Homeಮುಖಪುಟಸುಪ್ರೀಂ ತೀರ್ಪು: ರಾಹುಲ್‌ಗೆ ಮರಳಿ ಸಂಸದ ಸ್ಥಾನ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

ಸುಪ್ರೀಂ ತೀರ್ಪು: ರಾಹುಲ್‌ಗೆ ಮರಳಿ ಸಂಸದ ಸ್ಥಾನ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ’ ಉಪನಾಮದ ಕುರಿತು ಹೇಳಿಕೆ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಆದೇಶವು ಸಂಸತ್ತಿಗೆ ಮರಳಲು ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತದೆ.

ಮೋದಿ ಉಪನಾಮದ ಹೇಳಿಕೆಯಲ್ಲಿ ರಾಹುಲ್ ಗಾಂಧಿಯ ದೋಷಿಯನ್ನು ಸುಪ್ರೀಂ ತಡೆಹಿಡಿದ ನಂತರ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ”ಸುಪ್ರೀಂ ಕೋರ್ಟ್‌ನ ತೀರ್ಪು ಮತ್ತೊಮ್ಮೆ ಸಾಮಾನ್ಯ ಜನರ ನಂಬಿಕೆ ಬರುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕತೆ ಮತ್ತು ಸತ್ಯ ಯಾವಗಲೂ ಮೇಲುಗೈ ಸಾಧಿಸುತ್ತದೆ ಎಂಬ ತತ್ವವನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದು, ”ಮೂರು ವಿಷಯಗಳನ್ನು ದೀರ್ಘಕಾಲ ಮರೆಮಾಡಲಾಗುವುದಿಲ್ಲ: ಸೂರ್ಯ, ಚಂದ್ರ ಮತ್ತು ಸತ್ಯ’ ~ಗೌತಮ ಬುದ್ಧ” ಎಂದು ಟ್ವೀಟ್ ಮಾಡಿದ್ದಾರೆ.

”ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು. ಸತ್ಯಮೇವ ಜಯತೆ – ಜೈ ಹಿಂದ್” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದಾರೆ.

ಏನಿದು ಪ್ರಕರಣ:

2019 ರ ಲೋಕಸಭೆ ಚುನಾವಣೆಯಲ್ಲಿ ಮಾಡಿದ ಭಾಷಣದಲ್ಲಿ ನೀಡಲಾದ ಹೇಳಿಕೆಗಳಿಗಾಗಿ ಸೂರತ್ ನ್ಯಾಯಾಲಯವು ಮಾರ್ಚ್ 23ರಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರನ್ನು ದೋಷಿ ಎಂದು ಘೋಷಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಗರಿಷ್ಠ ಶಿಕ್ಷೆಯನ್ನು ನೀಡಿತು, ಇದು ಅವರನ್ನು ಲೋಕಸಭಾ ಸಂಸದರಾಗಿ ತಕ್ಷಣವೇ ಅನರ್ಹಗೊಳಿಸಲು ಕಾರಣವಾಯಿತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಅಪರಾಧ ಸಾಬೀತಾದ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ಶಿಕ್ಷೆಗೆ ತಡೆ ಕೋರಿ ಗಾಂಧಿ ಈ ಹಿಂದೆ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಜುಲೈ 7 ರಂದು, ವೀರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿದ ಪ್ರಕರಣ ಸೇರಿದಂತೆ ಕನಿಷ್ಠ 10 ಕ್ರಿಮಿನಲ್ ಪ್ರಕರಣಗಳು ರಾಹುಲ್ ವಿರುದ್ಧ ಬಾಕಿ ಉಳಿದಿವೆ ಎಂದು ಗಮನಿಸಿದ ಹೈಕೋರ್ಟ್ ಸೂರತ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಲಂಡನ್‌ನಲ್ಲಿ ಹಿಂದುತ್ವ ಸಿದ್ಧಾಂತದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸತ್ಯಕಿ ಸಾವರ್ಕರ್ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಬುಧವಾರ, ರಾಹುಲ್ ಗಾಂಧಿ ಅವರು ”ತಾವು ಯಾವುದೇ ಅಪರಾಧದಲ್ಲಿ ತಪ್ಪಿತಸ್ಥನಲ್ಲ ಮತ್ತು ಅವರ ಹೇಳಿಕೆಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದರು. ಕ್ಷಮೆ ಯಾಚಿಸಬೇಕೆಂದಿದ್ದರೆ ಈ ಮೊದಲೇ ಮಾಡುತ್ತಿದ್ದೆ ಎಂದೂ ಅವರು ಹೇಳಿದ್ದಾರೆ.

ಸಂಸದರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಆಡಳಿತ ಮಂಡಳಿಯ ನಡವಳಿಕೆ ಮತ್ತು ಕಾರ್ಯಕ್ಷಮತೆಯನ್ನು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡುವುದು ಅಗತ್ಯ ಎಂದುವ ರಾಹುಲ್ ಗಾಂಧಿ ಹೇಳಿದ್ದರು.

ಅವರು ತಮ್ಮ ಮೇಲಿನ ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಸದ್ಯ ಅವರ ಮೇಲಿನ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.

ರಾಹುಲ್ ಗಾಂಧಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿಚಾರಣೆ ಪೂರ್ಣಗೊಂಡಿದೆ ಮತ್ತು ರಾಹುಲ್‌ ಗಾಂಧಿಗೆ ಶಿಕ್ಷೆ ವಿಧಿಸಲಾಗಿದೆ, ಆದರೂ ಇದುವರೆಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೋದಿ ಸರ್‌ನೇಮ್ ಪ್ರಕರಣ: ರಾಹುಲ್ ಗಾಂಧಿ ಮೇಲಿನ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...