Homeಮುಖಪುಟಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

ಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳ ಅಧಿಕಾರಾವಧಿಯಲ್ಲಿ ಚುನಾವಣಾ ಪ್ರಚಾರದಲ್ಲಿ ದಾಖಲೆ ಮಟ್ಟದಲ್ಲಿ ಸಮಯವನ್ನು ಕಳೆದಿದ್ದಾರೆ. ದೇಶಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರಗಳ ಬಗ್ಗೆ ಅವರ ಅಸಮರ್ಪಕ ಗಮನದ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು. ಇದೀಗ ಮೋದಿ ಕನ್ಯಾಕುಮಾರಿಯಲ್ಲಿ 48ಗಂಟೆಗಳ ಕಾಲ ಧ್ಯಾನದಲ್ಲಿ ಕುಳಿತುಕೊಂಡಿದ್ದಾರೆ. ಆದರೆ ದೇಶದ ಪ್ರಧಾನಿಯೋರ್ವರು ಇಷ್ಟೊಂದು ಸುದೀರ್ಘ ಅವಧಿಗೆ ಸಂಪರ್ಕಕ್ಕೆ ಅಲಭ್ಯವಾದರೆ ತುರ್ತು ಪರಿಸ್ಥಿತಿ ಉದ್ಭವಿಸಿದರೆ ಮುಂದೇನು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

2022ರ ಜುಲೈನಲ್ಲಿ ಹೊರಡಿಸಲಾದ ಮಂತ್ರಿ ಮಂಡಳಿ ಪಟ್ಟಿಯ ಪ್ರಕಾರ, ಮೋದಿ ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನ ಮಂತ್ರಿಯ ನಂತರ ಹಿರಿತನದ ವಿಷಯದಲ್ಲಿ ಮುಂದಿನ ಸಾಲಿನಲ್ಲಿದ್ದಾರೆ. ಆದ್ದರಿಂದ ಪ್ರಧಾನ ಮಂತ್ರಿಯು ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಅವರು ಧ್ಯಾನ ಮಾಡುತ್ತಿರುವುದರಿಂದ ರಾಜನಾಥ್‌ ಸಿಂಗ್‌ ಅಧಿಕಾರ ವಹಿಸಿಕೊಳ್ಳಬೇಕು. ಮೋದಿ ಯಾರನ್ನೂ ಉಪಪ್ರಧಾನಿಯಾಗಿ ನೇಮಿಸಿಲ್ಲ. ಅವರ ಮೊದಲ ಅವಧಿಯಲ್ಲಿ 2014ರ ಸೆಪ್ಟಂಬರ್‌ನಲ್ಲಿ ಯುಎಸ್ ಪ್ರವಾಸ ಮಾಡುವಾಗ, ಆಗಿನ ಗೃಹ ಸಚಿವರಾಗಿದ್ದ ರಾಜನಾಥ್ ಸಿಂಗ್ ಅವರನ್ನು “ತುರ್ತು ಸರ್ಕಾರಿ ವ್ಯವಹಾರ” ನಿರ್ವಹಿಸಲು ಮೋದಿ ಅಧಿಕೃತವಾಗಿ ನಿಯೋಜಿಸಿದ್ದರು. ಈ ಕುರಿತು ಟಿಪ್ಪಣಿಯೊಂದನ್ನು ಕೂಡ ಹೊರಡಿಸಲಾಗಿತ್ತು. ಆದರೆ ಮೋದಿ ತಮ್ಮ ಎರಡು ದಿನಗಳ ಅಂದರೆ 45-ಗಂಟೆಗಳ ದೀರ್ಘಾವಧಿಯ ಧ್ಯಾನಕ್ಕೆ ತೆರಳುವಾಗ ಯಾರನ್ನೂ ಅಧಿಕೃತವಾಗಿ ನಿಯೋಜಿಸಿಲ್ಲ. ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆಗಳನ್ನು ನೀಡಲಾಗಿಲ್ಲ.

ಪ್ರಧಾನ ಮಂತ್ರಿಗಳನ್ನು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಹೇಗೆ?  

ಪ್ರಧಾನ ಮಂತ್ರಿಗಳ ಕಚೇರಿಯ ಮಾಜಿ ಅಧಿಕಾರಿಯೋರ್ವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಪರಮಾಣು ಕಮಾಂಡ್‌ನ ಏಕೈಕ ಮುಖ್ಯಸ್ಥರಾಗಿರುವುದರಿಂದ ಅವರು ಹಂಗಾಮಿ ಪ್ರಧಾನಿಯನ್ನು ಹೆಸರಿಸಬೇಕಾಗಿದೆ. ಯಾರನ್ನಾದರೂ ಉಸ್ತುವಾರಿಯನ್ನಾಗಿ ನೇಮಿಸದಿರುವುದು ಅತ್ಯಂತ ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚೀನಾ ಅಥವಾ ಪಾಕಿಸ್ತಾನದೊಂದಿಗಿನ ಗಂಭೀರವಾದ ಗಡಿ ಪರಿಸ್ಥಿತಿಯಂತಹ ತುರ್ತು ವಿಚಾರಗಳಿರುವಾಗ ಪ್ರಧಾನಿ ಸಂಪೂರ್ಣವಾಗಿ ಅಜ್ಞಾತವಾಗಿ ಹೋಗುವಂತಿಲ್ಲ. ಅಂತಹ ಸನ್ನಿವೇಶಗಳಲ್ಲಿ ಅವರು ತನ್ನ ಧ್ಯಾನದಿಂದ ಎಚ್ಚರಗೊಳ್ಳಬೇಕಾಗುತ್ತದೆ. ಆದರೆ ದಿನನಿತ್ಯದ ವಿಷಯಗಳಲ್ಲಿ ಅವರ ಸಂಪುಟ ಮತ್ತು ಹಿರಿಯ ಸಚಿವರು ನಿರ್ವಹಿಸಬಹುದು ಎಂದು ಹೇಳಿದ್ದಾರೆ.

ಇನ್ನೊಬ್ಬ ಮಾಜಿ PMO ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ತಾಂತ್ರಿಕವಾಗಿ, ಯಾರೂ ಉಸ್ತುವಾರಿ ವಹಿಸುವ ಅಗತ್ಯವಿಲ್ಲ, ಅವರು ಧ್ಯಾನದಲ್ಲಿದ್ದಾರೆ ಆದರೆ ಅಸಮರ್ಥರಲ್ಲ. ಯಾವುದೇ ರೀತಿಯ ವೈದ್ಯಕೀಯ ಅಲ್ಪವಿರಾಮದಲ್ಲಿಯೂ ಇಲ್ಲ. ಇದು ಸ್ವಯಂ ಹೇರಿದ ಪ್ರತ್ಯೇಕತೆಯಾಗಿದೆ ಮತ್ತು ತುರ್ತು ಸಂದರ್ಭದಲ್ಲಿ ಅದನ್ನು ಉಲ್ಲಂಘಿಸಬಹುದಾಗಿದೆ ಎಂದು ಹೇಳಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯ ವೇಳೆ ಮೋದಿ ಕೇದಾರನಾಥದಲ್ಲಿರುವ ರುದ್ರ ಧ್ಯಾನದ ಗುಹೆಯಲ್ಲಿ 17 ಗಂಟೆಗಳ ಕಾಲ ಧ್ಯಾನದಲ್ಲಿ ಕಳೆದಿದ್ದರು. ಮಾದರಿ ನೀತಿ ಸಂಹಿತೆ ಮತ್ತು ಮೌನ ಅವಧಿಯ ವೇಳೆ ಮೋದಿಯ ಧ್ಯಾನದ ಮಾಧ್ಯಮಗಳ ಕವರೇಜ್‌ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಬಾರಿಯೂ ಕಾಂಗ್ರೆಸ್ ಔಪಚಾರಿಕವಾಗಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ದೂರು ನೀಡಿದೆ. ಆದರೆ ಚುನಾವಣಾ ಆಯೋಗ ಈ ಬಗ್ಗೆ ಮೌನವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...