Homeಮುಖಪುಟಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

ಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳ ಅಧಿಕಾರಾವಧಿಯಲ್ಲಿ ಚುನಾವಣಾ ಪ್ರಚಾರದಲ್ಲಿ ದಾಖಲೆ ಮಟ್ಟದಲ್ಲಿ ಸಮಯವನ್ನು ಕಳೆದಿದ್ದಾರೆ. ದೇಶಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರಗಳ ಬಗ್ಗೆ ಅವರ ಅಸಮರ್ಪಕ ಗಮನದ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು. ಇದೀಗ ಮೋದಿ ಕನ್ಯಾಕುಮಾರಿಯಲ್ಲಿ 48ಗಂಟೆಗಳ ಕಾಲ ಧ್ಯಾನದಲ್ಲಿ ಕುಳಿತುಕೊಂಡಿದ್ದಾರೆ. ಆದರೆ ದೇಶದ ಪ್ರಧಾನಿಯೋರ್ವರು ಇಷ್ಟೊಂದು ಸುದೀರ್ಘ ಅವಧಿಗೆ ಸಂಪರ್ಕಕ್ಕೆ ಅಲಭ್ಯವಾದರೆ ತುರ್ತು ಪರಿಸ್ಥಿತಿ ಉದ್ಭವಿಸಿದರೆ ಮುಂದೇನು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

2022ರ ಜುಲೈನಲ್ಲಿ ಹೊರಡಿಸಲಾದ ಮಂತ್ರಿ ಮಂಡಳಿ ಪಟ್ಟಿಯ ಪ್ರಕಾರ, ಮೋದಿ ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನ ಮಂತ್ರಿಯ ನಂತರ ಹಿರಿತನದ ವಿಷಯದಲ್ಲಿ ಮುಂದಿನ ಸಾಲಿನಲ್ಲಿದ್ದಾರೆ. ಆದ್ದರಿಂದ ಪ್ರಧಾನ ಮಂತ್ರಿಯು ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಅವರು ಧ್ಯಾನ ಮಾಡುತ್ತಿರುವುದರಿಂದ ರಾಜನಾಥ್‌ ಸಿಂಗ್‌ ಅಧಿಕಾರ ವಹಿಸಿಕೊಳ್ಳಬೇಕು. ಮೋದಿ ಯಾರನ್ನೂ ಉಪಪ್ರಧಾನಿಯಾಗಿ ನೇಮಿಸಿಲ್ಲ. ಅವರ ಮೊದಲ ಅವಧಿಯಲ್ಲಿ 2014ರ ಸೆಪ್ಟಂಬರ್‌ನಲ್ಲಿ ಯುಎಸ್ ಪ್ರವಾಸ ಮಾಡುವಾಗ, ಆಗಿನ ಗೃಹ ಸಚಿವರಾಗಿದ್ದ ರಾಜನಾಥ್ ಸಿಂಗ್ ಅವರನ್ನು “ತುರ್ತು ಸರ್ಕಾರಿ ವ್ಯವಹಾರ” ನಿರ್ವಹಿಸಲು ಮೋದಿ ಅಧಿಕೃತವಾಗಿ ನಿಯೋಜಿಸಿದ್ದರು. ಈ ಕುರಿತು ಟಿಪ್ಪಣಿಯೊಂದನ್ನು ಕೂಡ ಹೊರಡಿಸಲಾಗಿತ್ತು. ಆದರೆ ಮೋದಿ ತಮ್ಮ ಎರಡು ದಿನಗಳ ಅಂದರೆ 45-ಗಂಟೆಗಳ ದೀರ್ಘಾವಧಿಯ ಧ್ಯಾನಕ್ಕೆ ತೆರಳುವಾಗ ಯಾರನ್ನೂ ಅಧಿಕೃತವಾಗಿ ನಿಯೋಜಿಸಿಲ್ಲ. ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆಗಳನ್ನು ನೀಡಲಾಗಿಲ್ಲ.

ಪ್ರಧಾನ ಮಂತ್ರಿಗಳನ್ನು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಹೇಗೆ?  

ಪ್ರಧಾನ ಮಂತ್ರಿಗಳ ಕಚೇರಿಯ ಮಾಜಿ ಅಧಿಕಾರಿಯೋರ್ವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಪರಮಾಣು ಕಮಾಂಡ್‌ನ ಏಕೈಕ ಮುಖ್ಯಸ್ಥರಾಗಿರುವುದರಿಂದ ಅವರು ಹಂಗಾಮಿ ಪ್ರಧಾನಿಯನ್ನು ಹೆಸರಿಸಬೇಕಾಗಿದೆ. ಯಾರನ್ನಾದರೂ ಉಸ್ತುವಾರಿಯನ್ನಾಗಿ ನೇಮಿಸದಿರುವುದು ಅತ್ಯಂತ ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚೀನಾ ಅಥವಾ ಪಾಕಿಸ್ತಾನದೊಂದಿಗಿನ ಗಂಭೀರವಾದ ಗಡಿ ಪರಿಸ್ಥಿತಿಯಂತಹ ತುರ್ತು ವಿಚಾರಗಳಿರುವಾಗ ಪ್ರಧಾನಿ ಸಂಪೂರ್ಣವಾಗಿ ಅಜ್ಞಾತವಾಗಿ ಹೋಗುವಂತಿಲ್ಲ. ಅಂತಹ ಸನ್ನಿವೇಶಗಳಲ್ಲಿ ಅವರು ತನ್ನ ಧ್ಯಾನದಿಂದ ಎಚ್ಚರಗೊಳ್ಳಬೇಕಾಗುತ್ತದೆ. ಆದರೆ ದಿನನಿತ್ಯದ ವಿಷಯಗಳಲ್ಲಿ ಅವರ ಸಂಪುಟ ಮತ್ತು ಹಿರಿಯ ಸಚಿವರು ನಿರ್ವಹಿಸಬಹುದು ಎಂದು ಹೇಳಿದ್ದಾರೆ.

ಇನ್ನೊಬ್ಬ ಮಾಜಿ PMO ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ತಾಂತ್ರಿಕವಾಗಿ, ಯಾರೂ ಉಸ್ತುವಾರಿ ವಹಿಸುವ ಅಗತ್ಯವಿಲ್ಲ, ಅವರು ಧ್ಯಾನದಲ್ಲಿದ್ದಾರೆ ಆದರೆ ಅಸಮರ್ಥರಲ್ಲ. ಯಾವುದೇ ರೀತಿಯ ವೈದ್ಯಕೀಯ ಅಲ್ಪವಿರಾಮದಲ್ಲಿಯೂ ಇಲ್ಲ. ಇದು ಸ್ವಯಂ ಹೇರಿದ ಪ್ರತ್ಯೇಕತೆಯಾಗಿದೆ ಮತ್ತು ತುರ್ತು ಸಂದರ್ಭದಲ್ಲಿ ಅದನ್ನು ಉಲ್ಲಂಘಿಸಬಹುದಾಗಿದೆ ಎಂದು ಹೇಳಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯ ವೇಳೆ ಮೋದಿ ಕೇದಾರನಾಥದಲ್ಲಿರುವ ರುದ್ರ ಧ್ಯಾನದ ಗುಹೆಯಲ್ಲಿ 17 ಗಂಟೆಗಳ ಕಾಲ ಧ್ಯಾನದಲ್ಲಿ ಕಳೆದಿದ್ದರು. ಮಾದರಿ ನೀತಿ ಸಂಹಿತೆ ಮತ್ತು ಮೌನ ಅವಧಿಯ ವೇಳೆ ಮೋದಿಯ ಧ್ಯಾನದ ಮಾಧ್ಯಮಗಳ ಕವರೇಜ್‌ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಬಾರಿಯೂ ಕಾಂಗ್ರೆಸ್ ಔಪಚಾರಿಕವಾಗಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ದೂರು ನೀಡಿದೆ. ಆದರೆ ಚುನಾವಣಾ ಆಯೋಗ ಈ ಬಗ್ಗೆ ಮೌನವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...