Homeಕರ್ನಾಟಕಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ...

ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಮರು ಪರಿಷ್ಕರಣೆಯ ವಿರುದ್ಧದ ಪ್ರತಿಭಟನೆ ಮತ್ತಷ್ಟು ಬಲಗೊಳ್ಳುತ್ತಿದೆ. ನಾಡಿನ ಹಲವಾರು ಸಾಹಿತಿಗಳು ಕೋಮುವಾದ ಹರಡುವ ಪಠ್ಯ ಪುಸ್ತಕದಲ್ಲಿ ನಮ್ಮ ಬರಹಗಳು ಇರಬಾರದು ಎಂದು ಸರ್ಕಾರದಕ್ಕೆ ಪತ್ರ ಬರೆದಿದ್ದು, ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ವಾಪಾಸು ಪಡೆದಿದ್ದಾರೆ. ಇದೀಗ ಕನ್ನಡ ವರನಟ ಡಾ| ರಾಜ ಕುಮಾರ್‌ ಬಗ್ಗೆ ಬರೆದಿದ್ದ ಬರಹವನ್ನು ಪಠ್ಯದಿಂದ ಲೇಖಕ ದೊಡ್ಡಹುಲ್ಲೂರು ರೊಕ್ಕೋಜಿರಾವ್ ಅವರು ಬುಧವಾರದಂದು ವಾಪಾಸು ಪಡೆದಿದ್ದಾರೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಬರೆದಿರುವ ಪತ್ರದಲ್ಲಿ ರುಕ್ಕೋಜಿರಾವ್, “ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರುಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಪಠ್ಯ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ” ಎಂದು ಹೇಳಿದ್ದು, ರಾಜಕುಮಾರ್ ಅವರ ಬಗ್ಗೆ ಬರೆದ ತಮ್ಮ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಬಳಸಬಾರದು ಎಂದು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತ್ರದಲ್ಲಿ ಅವರು, “ನಾನು ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ಲೇಖನವನ್ನು ಪ್ರೋ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿ 6 ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪುಸ್ತಕಕ್ಕೆ ಸೇರಿಸಲು ಒಪ್ಪಿಗೆ ನೀಡಿದ್ದೆ. ಈಗ ರೋಹಿತ್‌ ಚಕ್ರತೀರ್ಥ ಎಂಬುವವರ ಅಧ್ಯಕ್ಷತೆಯಲ್ಲಿ ನಡೆದ ಮರುಪರಿಷ್ಕರಣೆ ಬಗ್ಗೆ ದೊಡ್ಡ ವಿವಾದ ಎದ್ದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ‘ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

“ರೋಹಿತ್ ಚಕ್ರತೀರ್ಥರು ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದಾರೆ. ಕುವೆಂಪು ಅವರನ್ನು ಕೀಳಾಗಿ ಕಂಡಿದ್ದಾರೆ. ಕನ್ನಡ ಭಾಷೆಯನ್ನು ತನ್ನ ಮೇಲೆ ಹೇರಲಾಗಿದೆ ಎಂದು ಕನ್ನಡ ವಿರೋಧಿ ಮಾತನಾಡಿದ್ದಾರೆ” ಎಂದು ರುಕ್ಕೋಜಿರಾವ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಅಪೂರ್ವ ಕನ್ನಡ ಪ್ರೇಮಿಯಾದ, ನಾಡು ನುಡಿಗಾಗಿ ಹೋರಾಡಿದ ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ತನ್ನ ಲೇಖನವನ್ನು, ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರು ಪರಿಷ್ಕರಣೆ ಪಠ್ಯದಲ್ಲಿ ಬಳಸಲು ನಾನು ಒಪ್ಪುವುದಿಲ್ಲ. ಇಂಥವರ ನೇತೃತ್ವದ ಮರು ಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ ಎಂಬ ಕಾರಣವನ್ನು ತಿಳಿಸುತ್ತಾ ನನ್ನ ಲೇಖನವನ್ನು ಬಳಸಬಾರದು ಎಂದು ವಿನಂತಿಸುತ್ತೇನೆ” ಎಂದು ರುಕ್ಕೋಜಿರಾವ್ ಪತ್ರದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ನಿರ್ಧಾರ ದೊಡ್ಡ ಹುಲ್ಲೂರು ರುಕ್ಕೋಜಿ ರಾವ್ ಸರ್. ಸರ್ ನಿಮ್ಮ ಡಾಕ್ಟರ್. ರಾಜಕುಮಾರ್ ಸಮಗ್ರ ಸಾಹಿತ್ಯ ಪುಸ್ತಕ ಅವಶ್ಯ ಬೇಕಾಗಿದೆ. ತಾವು ದಯವಿಟ್ಟು ನನಗೆ ಸಿಗುವಂತೆ ಮಾಡಿ. ಹಣವನ್ನು ಸಂದಾಯ ಮಾಡುವೆ. ತೊಂದರೆಗೆ ಕ್ಷಮೆ ಇರಲಿ. ನಿಮ್ಮ ರವೀಂದ್ರ. ಕುಲಕರ್ಣಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...