Homeಮುಖಪುಟಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

ಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳ ಅಧಿಕಾರಾವಧಿಯಲ್ಲಿ ಚುನಾವಣಾ ಪ್ರಚಾರದಲ್ಲಿ ದಾಖಲೆ ಮಟ್ಟದಲ್ಲಿ ಸಮಯವನ್ನು ಕಳೆದಿದ್ದಾರೆ. ದೇಶಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರಗಳ ಬಗ್ಗೆ ಅವರ ಅಸಮರ್ಪಕ ಗಮನದ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು. ಇದೀಗ ಮೋದಿ ಕನ್ಯಾಕುಮಾರಿಯಲ್ಲಿ 48ಗಂಟೆಗಳ ಕಾಲ ಧ್ಯಾನದಲ್ಲಿ ಕುಳಿತುಕೊಂಡಿದ್ದಾರೆ. ಆದರೆ ದೇಶದ ಪ್ರಧಾನಿಯೋರ್ವರು ಇಷ್ಟೊಂದು ಸುದೀರ್ಘ ಅವಧಿಗೆ ಸಂಪರ್ಕಕ್ಕೆ ಅಲಭ್ಯವಾದರೆ ತುರ್ತು ಪರಿಸ್ಥಿತಿ ಉದ್ಭವಿಸಿದರೆ ಮುಂದೇನು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

2022ರ ಜುಲೈನಲ್ಲಿ ಹೊರಡಿಸಲಾದ ಮಂತ್ರಿ ಮಂಡಳಿ ಪಟ್ಟಿಯ ಪ್ರಕಾರ, ಮೋದಿ ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನ ಮಂತ್ರಿಯ ನಂತರ ಹಿರಿತನದ ವಿಷಯದಲ್ಲಿ ಮುಂದಿನ ಸಾಲಿನಲ್ಲಿದ್ದಾರೆ. ಆದ್ದರಿಂದ ಪ್ರಧಾನ ಮಂತ್ರಿಯು ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಅವರು ಧ್ಯಾನ ಮಾಡುತ್ತಿರುವುದರಿಂದ ರಾಜನಾಥ್‌ ಸಿಂಗ್‌ ಅಧಿಕಾರ ವಹಿಸಿಕೊಳ್ಳಬೇಕು. ಮೋದಿ ಯಾರನ್ನೂ ಉಪಪ್ರಧಾನಿಯಾಗಿ ನೇಮಿಸಿಲ್ಲ. ಅವರ ಮೊದಲ ಅವಧಿಯಲ್ಲಿ 2014ರ ಸೆಪ್ಟಂಬರ್‌ನಲ್ಲಿ ಯುಎಸ್ ಪ್ರವಾಸ ಮಾಡುವಾಗ, ಆಗಿನ ಗೃಹ ಸಚಿವರಾಗಿದ್ದ ರಾಜನಾಥ್ ಸಿಂಗ್ ಅವರನ್ನು “ತುರ್ತು ಸರ್ಕಾರಿ ವ್ಯವಹಾರ” ನಿರ್ವಹಿಸಲು ಮೋದಿ ಅಧಿಕೃತವಾಗಿ ನಿಯೋಜಿಸಿದ್ದರು. ಈ ಕುರಿತು ಟಿಪ್ಪಣಿಯೊಂದನ್ನು ಕೂಡ ಹೊರಡಿಸಲಾಗಿತ್ತು. ಆದರೆ ಮೋದಿ ತಮ್ಮ ಎರಡು ದಿನಗಳ ಅಂದರೆ 45-ಗಂಟೆಗಳ ದೀರ್ಘಾವಧಿಯ ಧ್ಯಾನಕ್ಕೆ ತೆರಳುವಾಗ ಯಾರನ್ನೂ ಅಧಿಕೃತವಾಗಿ ನಿಯೋಜಿಸಿಲ್ಲ. ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆಗಳನ್ನು ನೀಡಲಾಗಿಲ್ಲ.

ಪ್ರಧಾನ ಮಂತ್ರಿಗಳನ್ನು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಹೇಗೆ?  

ಪ್ರಧಾನ ಮಂತ್ರಿಗಳ ಕಚೇರಿಯ ಮಾಜಿ ಅಧಿಕಾರಿಯೋರ್ವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಪರಮಾಣು ಕಮಾಂಡ್‌ನ ಏಕೈಕ ಮುಖ್ಯಸ್ಥರಾಗಿರುವುದರಿಂದ ಅವರು ಹಂಗಾಮಿ ಪ್ರಧಾನಿಯನ್ನು ಹೆಸರಿಸಬೇಕಾಗಿದೆ. ಯಾರನ್ನಾದರೂ ಉಸ್ತುವಾರಿಯನ್ನಾಗಿ ನೇಮಿಸದಿರುವುದು ಅತ್ಯಂತ ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚೀನಾ ಅಥವಾ ಪಾಕಿಸ್ತಾನದೊಂದಿಗಿನ ಗಂಭೀರವಾದ ಗಡಿ ಪರಿಸ್ಥಿತಿಯಂತಹ ತುರ್ತು ವಿಚಾರಗಳಿರುವಾಗ ಪ್ರಧಾನಿ ಸಂಪೂರ್ಣವಾಗಿ ಅಜ್ಞಾತವಾಗಿ ಹೋಗುವಂತಿಲ್ಲ. ಅಂತಹ ಸನ್ನಿವೇಶಗಳಲ್ಲಿ ಅವರು ತನ್ನ ಧ್ಯಾನದಿಂದ ಎಚ್ಚರಗೊಳ್ಳಬೇಕಾಗುತ್ತದೆ. ಆದರೆ ದಿನನಿತ್ಯದ ವಿಷಯಗಳಲ್ಲಿ ಅವರ ಸಂಪುಟ ಮತ್ತು ಹಿರಿಯ ಸಚಿವರು ನಿರ್ವಹಿಸಬಹುದು ಎಂದು ಹೇಳಿದ್ದಾರೆ.

ಇನ್ನೊಬ್ಬ ಮಾಜಿ PMO ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ತಾಂತ್ರಿಕವಾಗಿ, ಯಾರೂ ಉಸ್ತುವಾರಿ ವಹಿಸುವ ಅಗತ್ಯವಿಲ್ಲ, ಅವರು ಧ್ಯಾನದಲ್ಲಿದ್ದಾರೆ ಆದರೆ ಅಸಮರ್ಥರಲ್ಲ. ಯಾವುದೇ ರೀತಿಯ ವೈದ್ಯಕೀಯ ಅಲ್ಪವಿರಾಮದಲ್ಲಿಯೂ ಇಲ್ಲ. ಇದು ಸ್ವಯಂ ಹೇರಿದ ಪ್ರತ್ಯೇಕತೆಯಾಗಿದೆ ಮತ್ತು ತುರ್ತು ಸಂದರ್ಭದಲ್ಲಿ ಅದನ್ನು ಉಲ್ಲಂಘಿಸಬಹುದಾಗಿದೆ ಎಂದು ಹೇಳಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯ ವೇಳೆ ಮೋದಿ ಕೇದಾರನಾಥದಲ್ಲಿರುವ ರುದ್ರ ಧ್ಯಾನದ ಗುಹೆಯಲ್ಲಿ 17 ಗಂಟೆಗಳ ಕಾಲ ಧ್ಯಾನದಲ್ಲಿ ಕಳೆದಿದ್ದರು. ಮಾದರಿ ನೀತಿ ಸಂಹಿತೆ ಮತ್ತು ಮೌನ ಅವಧಿಯ ವೇಳೆ ಮೋದಿಯ ಧ್ಯಾನದ ಮಾಧ್ಯಮಗಳ ಕವರೇಜ್‌ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಬಾರಿಯೂ ಕಾಂಗ್ರೆಸ್ ಔಪಚಾರಿಕವಾಗಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ದೂರು ನೀಡಿದೆ. ಆದರೆ ಚುನಾವಣಾ ಆಯೋಗ ಈ ಬಗ್ಗೆ ಮೌನವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...