಇಲ್ಲಿನ ಮುಸಲ್ಮಾನರು ವಿನಾ ಕಾರಣ ಹಿಂದುಗಳಿಂದ ಹಿಂಸೆಗೊಳಗಾಗುತ್ತಾರೆ ತಾನೇ
    ಅದು ಅದಕ್ಕೆ ಪ್ರತೀಕಾರವೇ
    ಅವರೇನು ತಪ್ಪು ಮಾಡಿದ್ದಾರೆ..
    ಸಾಧ್ಯವಾದರೆ ಬಾಂಗ್ಲಾ ದೇಶದ ಸರಕಾರಕ್ಕೆ ಭಾರತ ಸರಕಾರ ನಿರ್ಭಂದವೇರಲಿ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...