Homeಮುಖಪುಟಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

ಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳ ಅಧಿಕಾರಾವಧಿಯಲ್ಲಿ ಚುನಾವಣಾ ಪ್ರಚಾರದಲ್ಲಿ ದಾಖಲೆ ಮಟ್ಟದಲ್ಲಿ ಸಮಯವನ್ನು ಕಳೆದಿದ್ದಾರೆ. ದೇಶಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರಗಳ ಬಗ್ಗೆ ಅವರ ಅಸಮರ್ಪಕ ಗಮನದ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು. ಇದೀಗ ಮೋದಿ ಕನ್ಯಾಕುಮಾರಿಯಲ್ಲಿ 48ಗಂಟೆಗಳ ಕಾಲ ಧ್ಯಾನದಲ್ಲಿ ಕುಳಿತುಕೊಂಡಿದ್ದಾರೆ. ಆದರೆ ದೇಶದ ಪ್ರಧಾನಿಯೋರ್ವರು ಇಷ್ಟೊಂದು ಸುದೀರ್ಘ ಅವಧಿಗೆ ಸಂಪರ್ಕಕ್ಕೆ ಅಲಭ್ಯವಾದರೆ ತುರ್ತು ಪರಿಸ್ಥಿತಿ ಉದ್ಭವಿಸಿದರೆ ಮುಂದೇನು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

2022ರ ಜುಲೈನಲ್ಲಿ ಹೊರಡಿಸಲಾದ ಮಂತ್ರಿ ಮಂಡಳಿ ಪಟ್ಟಿಯ ಪ್ರಕಾರ, ಮೋದಿ ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನ ಮಂತ್ರಿಯ ನಂತರ ಹಿರಿತನದ ವಿಷಯದಲ್ಲಿ ಮುಂದಿನ ಸಾಲಿನಲ್ಲಿದ್ದಾರೆ. ಆದ್ದರಿಂದ ಪ್ರಧಾನ ಮಂತ್ರಿಯು ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಅವರು ಧ್ಯಾನ ಮಾಡುತ್ತಿರುವುದರಿಂದ ರಾಜನಾಥ್‌ ಸಿಂಗ್‌ ಅಧಿಕಾರ ವಹಿಸಿಕೊಳ್ಳಬೇಕು. ಮೋದಿ ಯಾರನ್ನೂ ಉಪಪ್ರಧಾನಿಯಾಗಿ ನೇಮಿಸಿಲ್ಲ. ಅವರ ಮೊದಲ ಅವಧಿಯಲ್ಲಿ 2014ರ ಸೆಪ್ಟಂಬರ್‌ನಲ್ಲಿ ಯುಎಸ್ ಪ್ರವಾಸ ಮಾಡುವಾಗ, ಆಗಿನ ಗೃಹ ಸಚಿವರಾಗಿದ್ದ ರಾಜನಾಥ್ ಸಿಂಗ್ ಅವರನ್ನು “ತುರ್ತು ಸರ್ಕಾರಿ ವ್ಯವಹಾರ” ನಿರ್ವಹಿಸಲು ಮೋದಿ ಅಧಿಕೃತವಾಗಿ ನಿಯೋಜಿಸಿದ್ದರು. ಈ ಕುರಿತು ಟಿಪ್ಪಣಿಯೊಂದನ್ನು ಕೂಡ ಹೊರಡಿಸಲಾಗಿತ್ತು. ಆದರೆ ಮೋದಿ ತಮ್ಮ ಎರಡು ದಿನಗಳ ಅಂದರೆ 45-ಗಂಟೆಗಳ ದೀರ್ಘಾವಧಿಯ ಧ್ಯಾನಕ್ಕೆ ತೆರಳುವಾಗ ಯಾರನ್ನೂ ಅಧಿಕೃತವಾಗಿ ನಿಯೋಜಿಸಿಲ್ಲ. ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆಗಳನ್ನು ನೀಡಲಾಗಿಲ್ಲ.

ಪ್ರಧಾನ ಮಂತ್ರಿಗಳನ್ನು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಹೇಗೆ?  

ಪ್ರಧಾನ ಮಂತ್ರಿಗಳ ಕಚೇರಿಯ ಮಾಜಿ ಅಧಿಕಾರಿಯೋರ್ವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಪರಮಾಣು ಕಮಾಂಡ್‌ನ ಏಕೈಕ ಮುಖ್ಯಸ್ಥರಾಗಿರುವುದರಿಂದ ಅವರು ಹಂಗಾಮಿ ಪ್ರಧಾನಿಯನ್ನು ಹೆಸರಿಸಬೇಕಾಗಿದೆ. ಯಾರನ್ನಾದರೂ ಉಸ್ತುವಾರಿಯನ್ನಾಗಿ ನೇಮಿಸದಿರುವುದು ಅತ್ಯಂತ ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚೀನಾ ಅಥವಾ ಪಾಕಿಸ್ತಾನದೊಂದಿಗಿನ ಗಂಭೀರವಾದ ಗಡಿ ಪರಿಸ್ಥಿತಿಯಂತಹ ತುರ್ತು ವಿಚಾರಗಳಿರುವಾಗ ಪ್ರಧಾನಿ ಸಂಪೂರ್ಣವಾಗಿ ಅಜ್ಞಾತವಾಗಿ ಹೋಗುವಂತಿಲ್ಲ. ಅಂತಹ ಸನ್ನಿವೇಶಗಳಲ್ಲಿ ಅವರು ತನ್ನ ಧ್ಯಾನದಿಂದ ಎಚ್ಚರಗೊಳ್ಳಬೇಕಾಗುತ್ತದೆ. ಆದರೆ ದಿನನಿತ್ಯದ ವಿಷಯಗಳಲ್ಲಿ ಅವರ ಸಂಪುಟ ಮತ್ತು ಹಿರಿಯ ಸಚಿವರು ನಿರ್ವಹಿಸಬಹುದು ಎಂದು ಹೇಳಿದ್ದಾರೆ.

ಇನ್ನೊಬ್ಬ ಮಾಜಿ PMO ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ತಾಂತ್ರಿಕವಾಗಿ, ಯಾರೂ ಉಸ್ತುವಾರಿ ವಹಿಸುವ ಅಗತ್ಯವಿಲ್ಲ, ಅವರು ಧ್ಯಾನದಲ್ಲಿದ್ದಾರೆ ಆದರೆ ಅಸಮರ್ಥರಲ್ಲ. ಯಾವುದೇ ರೀತಿಯ ವೈದ್ಯಕೀಯ ಅಲ್ಪವಿರಾಮದಲ್ಲಿಯೂ ಇಲ್ಲ. ಇದು ಸ್ವಯಂ ಹೇರಿದ ಪ್ರತ್ಯೇಕತೆಯಾಗಿದೆ ಮತ್ತು ತುರ್ತು ಸಂದರ್ಭದಲ್ಲಿ ಅದನ್ನು ಉಲ್ಲಂಘಿಸಬಹುದಾಗಿದೆ ಎಂದು ಹೇಳಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯ ವೇಳೆ ಮೋದಿ ಕೇದಾರನಾಥದಲ್ಲಿರುವ ರುದ್ರ ಧ್ಯಾನದ ಗುಹೆಯಲ್ಲಿ 17 ಗಂಟೆಗಳ ಕಾಲ ಧ್ಯಾನದಲ್ಲಿ ಕಳೆದಿದ್ದರು. ಮಾದರಿ ನೀತಿ ಸಂಹಿತೆ ಮತ್ತು ಮೌನ ಅವಧಿಯ ವೇಳೆ ಮೋದಿಯ ಧ್ಯಾನದ ಮಾಧ್ಯಮಗಳ ಕವರೇಜ್‌ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಬಾರಿಯೂ ಕಾಂಗ್ರೆಸ್ ಔಪಚಾರಿಕವಾಗಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ದೂರು ನೀಡಿದೆ. ಆದರೆ ಚುನಾವಣಾ ಆಯೋಗ ಈ ಬಗ್ಗೆ ಮೌನವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...