Homeಮುಖಪುಟಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

ಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳ ಅಧಿಕಾರಾವಧಿಯಲ್ಲಿ ಚುನಾವಣಾ ಪ್ರಚಾರದಲ್ಲಿ ದಾಖಲೆ ಮಟ್ಟದಲ್ಲಿ ಸಮಯವನ್ನು ಕಳೆದಿದ್ದಾರೆ. ದೇಶಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರಗಳ ಬಗ್ಗೆ ಅವರ ಅಸಮರ್ಪಕ ಗಮನದ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು. ಇದೀಗ ಮೋದಿ ಕನ್ಯಾಕುಮಾರಿಯಲ್ಲಿ 48ಗಂಟೆಗಳ ಕಾಲ ಧ್ಯಾನದಲ್ಲಿ ಕುಳಿತುಕೊಂಡಿದ್ದಾರೆ. ಆದರೆ ದೇಶದ ಪ್ರಧಾನಿಯೋರ್ವರು ಇಷ್ಟೊಂದು ಸುದೀರ್ಘ ಅವಧಿಗೆ ಸಂಪರ್ಕಕ್ಕೆ ಅಲಭ್ಯವಾದರೆ ತುರ್ತು ಪರಿಸ್ಥಿತಿ ಉದ್ಭವಿಸಿದರೆ ಮುಂದೇನು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

2022ರ ಜುಲೈನಲ್ಲಿ ಹೊರಡಿಸಲಾದ ಮಂತ್ರಿ ಮಂಡಳಿ ಪಟ್ಟಿಯ ಪ್ರಕಾರ, ಮೋದಿ ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನ ಮಂತ್ರಿಯ ನಂತರ ಹಿರಿತನದ ವಿಷಯದಲ್ಲಿ ಮುಂದಿನ ಸಾಲಿನಲ್ಲಿದ್ದಾರೆ. ಆದ್ದರಿಂದ ಪ್ರಧಾನ ಮಂತ್ರಿಯು ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಅವರು ಧ್ಯಾನ ಮಾಡುತ್ತಿರುವುದರಿಂದ ರಾಜನಾಥ್‌ ಸಿಂಗ್‌ ಅಧಿಕಾರ ವಹಿಸಿಕೊಳ್ಳಬೇಕು. ಮೋದಿ ಯಾರನ್ನೂ ಉಪಪ್ರಧಾನಿಯಾಗಿ ನೇಮಿಸಿಲ್ಲ. ಅವರ ಮೊದಲ ಅವಧಿಯಲ್ಲಿ 2014ರ ಸೆಪ್ಟಂಬರ್‌ನಲ್ಲಿ ಯುಎಸ್ ಪ್ರವಾಸ ಮಾಡುವಾಗ, ಆಗಿನ ಗೃಹ ಸಚಿವರಾಗಿದ್ದ ರಾಜನಾಥ್ ಸಿಂಗ್ ಅವರನ್ನು “ತುರ್ತು ಸರ್ಕಾರಿ ವ್ಯವಹಾರ” ನಿರ್ವಹಿಸಲು ಮೋದಿ ಅಧಿಕೃತವಾಗಿ ನಿಯೋಜಿಸಿದ್ದರು. ಈ ಕುರಿತು ಟಿಪ್ಪಣಿಯೊಂದನ್ನು ಕೂಡ ಹೊರಡಿಸಲಾಗಿತ್ತು. ಆದರೆ ಮೋದಿ ತಮ್ಮ ಎರಡು ದಿನಗಳ ಅಂದರೆ 45-ಗಂಟೆಗಳ ದೀರ್ಘಾವಧಿಯ ಧ್ಯಾನಕ್ಕೆ ತೆರಳುವಾಗ ಯಾರನ್ನೂ ಅಧಿಕೃತವಾಗಿ ನಿಯೋಜಿಸಿಲ್ಲ. ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆಗಳನ್ನು ನೀಡಲಾಗಿಲ್ಲ.

ಪ್ರಧಾನ ಮಂತ್ರಿಗಳನ್ನು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಹೇಗೆ?  

ಪ್ರಧಾನ ಮಂತ್ರಿಗಳ ಕಚೇರಿಯ ಮಾಜಿ ಅಧಿಕಾರಿಯೋರ್ವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಪರಮಾಣು ಕಮಾಂಡ್‌ನ ಏಕೈಕ ಮುಖ್ಯಸ್ಥರಾಗಿರುವುದರಿಂದ ಅವರು ಹಂಗಾಮಿ ಪ್ರಧಾನಿಯನ್ನು ಹೆಸರಿಸಬೇಕಾಗಿದೆ. ಯಾರನ್ನಾದರೂ ಉಸ್ತುವಾರಿಯನ್ನಾಗಿ ನೇಮಿಸದಿರುವುದು ಅತ್ಯಂತ ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚೀನಾ ಅಥವಾ ಪಾಕಿಸ್ತಾನದೊಂದಿಗಿನ ಗಂಭೀರವಾದ ಗಡಿ ಪರಿಸ್ಥಿತಿಯಂತಹ ತುರ್ತು ವಿಚಾರಗಳಿರುವಾಗ ಪ್ರಧಾನಿ ಸಂಪೂರ್ಣವಾಗಿ ಅಜ್ಞಾತವಾಗಿ ಹೋಗುವಂತಿಲ್ಲ. ಅಂತಹ ಸನ್ನಿವೇಶಗಳಲ್ಲಿ ಅವರು ತನ್ನ ಧ್ಯಾನದಿಂದ ಎಚ್ಚರಗೊಳ್ಳಬೇಕಾಗುತ್ತದೆ. ಆದರೆ ದಿನನಿತ್ಯದ ವಿಷಯಗಳಲ್ಲಿ ಅವರ ಸಂಪುಟ ಮತ್ತು ಹಿರಿಯ ಸಚಿವರು ನಿರ್ವಹಿಸಬಹುದು ಎಂದು ಹೇಳಿದ್ದಾರೆ.

ಇನ್ನೊಬ್ಬ ಮಾಜಿ PMO ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ತಾಂತ್ರಿಕವಾಗಿ, ಯಾರೂ ಉಸ್ತುವಾರಿ ವಹಿಸುವ ಅಗತ್ಯವಿಲ್ಲ, ಅವರು ಧ್ಯಾನದಲ್ಲಿದ್ದಾರೆ ಆದರೆ ಅಸಮರ್ಥರಲ್ಲ. ಯಾವುದೇ ರೀತಿಯ ವೈದ್ಯಕೀಯ ಅಲ್ಪವಿರಾಮದಲ್ಲಿಯೂ ಇಲ್ಲ. ಇದು ಸ್ವಯಂ ಹೇರಿದ ಪ್ರತ್ಯೇಕತೆಯಾಗಿದೆ ಮತ್ತು ತುರ್ತು ಸಂದರ್ಭದಲ್ಲಿ ಅದನ್ನು ಉಲ್ಲಂಘಿಸಬಹುದಾಗಿದೆ ಎಂದು ಹೇಳಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯ ವೇಳೆ ಮೋದಿ ಕೇದಾರನಾಥದಲ್ಲಿರುವ ರುದ್ರ ಧ್ಯಾನದ ಗುಹೆಯಲ್ಲಿ 17 ಗಂಟೆಗಳ ಕಾಲ ಧ್ಯಾನದಲ್ಲಿ ಕಳೆದಿದ್ದರು. ಮಾದರಿ ನೀತಿ ಸಂಹಿತೆ ಮತ್ತು ಮೌನ ಅವಧಿಯ ವೇಳೆ ಮೋದಿಯ ಧ್ಯಾನದ ಮಾಧ್ಯಮಗಳ ಕವರೇಜ್‌ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಬಾರಿಯೂ ಕಾಂಗ್ರೆಸ್ ಔಪಚಾರಿಕವಾಗಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ದೂರು ನೀಡಿದೆ. ಆದರೆ ಚುನಾವಣಾ ಆಯೋಗ ಈ ಬಗ್ಗೆ ಮೌನವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...