Homeಮುಖಪುಟಸುಪ್ರೀಂ ತೀರ್ಪು: ರಾಹುಲ್‌ಗೆ ಮರಳಿ ಸಂಸದ ಸ್ಥಾನ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

ಸುಪ್ರೀಂ ತೀರ್ಪು: ರಾಹುಲ್‌ಗೆ ಮರಳಿ ಸಂಸದ ಸ್ಥಾನ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ’ ಉಪನಾಮದ ಕುರಿತು ಹೇಳಿಕೆ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಆದೇಶವು ಸಂಸತ್ತಿಗೆ ಮರಳಲು ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತದೆ.

ಮೋದಿ ಉಪನಾಮದ ಹೇಳಿಕೆಯಲ್ಲಿ ರಾಹುಲ್ ಗಾಂಧಿಯ ದೋಷಿಯನ್ನು ಸುಪ್ರೀಂ ತಡೆಹಿಡಿದ ನಂತರ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ”ಸುಪ್ರೀಂ ಕೋರ್ಟ್‌ನ ತೀರ್ಪು ಮತ್ತೊಮ್ಮೆ ಸಾಮಾನ್ಯ ಜನರ ನಂಬಿಕೆ ಬರುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕತೆ ಮತ್ತು ಸತ್ಯ ಯಾವಗಲೂ ಮೇಲುಗೈ ಸಾಧಿಸುತ್ತದೆ ಎಂಬ ತತ್ವವನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದು, ”ಮೂರು ವಿಷಯಗಳನ್ನು ದೀರ್ಘಕಾಲ ಮರೆಮಾಡಲಾಗುವುದಿಲ್ಲ: ಸೂರ್ಯ, ಚಂದ್ರ ಮತ್ತು ಸತ್ಯ’ ~ಗೌತಮ ಬುದ್ಧ” ಎಂದು ಟ್ವೀಟ್ ಮಾಡಿದ್ದಾರೆ.

”ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು. ಸತ್ಯಮೇವ ಜಯತೆ – ಜೈ ಹಿಂದ್” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದಾರೆ.

ಏನಿದು ಪ್ರಕರಣ:

2019 ರ ಲೋಕಸಭೆ ಚುನಾವಣೆಯಲ್ಲಿ ಮಾಡಿದ ಭಾಷಣದಲ್ಲಿ ನೀಡಲಾದ ಹೇಳಿಕೆಗಳಿಗಾಗಿ ಸೂರತ್ ನ್ಯಾಯಾಲಯವು ಮಾರ್ಚ್ 23ರಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರನ್ನು ದೋಷಿ ಎಂದು ಘೋಷಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಗರಿಷ್ಠ ಶಿಕ್ಷೆಯನ್ನು ನೀಡಿತು, ಇದು ಅವರನ್ನು ಲೋಕಸಭಾ ಸಂಸದರಾಗಿ ತಕ್ಷಣವೇ ಅನರ್ಹಗೊಳಿಸಲು ಕಾರಣವಾಯಿತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಅಪರಾಧ ಸಾಬೀತಾದ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ಶಿಕ್ಷೆಗೆ ತಡೆ ಕೋರಿ ಗಾಂಧಿ ಈ ಹಿಂದೆ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಜುಲೈ 7 ರಂದು, ವೀರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿದ ಪ್ರಕರಣ ಸೇರಿದಂತೆ ಕನಿಷ್ಠ 10 ಕ್ರಿಮಿನಲ್ ಪ್ರಕರಣಗಳು ರಾಹುಲ್ ವಿರುದ್ಧ ಬಾಕಿ ಉಳಿದಿವೆ ಎಂದು ಗಮನಿಸಿದ ಹೈಕೋರ್ಟ್ ಸೂರತ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಲಂಡನ್‌ನಲ್ಲಿ ಹಿಂದುತ್ವ ಸಿದ್ಧಾಂತದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸತ್ಯಕಿ ಸಾವರ್ಕರ್ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಬುಧವಾರ, ರಾಹುಲ್ ಗಾಂಧಿ ಅವರು ”ತಾವು ಯಾವುದೇ ಅಪರಾಧದಲ್ಲಿ ತಪ್ಪಿತಸ್ಥನಲ್ಲ ಮತ್ತು ಅವರ ಹೇಳಿಕೆಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದರು. ಕ್ಷಮೆ ಯಾಚಿಸಬೇಕೆಂದಿದ್ದರೆ ಈ ಮೊದಲೇ ಮಾಡುತ್ತಿದ್ದೆ ಎಂದೂ ಅವರು ಹೇಳಿದ್ದಾರೆ.

ಸಂಸದರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಆಡಳಿತ ಮಂಡಳಿಯ ನಡವಳಿಕೆ ಮತ್ತು ಕಾರ್ಯಕ್ಷಮತೆಯನ್ನು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡುವುದು ಅಗತ್ಯ ಎಂದುವ ರಾಹುಲ್ ಗಾಂಧಿ ಹೇಳಿದ್ದರು.

ಅವರು ತಮ್ಮ ಮೇಲಿನ ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಸದ್ಯ ಅವರ ಮೇಲಿನ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.

ರಾಹುಲ್ ಗಾಂಧಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿಚಾರಣೆ ಪೂರ್ಣಗೊಂಡಿದೆ ಮತ್ತು ರಾಹುಲ್‌ ಗಾಂಧಿಗೆ ಶಿಕ್ಷೆ ವಿಧಿಸಲಾಗಿದೆ, ಆದರೂ ಇದುವರೆಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೋದಿ ಸರ್‌ನೇಮ್ ಪ್ರಕರಣ: ರಾಹುಲ್ ಗಾಂಧಿ ಮೇಲಿನ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read