Homeಮುಖಪುಟಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

ಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ, ಇದೀಗ ಕೇಂದ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಗರಿಗೆದರಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ಆರಂಭಿಸಿವೆ.

ಇದು ನವದೆಹಲಿಯಲ್ಲಿ ಎರಡೂ ಒಕ್ಕೂಟಗಳ ಮಹತ್ವದ ಸಭೆ ನಡೆಯಲಿದೆ. ಬಿಜೆಪಿ ಬಹುಮತ ದಾಟದಿದ್ದರೂ, ಎನ್‌ಡಿಎ ಒಕ್ಕೂಟ ಬಹುಮತ ಪಡೆದಿರುವ ಹಿನ್ನೆಲೆ ಎನ್‌ಡಿಎಗೆ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಆದರೆ, ಮೈತ್ರಿ ಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವುದು ಬಿಜೆಪಿ ಸವಾಲಾಗಿದೆ.

ಇತ್ತ, ಬಹುಮತಕ್ಕೆ ಸುಮಾರು 40 ಸ್ಥಾನಗಳ ಕೊರತೆ ಇದ್ದರೂ, ಶತಾಯಗತಾಯ ಸರ್ಕಾರ ರಚನೆ ಮಾಡಿಯೇ ತೀರುತ್ತೇವೆ ಎಂಬ ಹುಮ್ಮಸ್ಸಿನಲ್ಲಿರುವ ಇಂಡಿಯಾ ಒಕ್ಕೂಟ, ಹಳೆಯ ಮಿತ್ರರಾದ ಜೆಡಿಯು ಮತ್ತು ಟಿಡಿಪಿಯನ್ನು ತನ್ನತ್ತ ಸೆಳೆಯಲು ಗಾಳ ಹಾಕಿದೆ.

ಒಟ್ಟು 543 ಲೋಕಸಭೆ ಸ್ಥಾನಗಳ ಪೈಕಿ ಎನ್‌ಡಿಎ ಒಕ್ಕೂಟ 294 ಸ್ಥಾನಗಳನ್ನು ಪಡೆದು 272ರ ಮ್ಯಾಜಿಕ್ ನಂಬರ್‌ಗಿಂತ 22 ಹೆಚ್ಚುವರಿ ಸ್ಥಾನಗಳನ್ನ ಪಡೆದಿದೆ. ಇಂಡಿಯಾ ಒಕ್ಕೂಟ 234 ಸ್ಥಾನಗಳನ್ನು ಪಡೆದಿದ್ದು, ಬಹುಮತಕ್ಕೆ 38 ಸ್ಥಾನಗಳ ಕೊರತೆ ಇದೆ. ಇದನ್ನು ತುಂಬಲು ಹಳೆಯ ಮಿತ್ರರಾದ ಜೆಡಿಯುನ ನಿತೀಶ್ ಕುಮಾರ್ ಮತ್ತು ಟಿಡಿಪಿಯ ಚಂದ್ರಬಾಬು ನಾಯ್ಡುವನ್ನು ಮನವೊಲಿಸಲು ಇಂಡಿಯಾ ನಾಯಕರು ಕಸರತ್ತು ಆರಂಭಿಸಿದ್ದಾರೆ.

ಇಂದಿನ ಸಭೆಯಲ್ಲಿ ಏನು ಬೆಳವಣಿಗೆ ನಡೆಯಲಿದೆ ಎಂಬುವುದು ಕುತೂಹಲ ಮೂಡಿಸಿದೆ. ಎರಡೂ ಒಕ್ಕೂಟಗಳ ಸಭೆಯತ್ತ ಇಡೀ ದೇಶದ ಚಿತ್ತ ನೆಟ್ಟಿದೆ.

ನಿನ್ನೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಇಂಡಿಯಾ ಒಕ್ಕೂಟದ ಪಾಲುದಾರರೊಂದಿಗೆ ಮಾತನಾಡಿದ ಬಳಿಕವಷ್ಟೇ ಟಿಡಿಪಿ ಮತ್ತು ಜೆಡಿಯು ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ತರಿಸುತ್ತೇನೆ” ಎಂದಿದ್ದಾರೆ.

ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದರೂ, ಬಿಜೆಪಿಗೆ ಬಹುಮತ ಬಂದಿಲ್ಲ. ಆದ್ದರಿಂದ ಬಿಜೆಪಿ ಈ ಬಾರಿ ತನ್ನ ಮೈತ್ರಿಕೂಟದ ಪಕ್ಷಗಳ ನಿರ್ಧಾರಕ್ಕೆ ತಲೆ ಬಾಗುವ ಅನಿವಾರ್ಯತೆ ಎದುರಾಗಿದೆ. ಮತ್ತೊಂದೆಡೆ ತನ್ನ ಮಿತ್ರ ಪಕ್ಷಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳುವ ಸಂಕಷ್ಟಕ್ಕೆ ಸಿಲುಕಿದೆ.

ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ ನಿತೀಶ್ ಕುಮಾರ್-ತೇಜಸ್ವಿ ಯಾದವ್

ಎನ್‌ಡಿಎ ಮೈತ್ರಿಕೂಟದ ನಾಯಕ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕ ಹಾಗೂ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದರಿಂದ ಇಂದಿನ ಮೈತ್ರಿಕೂಟಗಳ ಸಭೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...