Homeಮುಖಪುಟನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ...

ನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ಯುದ್ಧ ಅಪರಾಧವನ್ನು ಮುಂದುವರಿಸಿದ್ದು, ಗಾಝಾದ ರಫಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ 100ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇಸ್ರೇಲ್‌ ದಾಳಿ ಹಿನ್ನೆಲೆ ಗಾಝಾ ಪಟ್ಟಿಯಿಂದ ಲಕ್ಷಾಂತರ ಮಂದಿ ಈಜಿಪ್ಟ್ ಗಡಿಯಲ್ಲಿರುವ ರಫಾಗೆ ವಲಸೆ ಹೋಗಿದ್ದರು. ಈಜಿಪ್ಟ್ ಗಡಿಯಲ್ಲಿರುವ ರಫಾದಲ್ಲಿ ಜನಸಂಖ್ಯೆಯು 1.4 ಮಿಲಿಯನ್ ಇದೆ ಎಂದು ವರದಿಯು ತಿಳಿಸಿದೆ. ಅಲ್ಲಿ ನಾಗರಿಕರು ಆಹಾರ, ನೀರು ಮತ್ತು ಔಷಧದ ಕೊರೆತೆಯನ್ನು ಎದುರಿಸುತ್ತಿದ್ದಾರೆ. ಇದೀಗ ಇಸ್ರೇಲ್‌ ರಫಾದಲ್ಲಿ ನಿರಾಶ್ರಿತರನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡುತ್ತಿದೆ. ಇಸ್ರೇಲ್ ರಫಾವನ್ನು ಕೊನೆಯದಾಗಿ ಉಳಿದಿರುವ ಹಮಾಸ್‌ನ ಭದ್ರಕೋಟೆ ಎಂದು ಹೇಳಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದರು. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿತ್ತು. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದರು.

ಎಪಿ ವರದಿಯ ಪ್ರಕಾರ, ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಅವರು ದಾಳಿಯಲ್ಲಿ ಕನಿಷ್ಠ 67 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆದರೆ ರಾಫಾದಲ್ಲಿನ ಅಬು ಯೂಸೆಫ್ ಅಲ್-ನಜ್ಜರ್ ಆಸ್ಪತ್ರೆಯಲ್ಲಿ ಪತ್ರಕರ್ತರೊಬ್ಬರು ಕನಿಷ್ಠ 50 ದೇಹಗಳನ್ನು ಎಣಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ರಾಫಾದಲ್ಲಿ ರಾತ್ರಿ ಉಂಟಾಗಿರುವ ಬಾಂಬ್ ಸ್ಫೋಟದಿಂದಾಗಿ ಮನೆಗಳು ಧ್ವಂಸವಾಗಿರುವುದು ಮತ್ತು ರಕ್ತಸಿಕ್ತವಾದ ದೇಹಗಳು ಆಸ್ಪತ್ರೆಗಳಲ್ಲಿ ಬಿದ್ದುಕೊಂಡಿರುವುದು ಕಂಡು ಬಂದಿದೆ. ವರದಿಯ ಪ್ರಕಾರ, ಇಸ್ರೇಲ್‌ ವಿಶೇಷ ಪಡೆಗಳು ರಾಫಾದಲ್ಲಿ ಎರಡನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಮುಂಜಾನೆ 1:49ಕ್ಕೆ ಗುಂಡಿನ ದಾಳಿ ನಡೆಸಿದೆ. ಇದಾದ ಒಂದು ನಿಮಿಷದ ನಂತರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ವಾಯುದಾಳಿ ನಡೆಸಿದೆ.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ ಅ.7ರಂದು ಯುದ್ಧ ಆರಂಭವಾದ ದಿನದಿಂದ ಗಾಝಾದಲ್ಲಿ 27,000ಕ್ಕೂ ಅಧಿಕ ಜನರ ಹತ್ಯೆ ನಡೆದಿದೆ. ಇದರಲ್ಲಿ 12,300ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಸುಮಾರು 8,400 ಮಹಿಳೆಯರ ಹತ್ಯೆ ನಡೆದಿದೆ. ಗಾಝಾದಲ್ಲಿ ಒಟ್ಟು ಸಾವಿನ ಸಂಖ್ಯೆಯಲ್ಲಿ 43% ದಷ್ಟು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಇನ್ನು 60,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಮನೆ-ನಿವಾಸಗಳನ್ನು ಕಳೆದುಕೊಂಡು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...