Homeಮುಖಪುಟಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಗುರುಗ್ರಾಮದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌, “ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!” ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿಯ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಕೆಲವು ಹಿಂದೂ ಸಂಘಟನೆಗಳು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ. ಈ  ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಪ್ರಾರ್ಥನೆ ಸಲ್ಲಿಸುತ್ತಿರುವ ಜನರ ಮುಂದೆ ಬಜರಂಗದಳದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ಕ್ಲಿಪ್ ಹಂಚಿಕೊಂಡಿದ್ದಾರೆ.

ಸ್ವರಾ ಭಾಸ್ಕರ್ ತಮ್ಮ ಟ್ವಿಟರ್‌ ಖಾತೆಯಲ್ಲಿ, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ಇದೇ ಘಟನೆಯನ್ನು ಖಂಡಿಸಿರುವ ಮತ್ತೊಬ್ಬ ಟ್ವಿಟರ್ ಬಳಕೆದಾರರು “ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

ನಗರದ ಸೆಕ್ಟರ್ 47ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಹಿರಂಗ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿ ಬಂದಿರುವಾಗಲೇ ಈ ಘಟನೆ ಮುನ್ನೆಲೆಗೆ ಬಂದಿದೆ. ಮುಸ್ಲಿಂ ಸಮುದಾಯದ ಜನರು ಪ್ರಾರ್ಥನೆಗಾಗಿ ಸೇರುತ್ತಿದ್ದರು. ಈ ವೇಳೆ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ.

ಗುರುಗ್ರಾಮ ಆಡಳಿತವು ಗುರುತಿಸಿದ 37 ಸ್ಥಳಗಳಲ್ಲಿ ಪ್ರಾರ್ಥನಾ ಸ್ಥಳಗಳಲ್ಲಿ ಸೆಕ್ಟರ್ 47 ಮತ್ತು ಸೆಕ್ಟರ್ 12-ಎ ಕೂಡ ಸೇರಿವೆ, ಅಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಅವಕಾಶವಿದೆ. 2018 ರಲ್ಲಿ ಇದೇ ರೀತಿಯ ಘಟನೆ ನಡೆದ ನಂತರ, ಆಡಳಿತವು ಹಿಂದೂ ಮತ್ತು ಮುಸ್ಲಿಮರ ನಡುವೆ ಮಾತುಕತೆ ನಡೆಸಿ ಈ ಸ್ಥಳಗಳನ್ನು ನಿರ್ಧರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್‌ಪಿಸಿ ಸೆಕ್ಷನ್ 354 ಡಿ, 509 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿನಗೆ ಹಿಂದೂ ಆಗಿರೋದಕ್ಕೆ ನಾಚಿಕೆ ಆಗಿದ್ದರೆ ,ಹಿಂದೂಸ್ಥಾನ ಭಾರತವನ್ನು ಬಿಟ್ಟು ತೊಲುಗು ,ನಿಮ್ಮಂತ ಅಯೋಗ್ಯರು ನಮಗೆ ನಮ್ಮ ಧರ್ಮದ ಬಗ್ಗೆ ಹೇಳುವ ಅಗತ್ಯ ಇಲ್ಲಾ ,ನಿಮ್ಮಂತವರಿಗೆ ಅಫ್ಘಾನಿಸ್ತಾನ,ಪಾಕಿಸ್ತಾನವೇ ಸರಿ ,ಇರೋದಕ್ಕೆ ಬೆಳೆಯೋಕೆ ನಮ್ಮ ಧರ್ಮದ ಅಗತ್ಯ ನಿಮಗೆ ಬೇಕು ,ಬೆಳೆದ ಮೇಲೆ ಪಯಕೀಯರ ಸಹವಾಸ ಮೇಲು ನಿಮಗೆ ಅಲ್ಲವೇ ,ನಿಮ್ಮಂತ ಧರ್ಮ ದ್ರೋಹಿ ,ದೇಶ ದ್ರೋಹಿಗಳು ಆದಷ್ಟು ಬೇಗ ದೇಶ ಬಿಟ್ಟು ತೊಲಗಿ ಅಯೋಗ್ಯರಾ.

  2. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದು ಹಿಂದೂಗಳು ಸತ್ತಾಗ ಇವಳು ಎಲ್ಲಿ ಅವಿತುಕೊಂಡಿದ್ದಳು ,ಇವಳಿಗೆ ಯಾವೋನೊ ಪರಧರ್ಮಿಯನ ಸಹವಾಸ ಇರಬೇಕು ಈ ರೀತಿ ಈಗ ಹಿಂದೂ ಧರ್ಮದ ಬಗ್ಗೆ ಹೇಳೋಕೆ.

  3. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ಆಕ್ರಮಣ ನಡೆಯುವುದು ಖಂಡನೀಯ….
    ಅದನ್ನು ಬುದ್ದಿ ಇರುವ ಯಾರೂ ಸಮರ್ಥಿಸಲಾರನು.
    ಸಮರ್ಥಿಸುವವನು ಮನುಶ್ಯನೇ ಅಲ್ಲ.
    ಹಾಗಂತ ಆ ಹೆಸರಿನಲ್ಲಿ ಭಾರತದ ನಿರಪರಾದಿಗಳಾದ ಮುಗ್ದ ಮುಸಲ್ಮಾನರನ್ನೇಕೆ ಹತ್ಯೆ ಮಾಡಲಾಗುತ್ತದೆ.
    ಅವರ ಇಲ್ಲಿನ ಪ್ರಾರ್ಥನಾ ಮಂದಿರಗಳನ್ನೇಕೆ ದ್ವಂಸ ಮಾಡಲಾಗುತ್ತದೆ.
    ಅದಕ್ಕಾಗಿ ನಟಿ ನಾಚಿಕೆಪಡುತ್ತಿಫ್ದಾರೆ. ಅಷ್ಟೆ
    ಇಲ್ಲಿನ ಮುಸಲ್ಮಾನರು ವಿನಾ ಕಾರಣ ಹಿಂದುಗಳಿಂದ ಹಿಂಸೆಗೊಳಗಾಗುತ್ತಾರೆ ತಾನೇ
    ಅದು ಅದಕ್ಕೆ ಪ್ರತೀಕಾರವೇ
    ಅವರೇನು ತಪ್ಪು ಮಾಡಿದ್ದಾರೆ..
    ಸಾಧ್ಯವಾದರೆ ಬಾಂಗ್ಲಾ ದೇಶದ ಸರಕಾರಕ್ಕೆ ಭಾರತ ಸರಕಾರ ನಿರ್ಭಂದವೇರಲಿ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...