Homeಮುಖಪುಟಕೆಂಪುಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿಯಾಗಿದ್ದ ಪ್ರತಿಪಕ್ಷ ನಾಯಕನ ಆಸನ

ಕೆಂಪುಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿಯಾಗಿದ್ದ ಪ್ರತಿಪಕ್ಷ ನಾಯಕನ ಆಸನ

- Advertisement -
- Advertisement -

77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.  ಬಳಿಕ ಅವರು ಸಂದೇಶವನ್ನು ಕಳುಹಿಸಿ, ದೇಶದ ಅಭಿವೃದ್ಧಿಯಲ್ಲಿ ಹಿಂದಿನ ಪ್ರಧಾನಿಗಳ ಪಾತ್ರವನ್ನು ಅವರು ಬಣ್ಣಿಸಿದ್ದು,  ಪ್ರಸ್ತುತ ಸರಕಾರ ಪ್ರತಿಪಕ್ಷಗಳನ್ನು ಭೇಟೆಯಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಭಾಷಣ ಮಾಡಿದ ಐತಿಹಾಸಿಕ ಕೆಂಪು ಕೋಟೆಯ ಒಂದು ವಿಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿನ ಆಸನ ಖಾಲಿ ಇತ್ತು.

ಮಲ್ಲಿ ಕಾರ್ಜುನ ಖರ್ಗೆ ಅವರು  ಪಕ್ಷದ ಅಧ್ಯಕ್ಷರಾಗಿ ಮೊದಲ ಬಾರಿಗೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದರು. ಅವರು ತಮ್ಮ ಭಾಷಣದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸಾಂಪ್ರದಾಯಿಕವಾಗಿ ಸ್ವಾತಂತ್ರ್ಯ ದಿನದಂದು ಯಾವುದೇ ಟೀಕೆ  ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕಣ್ಣಿನ ಸಮಸ್ಯೆ ಇರುವ ಕಾರಣ ಕೆಂಪುಕೋಟೆಗೆ ಹೋಗಲು ಸಾಧ್ಯವಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಅವರು ತಮ್ಮ ಮನೆಯಲ್ಲಿ ಮತ್ತು ನಂತರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡುತ್ತೇನೆ.  ಪ್ರಧಾನಿ ಅವರಿಗೆ ತುಂಬಾ ಭದ್ರತೆ ಕೊಡಲಾಗುತ್ತದೆ, ಮತ್ತು ನಂತರ ಅವರು ಗೃಹ ಸಚಿವರು, ರಕ್ಷಣಾ ಸಚಿವರು ಮತ್ತು ಸ್ಪೀಕರ್ ಹೊರಡುವವರೆಗೆ ನಮ್ಮನ್ನು ಹೋಗಲು ಬಿಡುವುದಿಲ್ಲ, ಆದ್ದರಿಂದ ಅದರಲ್ಲಿ ಭಾಗವಹಿಸುವುದು ಅಸಾಧ್ಯವಾಗಿತ್ತು ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಖರ್ಗೆ ತನ್ನ ವಿಡಿಯೋ ಸಂದೇಶದಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್, ಮೌಲಾನಾ ಆಜಾದ್, ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು ಮತ್ತು ಬಿಆರ್ ಅಂಬೇಡ್ಕರ್  ಅವರಿಗೆ  ಗೌರವ ಸಲ್ಲಿಸಿದ್ದಾರೆ.

ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರ ಕಾಂಗ್ರೆಸ್ ಪ್ರಧಾನಿಗಳಾದ ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ನೆನೆಪಿಸಿಕೊಂಡಿದ್ದಾರೆ.  ಅಟಲ್ ಬಿಹಾರಿ ವಾಜಿಪಾಯಿ ಅವರ ಸಾಧನೆಯನ್ನು ಕೂಡ ಉಲ್ಲೇಖಿಸಿದ್ದಾರೆ.

ಭಾರತದ ಎಲ್ಲಾ ಪ್ರಧಾನಿಗಳು ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.  ಆದರೆ ಈಗ ಕೆಲವು ಜನರು ಎಲ್ಲವೂ ಕಳೆದ ಕೆಲ ವರ್ಷಗಳಿಂದ ನಡೆದಿರುವುದು ಎಂದು ಹೇಳಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಪ್ರಧಾನಿ ಮೋದಿಗೆ ಪರೋಕ್ಷವಾಗಿ ಟೀಕಿಸಿದ್ದಾರೆ.

ಇವತ್ತು  ಪ್ರಜಾಪ್ರಭುತ್ವ, ಸಂವಿಧಾನ, ಸ್ವಾಯುತ್ತ ಸಂಸ್ಥೆಗಳು ಗಂಭೀರವಾದ ಬೆದರಿಕೆಯನ್ನು ಎದುರಿಸುತ್ತಿದೆ ಎಂದು ನಾನು ನೋವಿನಿಂದ ಹೇಳುತ್ತೇನೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಹೊಸ ಹೊಸ ಉಪಕರಣಗಳು ಬಳಕೆಯಾಗುತ್ತಿವೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ದಾಳಿಗಳಷ್ಟೇ ಅಲ್ಲ, ಚುನಾವಣಾ ಆಯೋಗವನ್ನೂ ದುರ್ಬಲಗೊಳಿಸಲಾಗುತ್ತಿದೆ. ಪ್ರತಿಪಕ್ಷಗಳ ಸಂಸದರಿಗೆ ಮೂಗುದಾರ ಹಾಕಲಾಗುತ್ತಿದೆ, ಅಮಾನತುಗೊಳಿಸಲಾಗುತ್ತಿದೆ, ಮೈಕ್‌ಗಳನ್ನು ಮ್ಯೂಟ್ ಮಾಡಲಾಗುತ್ತಿದೆ, ಭಾಷಣಗಳನ್ನು ಹೊರಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...