Homeಮುಖಪುಟಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

ಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ, ಇದೀಗ ಕೇಂದ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಗರಿಗೆದರಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ಆರಂಭಿಸಿವೆ.

ಇದು ನವದೆಹಲಿಯಲ್ಲಿ ಎರಡೂ ಒಕ್ಕೂಟಗಳ ಮಹತ್ವದ ಸಭೆ ನಡೆಯಲಿದೆ. ಬಿಜೆಪಿ ಬಹುಮತ ದಾಟದಿದ್ದರೂ, ಎನ್‌ಡಿಎ ಒಕ್ಕೂಟ ಬಹುಮತ ಪಡೆದಿರುವ ಹಿನ್ನೆಲೆ ಎನ್‌ಡಿಎಗೆ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಆದರೆ, ಮೈತ್ರಿ ಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವುದು ಬಿಜೆಪಿ ಸವಾಲಾಗಿದೆ.

ಇತ್ತ, ಬಹುಮತಕ್ಕೆ ಸುಮಾರು 40 ಸ್ಥಾನಗಳ ಕೊರತೆ ಇದ್ದರೂ, ಶತಾಯಗತಾಯ ಸರ್ಕಾರ ರಚನೆ ಮಾಡಿಯೇ ತೀರುತ್ತೇವೆ ಎಂಬ ಹುಮ್ಮಸ್ಸಿನಲ್ಲಿರುವ ಇಂಡಿಯಾ ಒಕ್ಕೂಟ, ಹಳೆಯ ಮಿತ್ರರಾದ ಜೆಡಿಯು ಮತ್ತು ಟಿಡಿಪಿಯನ್ನು ತನ್ನತ್ತ ಸೆಳೆಯಲು ಗಾಳ ಹಾಕಿದೆ.

ಒಟ್ಟು 543 ಲೋಕಸಭೆ ಸ್ಥಾನಗಳ ಪೈಕಿ ಎನ್‌ಡಿಎ ಒಕ್ಕೂಟ 294 ಸ್ಥಾನಗಳನ್ನು ಪಡೆದು 272ರ ಮ್ಯಾಜಿಕ್ ನಂಬರ್‌ಗಿಂತ 22 ಹೆಚ್ಚುವರಿ ಸ್ಥಾನಗಳನ್ನ ಪಡೆದಿದೆ. ಇಂಡಿಯಾ ಒಕ್ಕೂಟ 234 ಸ್ಥಾನಗಳನ್ನು ಪಡೆದಿದ್ದು, ಬಹುಮತಕ್ಕೆ 38 ಸ್ಥಾನಗಳ ಕೊರತೆ ಇದೆ. ಇದನ್ನು ತುಂಬಲು ಹಳೆಯ ಮಿತ್ರರಾದ ಜೆಡಿಯುನ ನಿತೀಶ್ ಕುಮಾರ್ ಮತ್ತು ಟಿಡಿಪಿಯ ಚಂದ್ರಬಾಬು ನಾಯ್ಡುವನ್ನು ಮನವೊಲಿಸಲು ಇಂಡಿಯಾ ನಾಯಕರು ಕಸರತ್ತು ಆರಂಭಿಸಿದ್ದಾರೆ.

ಇಂದಿನ ಸಭೆಯಲ್ಲಿ ಏನು ಬೆಳವಣಿಗೆ ನಡೆಯಲಿದೆ ಎಂಬುವುದು ಕುತೂಹಲ ಮೂಡಿಸಿದೆ. ಎರಡೂ ಒಕ್ಕೂಟಗಳ ಸಭೆಯತ್ತ ಇಡೀ ದೇಶದ ಚಿತ್ತ ನೆಟ್ಟಿದೆ.

ನಿನ್ನೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಇಂಡಿಯಾ ಒಕ್ಕೂಟದ ಪಾಲುದಾರರೊಂದಿಗೆ ಮಾತನಾಡಿದ ಬಳಿಕವಷ್ಟೇ ಟಿಡಿಪಿ ಮತ್ತು ಜೆಡಿಯು ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ತರಿಸುತ್ತೇನೆ” ಎಂದಿದ್ದಾರೆ.

ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದರೂ, ಬಿಜೆಪಿಗೆ ಬಹುಮತ ಬಂದಿಲ್ಲ. ಆದ್ದರಿಂದ ಬಿಜೆಪಿ ಈ ಬಾರಿ ತನ್ನ ಮೈತ್ರಿಕೂಟದ ಪಕ್ಷಗಳ ನಿರ್ಧಾರಕ್ಕೆ ತಲೆ ಬಾಗುವ ಅನಿವಾರ್ಯತೆ ಎದುರಾಗಿದೆ. ಮತ್ತೊಂದೆಡೆ ತನ್ನ ಮಿತ್ರ ಪಕ್ಷಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳುವ ಸಂಕಷ್ಟಕ್ಕೆ ಸಿಲುಕಿದೆ.

ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ ನಿತೀಶ್ ಕುಮಾರ್-ತೇಜಸ್ವಿ ಯಾದವ್

ಎನ್‌ಡಿಎ ಮೈತ್ರಿಕೂಟದ ನಾಯಕ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕ ಹಾಗೂ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದರಿಂದ ಇಂದಿನ ಮೈತ್ರಿಕೂಟಗಳ ಸಭೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...