Homeಮುಖಪುಟನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ...

ನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ಯುದ್ಧ ಅಪರಾಧವನ್ನು ಮುಂದುವರಿಸಿದ್ದು, ಗಾಝಾದ ರಫಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ 100ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇಸ್ರೇಲ್‌ ದಾಳಿ ಹಿನ್ನೆಲೆ ಗಾಝಾ ಪಟ್ಟಿಯಿಂದ ಲಕ್ಷಾಂತರ ಮಂದಿ ಈಜಿಪ್ಟ್ ಗಡಿಯಲ್ಲಿರುವ ರಫಾಗೆ ವಲಸೆ ಹೋಗಿದ್ದರು. ಈಜಿಪ್ಟ್ ಗಡಿಯಲ್ಲಿರುವ ರಫಾದಲ್ಲಿ ಜನಸಂಖ್ಯೆಯು 1.4 ಮಿಲಿಯನ್ ಇದೆ ಎಂದು ವರದಿಯು ತಿಳಿಸಿದೆ. ಅಲ್ಲಿ ನಾಗರಿಕರು ಆಹಾರ, ನೀರು ಮತ್ತು ಔಷಧದ ಕೊರೆತೆಯನ್ನು ಎದುರಿಸುತ್ತಿದ್ದಾರೆ. ಇದೀಗ ಇಸ್ರೇಲ್‌ ರಫಾದಲ್ಲಿ ನಿರಾಶ್ರಿತರನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡುತ್ತಿದೆ. ಇಸ್ರೇಲ್ ರಫಾವನ್ನು ಕೊನೆಯದಾಗಿ ಉಳಿದಿರುವ ಹಮಾಸ್‌ನ ಭದ್ರಕೋಟೆ ಎಂದು ಹೇಳಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದರು. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿತ್ತು. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದರು.

ಎಪಿ ವರದಿಯ ಪ್ರಕಾರ, ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಅವರು ದಾಳಿಯಲ್ಲಿ ಕನಿಷ್ಠ 67 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆದರೆ ರಾಫಾದಲ್ಲಿನ ಅಬು ಯೂಸೆಫ್ ಅಲ್-ನಜ್ಜರ್ ಆಸ್ಪತ್ರೆಯಲ್ಲಿ ಪತ್ರಕರ್ತರೊಬ್ಬರು ಕನಿಷ್ಠ 50 ದೇಹಗಳನ್ನು ಎಣಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ರಾಫಾದಲ್ಲಿ ರಾತ್ರಿ ಉಂಟಾಗಿರುವ ಬಾಂಬ್ ಸ್ಫೋಟದಿಂದಾಗಿ ಮನೆಗಳು ಧ್ವಂಸವಾಗಿರುವುದು ಮತ್ತು ರಕ್ತಸಿಕ್ತವಾದ ದೇಹಗಳು ಆಸ್ಪತ್ರೆಗಳಲ್ಲಿ ಬಿದ್ದುಕೊಂಡಿರುವುದು ಕಂಡು ಬಂದಿದೆ. ವರದಿಯ ಪ್ರಕಾರ, ಇಸ್ರೇಲ್‌ ವಿಶೇಷ ಪಡೆಗಳು ರಾಫಾದಲ್ಲಿ ಎರಡನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಮುಂಜಾನೆ 1:49ಕ್ಕೆ ಗುಂಡಿನ ದಾಳಿ ನಡೆಸಿದೆ. ಇದಾದ ಒಂದು ನಿಮಿಷದ ನಂತರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ವಾಯುದಾಳಿ ನಡೆಸಿದೆ.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ ಅ.7ರಂದು ಯುದ್ಧ ಆರಂಭವಾದ ದಿನದಿಂದ ಗಾಝಾದಲ್ಲಿ 27,000ಕ್ಕೂ ಅಧಿಕ ಜನರ ಹತ್ಯೆ ನಡೆದಿದೆ. ಇದರಲ್ಲಿ 12,300ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಸುಮಾರು 8,400 ಮಹಿಳೆಯರ ಹತ್ಯೆ ನಡೆದಿದೆ. ಗಾಝಾದಲ್ಲಿ ಒಟ್ಟು ಸಾವಿನ ಸಂಖ್ಯೆಯಲ್ಲಿ 43% ದಷ್ಟು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಇನ್ನು 60,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಮನೆ-ನಿವಾಸಗಳನ್ನು ಕಳೆದುಕೊಂಡು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...