Homeಮುಖಪುಟಉಚಿತ ಪಡಿತರ ಯೋಜನೆ 5 ವರ್ಷಗಳವರೆಗೆ ವಿಸ್ತರಣೆ: ಆರ್ಥಿಕ ಸಂಕಷ್ಟ, ಅಸಮಾನತೆಗಳ ಸೂಚನೆ ಎಂದ ಕಾಂಗ್ರೆಸ್

ಉಚಿತ ಪಡಿತರ ಯೋಜನೆ 5 ವರ್ಷಗಳವರೆಗೆ ವಿಸ್ತರಣೆ: ಆರ್ಥಿಕ ಸಂಕಷ್ಟ, ಅಸಮಾನತೆಗಳ ಸೂಚನೆ ಎಂದ ಕಾಂಗ್ರೆಸ್

- Advertisement -
- Advertisement -

ಮುಂದಿನ 5 ವರ್ಷಗಳವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013ರ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದನ್ನು ಕೇಂದ್ರ ಸರ್ಕಾರ ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಕೊರೋನ ವೈರಸ್ ಸಾಂಕ್ರಾಮಿಕವು ಹರಡಿದ್ದಾಗ, 2020ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಮ್‌ಜಿಕೆಎವೈ)ಯನ್ನು ಜಾರಿಗೆ ತರಲಾಗಿತ್ತು. ಆ ಯೋಜನೆಯ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಸರಕಾರವು ಉಚಿತವಾಗಿ ನೀಡುತ್ತಿತ್ತು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುತ್ತಿದ್ದ ಆಹಾರ ಧಾನ್ಯಗಳಿಗೆ ಹೆಚ್ಚುವರಿಯಾಗಿತ್ತು.

ಪಿಎಂ ಗರೀಬ್ ಕಲ್ಯಾಣ್ (ಪಿಎಂಜಿಕೆಎವೈ) ಯೋಜನೆಯು ಈ ವರ್ಷ ಡಿಸೆಂಬರ್‌ನಲ್ಲಿ ಕೊನೆಗೊಳ್ಳಬೇಕಿತ್ತು. ಶನಿವಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದೇಶದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಅದನ್ನು ವಿಸ್ತರಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು. ನಾನು ಬಡತನವನ್ನು ನೋಡಿದ್ದೇನೆ. ನಾವು ಇನ್ನೂ ಐದು ವರ್ಷಗಳವರೆಗೆ ಯೋಜನೆಯನ್ನು ವಿಸ್ತರಿಸುತ್ತೇವೆ. ಇದು ಮೋದಿಯ ಸಂಕಲ್ಪ. ಇದು ಮೋದಿಯ ಗ್ಯಾರಂಟಿ. ಬಡವರಿಗೆ ಉಚಿತ ಪಡಿತರ ಸಿಗುತ್ತಲೇ ಇರುತ್ತದೆ. ಮೋದಿ ಅವರು ಗ್ಯಾರಂಟಿ ನೀಡಿದರೆ ಅದನ್ನು ಈಡೇರಿಸುತ್ತಾರೆ ಎಂಬ ಭರವಸೆ  ಪ್ರತಿಯೊಬ್ಬ ಬಡ ತಾಯಿ ಮತ್ತು ಸಹೋದರಿಗೆ ತಿಳಿದಿದೆ ಎಂದು ಅವರು ಹೇಳಿದರು.

ಅವರು ಭಾನುವಾರ ಮಧ್ಯಪ್ರದೇಶದ ಸಿಯೋನಿಯಲ್ಲಿ ಮತ್ತೊಮ್ಮೆ ಇದೆ ಘೋಷಣೆಯನ್ನು ಪುನರಾವರ್ತಿಸಿದರು. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ ದೇಶದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಅದನ್ನು ಯೋಜನೆಯನ್ನು ವಿಸ್ತರಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರವು ಉನ್ನತ ಮಟ್ಟದ ಆರ್ಥಿಕ ಸಂಕಷ್ಟ ಮತ್ತು ಬೆಳೆಯುತ್ತಿರುವ ಅಸಮಾನತೆಗಳ ಸೂಚನೆಯಾಗಿದೆ ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್  ಕೇಂದ್ರ ಸರಕಾರವನ್ನು ಟೀಕಿಸಿದೆ.

ಕೇಂದ್ರ ಸರ್ಕಾರವು ಜನರಿಗೆ NFSA ಅಡಿಯಲ್ಲಿ ಅಕ್ಕಿ ಕೆಜಿಗೆ 3 ರೂಗೆ, ಗೋಧಿ ಕೆಜಿಗೆ 2 ರೂಗೆ, ಮತ್ತು ಧಾನ್ಯಗಳು ಕೆಜಿಗೆ ರೂ 1 ರಂತೆ ನೀಡುತ್ತದೆ.  ಕಳೆದ ವರ್ಷ ಡಿಸೆಂಬರ್‌ನಲ್ಲಿ ಸರ್ಕಾರವು PMGKAYನ್ನು NFSA ನೊಂದಿಗೆ ವಿಲೀನಗೊಳಿಸಿತು ಮತ್ತು NFSA ಅಡಿಯಲ್ಲಿ ಫಲಾನುಭವಿಗಳಿಗೆ ಅವರ ಅರ್ಹತೆಯ ಪ್ರಕಾರ 2023ರಲ್ಲಿ ಒಂದು ವರ್ಷಕ್ಕೆ ಉಚಿತ ಆಹಾರಧಾನ್ಯಗಳನ್ನು ನೀಡಲು ನಿರ್ಧರಿಸಿತು. ಮುಂದಿನ ಐದು ವರ್ಷಗಳವರೆಗೆ ಈ ಯೋಜನೆಯನ್ನು ವಿಸ್ತರಿಸುವುದಾಗಿ ಪ್ರಧಾನಮಂತ್ರಿ ಘೋಷಿಸಿದ್ದಾರೆ.

ಎನ್‌ಎಫ್‌ಎಸ್‌ಎ ಸುಮಾರು 81.35 ಕೋಟಿ ಜನರನ್ನು ಒಳಗೊಂಡಿದೆ ಮತ್ತು ಅವರಿಗೆ ಆಹಾರ ಭದ್ರತೆ ಒದಗಿಸಲು 2 ಲಕ್ಷ ಕೋಟಿ ರೂಪಾಯಿಗಳ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೇಂದ್ರ ಹೇಳಿತ್ತು.

ಪ್ರಧಾನಮಂತ್ರಿಯವರ ಘೋಷಣೆಯು ಉನ್ನತ ಮಟ್ಟದ ಆರ್ಥಿಕ ಸಂಕಷ್ಟ ಮತ್ತು ಬೆಳೆಯುತ್ತಿರುವ ಅಸಮಾನತೆಗಳ ಸೂಚನೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಅಗತ್ಯ ವಸ್ತುಗಳ ಗಗನಕ್ಕೇರಿರುವ ಬೆಲೆಗಳಿಗೆ ಅನುಗುಣವಾಗಿ ಬಹುಪಾಲು ಭಾರತೀಯರ ಆದಾಯವು ಹೆಚ್ಚಾಗಿಲ್ಲ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 2013ರಲ್ಲಿ ಸಂಸತ್ತು ಅಂಗೀಕರಿಸಿದ ರಾಷ್ಟ್ರೀಯ ಆಹಾರ ಭದ್ರತೆಯನ್ನು ಸತತವಾಗಿ ವಿರೋಧಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...