Homeಮುಖಪುಟಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

ಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ, ಇದೀಗ ಕೇಂದ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಗರಿಗೆದರಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ಆರಂಭಿಸಿವೆ.

ಇದು ನವದೆಹಲಿಯಲ್ಲಿ ಎರಡೂ ಒಕ್ಕೂಟಗಳ ಮಹತ್ವದ ಸಭೆ ನಡೆಯಲಿದೆ. ಬಿಜೆಪಿ ಬಹುಮತ ದಾಟದಿದ್ದರೂ, ಎನ್‌ಡಿಎ ಒಕ್ಕೂಟ ಬಹುಮತ ಪಡೆದಿರುವ ಹಿನ್ನೆಲೆ ಎನ್‌ಡಿಎಗೆ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಆದರೆ, ಮೈತ್ರಿ ಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವುದು ಬಿಜೆಪಿ ಸವಾಲಾಗಿದೆ.

ಇತ್ತ, ಬಹುಮತಕ್ಕೆ ಸುಮಾರು 40 ಸ್ಥಾನಗಳ ಕೊರತೆ ಇದ್ದರೂ, ಶತಾಯಗತಾಯ ಸರ್ಕಾರ ರಚನೆ ಮಾಡಿಯೇ ತೀರುತ್ತೇವೆ ಎಂಬ ಹುಮ್ಮಸ್ಸಿನಲ್ಲಿರುವ ಇಂಡಿಯಾ ಒಕ್ಕೂಟ, ಹಳೆಯ ಮಿತ್ರರಾದ ಜೆಡಿಯು ಮತ್ತು ಟಿಡಿಪಿಯನ್ನು ತನ್ನತ್ತ ಸೆಳೆಯಲು ಗಾಳ ಹಾಕಿದೆ.

ಒಟ್ಟು 543 ಲೋಕಸಭೆ ಸ್ಥಾನಗಳ ಪೈಕಿ ಎನ್‌ಡಿಎ ಒಕ್ಕೂಟ 294 ಸ್ಥಾನಗಳನ್ನು ಪಡೆದು 272ರ ಮ್ಯಾಜಿಕ್ ನಂಬರ್‌ಗಿಂತ 22 ಹೆಚ್ಚುವರಿ ಸ್ಥಾನಗಳನ್ನ ಪಡೆದಿದೆ. ಇಂಡಿಯಾ ಒಕ್ಕೂಟ 234 ಸ್ಥಾನಗಳನ್ನು ಪಡೆದಿದ್ದು, ಬಹುಮತಕ್ಕೆ 38 ಸ್ಥಾನಗಳ ಕೊರತೆ ಇದೆ. ಇದನ್ನು ತುಂಬಲು ಹಳೆಯ ಮಿತ್ರರಾದ ಜೆಡಿಯುನ ನಿತೀಶ್ ಕುಮಾರ್ ಮತ್ತು ಟಿಡಿಪಿಯ ಚಂದ್ರಬಾಬು ನಾಯ್ಡುವನ್ನು ಮನವೊಲಿಸಲು ಇಂಡಿಯಾ ನಾಯಕರು ಕಸರತ್ತು ಆರಂಭಿಸಿದ್ದಾರೆ.

ಇಂದಿನ ಸಭೆಯಲ್ಲಿ ಏನು ಬೆಳವಣಿಗೆ ನಡೆಯಲಿದೆ ಎಂಬುವುದು ಕುತೂಹಲ ಮೂಡಿಸಿದೆ. ಎರಡೂ ಒಕ್ಕೂಟಗಳ ಸಭೆಯತ್ತ ಇಡೀ ದೇಶದ ಚಿತ್ತ ನೆಟ್ಟಿದೆ.

ನಿನ್ನೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಇಂಡಿಯಾ ಒಕ್ಕೂಟದ ಪಾಲುದಾರರೊಂದಿಗೆ ಮಾತನಾಡಿದ ಬಳಿಕವಷ್ಟೇ ಟಿಡಿಪಿ ಮತ್ತು ಜೆಡಿಯು ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ತರಿಸುತ್ತೇನೆ” ಎಂದಿದ್ದಾರೆ.

ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದರೂ, ಬಿಜೆಪಿಗೆ ಬಹುಮತ ಬಂದಿಲ್ಲ. ಆದ್ದರಿಂದ ಬಿಜೆಪಿ ಈ ಬಾರಿ ತನ್ನ ಮೈತ್ರಿಕೂಟದ ಪಕ್ಷಗಳ ನಿರ್ಧಾರಕ್ಕೆ ತಲೆ ಬಾಗುವ ಅನಿವಾರ್ಯತೆ ಎದುರಾಗಿದೆ. ಮತ್ತೊಂದೆಡೆ ತನ್ನ ಮಿತ್ರ ಪಕ್ಷಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳುವ ಸಂಕಷ್ಟಕ್ಕೆ ಸಿಲುಕಿದೆ.

ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ ನಿತೀಶ್ ಕುಮಾರ್-ತೇಜಸ್ವಿ ಯಾದವ್

ಎನ್‌ಡಿಎ ಮೈತ್ರಿಕೂಟದ ನಾಯಕ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕ ಹಾಗೂ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದರಿಂದ ಇಂದಿನ ಮೈತ್ರಿಕೂಟಗಳ ಸಭೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...