Homeಕರ್ನಾಟಕಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ...

ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಮರು ಪರಿಷ್ಕರಣೆಯ ವಿರುದ್ಧದ ಪ್ರತಿಭಟನೆ ಮತ್ತಷ್ಟು ಬಲಗೊಳ್ಳುತ್ತಿದೆ. ನಾಡಿನ ಹಲವಾರು ಸಾಹಿತಿಗಳು ಕೋಮುವಾದ ಹರಡುವ ಪಠ್ಯ ಪುಸ್ತಕದಲ್ಲಿ ನಮ್ಮ ಬರಹಗಳು ಇರಬಾರದು ಎಂದು ಸರ್ಕಾರದಕ್ಕೆ ಪತ್ರ ಬರೆದಿದ್ದು, ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ವಾಪಾಸು ಪಡೆದಿದ್ದಾರೆ. ಇದೀಗ ಕನ್ನಡ ವರನಟ ಡಾ| ರಾಜ ಕುಮಾರ್‌ ಬಗ್ಗೆ ಬರೆದಿದ್ದ ಬರಹವನ್ನು ಪಠ್ಯದಿಂದ ಲೇಖಕ ದೊಡ್ಡಹುಲ್ಲೂರು ರೊಕ್ಕೋಜಿರಾವ್ ಅವರು ಬುಧವಾರದಂದು ವಾಪಾಸು ಪಡೆದಿದ್ದಾರೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಬರೆದಿರುವ ಪತ್ರದಲ್ಲಿ ರುಕ್ಕೋಜಿರಾವ್, “ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರುಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಪಠ್ಯ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ” ಎಂದು ಹೇಳಿದ್ದು, ರಾಜಕುಮಾರ್ ಅವರ ಬಗ್ಗೆ ಬರೆದ ತಮ್ಮ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಬಳಸಬಾರದು ಎಂದು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತ್ರದಲ್ಲಿ ಅವರು, “ನಾನು ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ಲೇಖನವನ್ನು ಪ್ರೋ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿ 6 ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪುಸ್ತಕಕ್ಕೆ ಸೇರಿಸಲು ಒಪ್ಪಿಗೆ ನೀಡಿದ್ದೆ. ಈಗ ರೋಹಿತ್‌ ಚಕ್ರತೀರ್ಥ ಎಂಬುವವರ ಅಧ್ಯಕ್ಷತೆಯಲ್ಲಿ ನಡೆದ ಮರುಪರಿಷ್ಕರಣೆ ಬಗ್ಗೆ ದೊಡ್ಡ ವಿವಾದ ಎದ್ದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ‘ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

“ರೋಹಿತ್ ಚಕ್ರತೀರ್ಥರು ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದಾರೆ. ಕುವೆಂಪು ಅವರನ್ನು ಕೀಳಾಗಿ ಕಂಡಿದ್ದಾರೆ. ಕನ್ನಡ ಭಾಷೆಯನ್ನು ತನ್ನ ಮೇಲೆ ಹೇರಲಾಗಿದೆ ಎಂದು ಕನ್ನಡ ವಿರೋಧಿ ಮಾತನಾಡಿದ್ದಾರೆ” ಎಂದು ರುಕ್ಕೋಜಿರಾವ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಅಪೂರ್ವ ಕನ್ನಡ ಪ್ರೇಮಿಯಾದ, ನಾಡು ನುಡಿಗಾಗಿ ಹೋರಾಡಿದ ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ತನ್ನ ಲೇಖನವನ್ನು, ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರು ಪರಿಷ್ಕರಣೆ ಪಠ್ಯದಲ್ಲಿ ಬಳಸಲು ನಾನು ಒಪ್ಪುವುದಿಲ್ಲ. ಇಂಥವರ ನೇತೃತ್ವದ ಮರು ಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ ಎಂಬ ಕಾರಣವನ್ನು ತಿಳಿಸುತ್ತಾ ನನ್ನ ಲೇಖನವನ್ನು ಬಳಸಬಾರದು ಎಂದು ವಿನಂತಿಸುತ್ತೇನೆ” ಎಂದು ರುಕ್ಕೋಜಿರಾವ್ ಪತ್ರದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ನಿರ್ಧಾರ ದೊಡ್ಡ ಹುಲ್ಲೂರು ರುಕ್ಕೋಜಿ ರಾವ್ ಸರ್. ಸರ್ ನಿಮ್ಮ ಡಾಕ್ಟರ್. ರಾಜಕುಮಾರ್ ಸಮಗ್ರ ಸಾಹಿತ್ಯ ಪುಸ್ತಕ ಅವಶ್ಯ ಬೇಕಾಗಿದೆ. ತಾವು ದಯವಿಟ್ಟು ನನಗೆ ಸಿಗುವಂತೆ ಮಾಡಿ. ಹಣವನ್ನು ಸಂದಾಯ ಮಾಡುವೆ. ತೊಂದರೆಗೆ ಕ್ಷಮೆ ಇರಲಿ. ನಿಮ್ಮ ರವೀಂದ್ರ. ಕುಲಕರ್ಣಿ.

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...