Homeಮುಖಪುಟನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ...

ನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ಯುದ್ಧ ಅಪರಾಧವನ್ನು ಮುಂದುವರಿಸಿದ್ದು, ಗಾಝಾದ ರಫಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ 100ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇಸ್ರೇಲ್‌ ದಾಳಿ ಹಿನ್ನೆಲೆ ಗಾಝಾ ಪಟ್ಟಿಯಿಂದ ಲಕ್ಷಾಂತರ ಮಂದಿ ಈಜಿಪ್ಟ್ ಗಡಿಯಲ್ಲಿರುವ ರಫಾಗೆ ವಲಸೆ ಹೋಗಿದ್ದರು. ಈಜಿಪ್ಟ್ ಗಡಿಯಲ್ಲಿರುವ ರಫಾದಲ್ಲಿ ಜನಸಂಖ್ಯೆಯು 1.4 ಮಿಲಿಯನ್ ಇದೆ ಎಂದು ವರದಿಯು ತಿಳಿಸಿದೆ. ಅಲ್ಲಿ ನಾಗರಿಕರು ಆಹಾರ, ನೀರು ಮತ್ತು ಔಷಧದ ಕೊರೆತೆಯನ್ನು ಎದುರಿಸುತ್ತಿದ್ದಾರೆ. ಇದೀಗ ಇಸ್ರೇಲ್‌ ರಫಾದಲ್ಲಿ ನಿರಾಶ್ರಿತರನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡುತ್ತಿದೆ. ಇಸ್ರೇಲ್ ರಫಾವನ್ನು ಕೊನೆಯದಾಗಿ ಉಳಿದಿರುವ ಹಮಾಸ್‌ನ ಭದ್ರಕೋಟೆ ಎಂದು ಹೇಳಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದರು. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿತ್ತು. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದರು.

ಎಪಿ ವರದಿಯ ಪ್ರಕಾರ, ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಅವರು ದಾಳಿಯಲ್ಲಿ ಕನಿಷ್ಠ 67 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆದರೆ ರಾಫಾದಲ್ಲಿನ ಅಬು ಯೂಸೆಫ್ ಅಲ್-ನಜ್ಜರ್ ಆಸ್ಪತ್ರೆಯಲ್ಲಿ ಪತ್ರಕರ್ತರೊಬ್ಬರು ಕನಿಷ್ಠ 50 ದೇಹಗಳನ್ನು ಎಣಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ರಾಫಾದಲ್ಲಿ ರಾತ್ರಿ ಉಂಟಾಗಿರುವ ಬಾಂಬ್ ಸ್ಫೋಟದಿಂದಾಗಿ ಮನೆಗಳು ಧ್ವಂಸವಾಗಿರುವುದು ಮತ್ತು ರಕ್ತಸಿಕ್ತವಾದ ದೇಹಗಳು ಆಸ್ಪತ್ರೆಗಳಲ್ಲಿ ಬಿದ್ದುಕೊಂಡಿರುವುದು ಕಂಡು ಬಂದಿದೆ. ವರದಿಯ ಪ್ರಕಾರ, ಇಸ್ರೇಲ್‌ ವಿಶೇಷ ಪಡೆಗಳು ರಾಫಾದಲ್ಲಿ ಎರಡನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಮುಂಜಾನೆ 1:49ಕ್ಕೆ ಗುಂಡಿನ ದಾಳಿ ನಡೆಸಿದೆ. ಇದಾದ ಒಂದು ನಿಮಿಷದ ನಂತರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ವಾಯುದಾಳಿ ನಡೆಸಿದೆ.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ ಅ.7ರಂದು ಯುದ್ಧ ಆರಂಭವಾದ ದಿನದಿಂದ ಗಾಝಾದಲ್ಲಿ 27,000ಕ್ಕೂ ಅಧಿಕ ಜನರ ಹತ್ಯೆ ನಡೆದಿದೆ. ಇದರಲ್ಲಿ 12,300ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಸುಮಾರು 8,400 ಮಹಿಳೆಯರ ಹತ್ಯೆ ನಡೆದಿದೆ. ಗಾಝಾದಲ್ಲಿ ಒಟ್ಟು ಸಾವಿನ ಸಂಖ್ಯೆಯಲ್ಲಿ 43% ದಷ್ಟು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಇನ್ನು 60,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಮನೆ-ನಿವಾಸಗಳನ್ನು ಕಳೆದುಕೊಂಡು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...