Homeಮುಖಪುಟಧೈರ್ಯವಿದ್ದರೆ ನಮ್ಮ ಸರ್ಕಾರವನ್ನು ವಜಾಗೊಳಿಸಿ: ಪೌರತ್ವ ಕಾಯ್ದೆಯ ವಿರುದ್ಧ ಮಮತಾ ಬ್ಯಾನರ್ಜಿ ಸವಾಲು

ಧೈರ್ಯವಿದ್ದರೆ ನಮ್ಮ ಸರ್ಕಾರವನ್ನು ವಜಾಗೊಳಿಸಿ: ಪೌರತ್ವ ಕಾಯ್ದೆಯ ವಿರುದ್ಧ ಮಮತಾ ಬ್ಯಾನರ್ಜಿ ಸವಾಲು

- Advertisement -
- Advertisement -

“ನೀವು ನನ್ನ ಸರ್ಕಾರವನ್ನು ವಜಾಗೊಳಿಸಲು ಬಯಸಿದರೆ, ನೀವು ಮಾಡಬಹುದು, ಆದರೆ ನಾನು ಎಂದಿಗೂ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್ಆರ್‌ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧವಾಗಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ತೃಣಮೂಲ ಕಾಂಗ್ರೆಸ್‌ ಪಕ್ಷದ ನೂರಾರು ಮುಖಂಡರು ಮತ್ತು ಸಾವಿರಾರು ಬೆಂಬಲಿಗರು ಪೋಸ್ಟರ್ ಮತ್ತು ಧ್ವಜಗಳನ್ನು ಹಿಡಿದು ಸಾಥ್‌ ನೀಡಿದರು.

“ನಾನು ಬದುಕಿರುವವರೆಗೂ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಯನ್ನು ಜಾರಿಗೊಳಿಸುವುದಿಲ್ಲ. ಅವರು ಬಯಸಿದರೆ ಅವರು ನಮ್ಮ ಸರ್ಕಾರವನ್ನು ವಜಾಗೊಳಿಸಬಹುದು. ನಾವು ಶರಣಾಗುವುದಿಲ್ಲ” ಎಂದು ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ ಹೇಳಿದ್ದಾರೆ.

“ಅವರು ನನ್ನ ಮೃತ ದೇಹದ ಮೇಲೆ ಬಂಗಾಳದಲ್ಲಿ ಸಿಎಬಿ ಮತ್ತು ಎನ್‌ಆರ್‌ಸಿಯನ್ನು ಜಾರಿಗೆ ತರಬೇಕಾಗುತ್ತದೆ. ನಾವು ಎನ್‌ಆರ್‌ಸಿ ವಿರುದ್ಧ ಧ್ವನಿ ಎತ್ತಿದಾಗ, ನಾವು ಒಬ್ಬಂಟಿಯಾಗಿದ್ದೆವು. ಈಗ, ಇತರ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದಾರೆ, ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಈ ಅಸಾಂವಿಧಾನಿಕ ಕಾಯ್ದೆಯ ವಿರುದ್ಧ ಪ್ರತಿಭಟನೆಗೆ ಜನರು ಭಾಗವಹಿಸಬೇಕೆಂದು ಮಮತಾ ಬ್ಯಾನರ್ಜಿ ಟ್ವಿಟ್ಟರ್‌ನಲ್ಲಿ ಕರೆ ನೀಡಿದ್ದರು. ಇದಕ್ಕೆ ಬಂಗಾಳದ ರಾಜ್ಯಪಾಲರು ಕೆಂಡಾಮಂಡಲವಾಗಿ ಪ್ರತಿಕ್ರಿಯೆ ನೀಡಿದ್ದರು.

“ಸಿಎಎ ವಿರುದ್ಧ ಮುಖ್ಯಮಂತ್ರಿ ಮತ್ತು ಮಂತ್ರಿಗಳು ರ್‍ಯಾಲಿ ನಡೆಸಲಿದ್ದಾರೆ ಎಂದು ತಿಳಿದು ನಾನು ತುಂಬಾ ದುಃಖಿತನಾಗಿದ್ದೇನೆ. ಇದು ನೆಲದ ಕಾನೂನಿಗೆ ವಿರುದ್ಧವಾಗಿದ್ದು, ಅಸಂವಿಧಾನಿಕವಾಗಿದೆ. ಈ ಕಠೋರ ಪರಿಸ್ಥಿತಿಯ ಹಂತದಲ್ಲಿ ಈ ಅಸಂವಿಧಾನಿಕ ಮತ್ತು ಗಲಭೆ ಉಂಟುಮಾಡುವ ಕೃತ್ಯದಿಂದ ದೂರವಿರಲು ಮತ್ತು ರ್‍ಯಾಲಿ ಹಿಂಪಡೆಯಲು ನಾನು ಸಿಎಂಗೆ ಕರೆ ನೀಡುತ್ತೇನೆ.” ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ.

ಮಮತಾ ಬ್ಯಾನರ್ಜಿಯವರು ಪೌರತ್ವ ಕಾನೂನಿಗೆ ತೀವ್ರ ವಿರೋಧ ವ್ಯಕ್ತಪಡಿಸಲು ಬುಧವಾರದವರೆಗೆ ಇದೇ ರೀತಿಯ ಮೆರವಣಿಗೆಗಳನ್ನು ಯೋಜಿಸಿದ್ದಾರೆ. 2021 ರಲ್ಲಿ ನಡೆಯಲಿರುವ ಬಂಗಾಳ ವಿಧಾನಸಭೆ ಚುನಾವಣೆಗೆ ಮುಂಚೆಯೇ ಇದು ಮುಖ್ಯಮಂತ್ರಿ ಮತ್ತು ಬಿಜೆಪಿ ನಡುವಿನ ಮತ್ತೊಂದು ಸಂಘರ್ಷದ ಹಂತವನ್ನು ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...