Homeಕರ್ನಾಟಕಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ...

ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಮರು ಪರಿಷ್ಕರಣೆಯ ವಿರುದ್ಧದ ಪ್ರತಿಭಟನೆ ಮತ್ತಷ್ಟು ಬಲಗೊಳ್ಳುತ್ತಿದೆ. ನಾಡಿನ ಹಲವಾರು ಸಾಹಿತಿಗಳು ಕೋಮುವಾದ ಹರಡುವ ಪಠ್ಯ ಪುಸ್ತಕದಲ್ಲಿ ನಮ್ಮ ಬರಹಗಳು ಇರಬಾರದು ಎಂದು ಸರ್ಕಾರದಕ್ಕೆ ಪತ್ರ ಬರೆದಿದ್ದು, ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ವಾಪಾಸು ಪಡೆದಿದ್ದಾರೆ. ಇದೀಗ ಕನ್ನಡ ವರನಟ ಡಾ| ರಾಜ ಕುಮಾರ್‌ ಬಗ್ಗೆ ಬರೆದಿದ್ದ ಬರಹವನ್ನು ಪಠ್ಯದಿಂದ ಲೇಖಕ ದೊಡ್ಡಹುಲ್ಲೂರು ರೊಕ್ಕೋಜಿರಾವ್ ಅವರು ಬುಧವಾರದಂದು ವಾಪಾಸು ಪಡೆದಿದ್ದಾರೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಬರೆದಿರುವ ಪತ್ರದಲ್ಲಿ ರುಕ್ಕೋಜಿರಾವ್, “ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರುಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಪಠ್ಯ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ” ಎಂದು ಹೇಳಿದ್ದು, ರಾಜಕುಮಾರ್ ಅವರ ಬಗ್ಗೆ ಬರೆದ ತಮ್ಮ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಬಳಸಬಾರದು ಎಂದು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತ್ರದಲ್ಲಿ ಅವರು, “ನಾನು ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ಲೇಖನವನ್ನು ಪ್ರೋ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿ 6 ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪುಸ್ತಕಕ್ಕೆ ಸೇರಿಸಲು ಒಪ್ಪಿಗೆ ನೀಡಿದ್ದೆ. ಈಗ ರೋಹಿತ್‌ ಚಕ್ರತೀರ್ಥ ಎಂಬುವವರ ಅಧ್ಯಕ್ಷತೆಯಲ್ಲಿ ನಡೆದ ಮರುಪರಿಷ್ಕರಣೆ ಬಗ್ಗೆ ದೊಡ್ಡ ವಿವಾದ ಎದ್ದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ‘ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

“ರೋಹಿತ್ ಚಕ್ರತೀರ್ಥರು ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದಾರೆ. ಕುವೆಂಪು ಅವರನ್ನು ಕೀಳಾಗಿ ಕಂಡಿದ್ದಾರೆ. ಕನ್ನಡ ಭಾಷೆಯನ್ನು ತನ್ನ ಮೇಲೆ ಹೇರಲಾಗಿದೆ ಎಂದು ಕನ್ನಡ ವಿರೋಧಿ ಮಾತನಾಡಿದ್ದಾರೆ” ಎಂದು ರುಕ್ಕೋಜಿರಾವ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಅಪೂರ್ವ ಕನ್ನಡ ಪ್ರೇಮಿಯಾದ, ನಾಡು ನುಡಿಗಾಗಿ ಹೋರಾಡಿದ ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ತನ್ನ ಲೇಖನವನ್ನು, ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರು ಪರಿಷ್ಕರಣೆ ಪಠ್ಯದಲ್ಲಿ ಬಳಸಲು ನಾನು ಒಪ್ಪುವುದಿಲ್ಲ. ಇಂಥವರ ನೇತೃತ್ವದ ಮರು ಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ ಎಂಬ ಕಾರಣವನ್ನು ತಿಳಿಸುತ್ತಾ ನನ್ನ ಲೇಖನವನ್ನು ಬಳಸಬಾರದು ಎಂದು ವಿನಂತಿಸುತ್ತೇನೆ” ಎಂದು ರುಕ್ಕೋಜಿರಾವ್ ಪತ್ರದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ನಿರ್ಧಾರ ದೊಡ್ಡ ಹುಲ್ಲೂರು ರುಕ್ಕೋಜಿ ರಾವ್ ಸರ್. ಸರ್ ನಿಮ್ಮ ಡಾಕ್ಟರ್. ರಾಜಕುಮಾರ್ ಸಮಗ್ರ ಸಾಹಿತ್ಯ ಪುಸ್ತಕ ಅವಶ್ಯ ಬೇಕಾಗಿದೆ. ತಾವು ದಯವಿಟ್ಟು ನನಗೆ ಸಿಗುವಂತೆ ಮಾಡಿ. ಹಣವನ್ನು ಸಂದಾಯ ಮಾಡುವೆ. ತೊಂದರೆಗೆ ಕ್ಷಮೆ ಇರಲಿ. ನಿಮ್ಮ ರವೀಂದ್ರ. ಕುಲಕರ್ಣಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...