Homeಮುಖಪುಟಕೆಂಪುಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿಯಾಗಿದ್ದ ಪ್ರತಿಪಕ್ಷ ನಾಯಕನ ಆಸನ

ಕೆಂಪುಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿಯಾಗಿದ್ದ ಪ್ರತಿಪಕ್ಷ ನಾಯಕನ ಆಸನ

- Advertisement -
- Advertisement -

77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.  ಬಳಿಕ ಅವರು ಸಂದೇಶವನ್ನು ಕಳುಹಿಸಿ, ದೇಶದ ಅಭಿವೃದ್ಧಿಯಲ್ಲಿ ಹಿಂದಿನ ಪ್ರಧಾನಿಗಳ ಪಾತ್ರವನ್ನು ಅವರು ಬಣ್ಣಿಸಿದ್ದು,  ಪ್ರಸ್ತುತ ಸರಕಾರ ಪ್ರತಿಪಕ್ಷಗಳನ್ನು ಭೇಟೆಯಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಭಾಷಣ ಮಾಡಿದ ಐತಿಹಾಸಿಕ ಕೆಂಪು ಕೋಟೆಯ ಒಂದು ವಿಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿನ ಆಸನ ಖಾಲಿ ಇತ್ತು.

ಮಲ್ಲಿ ಕಾರ್ಜುನ ಖರ್ಗೆ ಅವರು  ಪಕ್ಷದ ಅಧ್ಯಕ್ಷರಾಗಿ ಮೊದಲ ಬಾರಿಗೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದರು. ಅವರು ತಮ್ಮ ಭಾಷಣದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸಾಂಪ್ರದಾಯಿಕವಾಗಿ ಸ್ವಾತಂತ್ರ್ಯ ದಿನದಂದು ಯಾವುದೇ ಟೀಕೆ  ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕಣ್ಣಿನ ಸಮಸ್ಯೆ ಇರುವ ಕಾರಣ ಕೆಂಪುಕೋಟೆಗೆ ಹೋಗಲು ಸಾಧ್ಯವಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಅವರು ತಮ್ಮ ಮನೆಯಲ್ಲಿ ಮತ್ತು ನಂತರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡುತ್ತೇನೆ.  ಪ್ರಧಾನಿ ಅವರಿಗೆ ತುಂಬಾ ಭದ್ರತೆ ಕೊಡಲಾಗುತ್ತದೆ, ಮತ್ತು ನಂತರ ಅವರು ಗೃಹ ಸಚಿವರು, ರಕ್ಷಣಾ ಸಚಿವರು ಮತ್ತು ಸ್ಪೀಕರ್ ಹೊರಡುವವರೆಗೆ ನಮ್ಮನ್ನು ಹೋಗಲು ಬಿಡುವುದಿಲ್ಲ, ಆದ್ದರಿಂದ ಅದರಲ್ಲಿ ಭಾಗವಹಿಸುವುದು ಅಸಾಧ್ಯವಾಗಿತ್ತು ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಖರ್ಗೆ ತನ್ನ ವಿಡಿಯೋ ಸಂದೇಶದಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್, ಮೌಲಾನಾ ಆಜಾದ್, ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು ಮತ್ತು ಬಿಆರ್ ಅಂಬೇಡ್ಕರ್  ಅವರಿಗೆ  ಗೌರವ ಸಲ್ಲಿಸಿದ್ದಾರೆ.

ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರ ಕಾಂಗ್ರೆಸ್ ಪ್ರಧಾನಿಗಳಾದ ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ನೆನೆಪಿಸಿಕೊಂಡಿದ್ದಾರೆ.  ಅಟಲ್ ಬಿಹಾರಿ ವಾಜಿಪಾಯಿ ಅವರ ಸಾಧನೆಯನ್ನು ಕೂಡ ಉಲ್ಲೇಖಿಸಿದ್ದಾರೆ.

ಭಾರತದ ಎಲ್ಲಾ ಪ್ರಧಾನಿಗಳು ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.  ಆದರೆ ಈಗ ಕೆಲವು ಜನರು ಎಲ್ಲವೂ ಕಳೆದ ಕೆಲ ವರ್ಷಗಳಿಂದ ನಡೆದಿರುವುದು ಎಂದು ಹೇಳಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಪ್ರಧಾನಿ ಮೋದಿಗೆ ಪರೋಕ್ಷವಾಗಿ ಟೀಕಿಸಿದ್ದಾರೆ.

ಇವತ್ತು  ಪ್ರಜಾಪ್ರಭುತ್ವ, ಸಂವಿಧಾನ, ಸ್ವಾಯುತ್ತ ಸಂಸ್ಥೆಗಳು ಗಂಭೀರವಾದ ಬೆದರಿಕೆಯನ್ನು ಎದುರಿಸುತ್ತಿದೆ ಎಂದು ನಾನು ನೋವಿನಿಂದ ಹೇಳುತ್ತೇನೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಹೊಸ ಹೊಸ ಉಪಕರಣಗಳು ಬಳಕೆಯಾಗುತ್ತಿವೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ದಾಳಿಗಳಷ್ಟೇ ಅಲ್ಲ, ಚುನಾವಣಾ ಆಯೋಗವನ್ನೂ ದುರ್ಬಲಗೊಳಿಸಲಾಗುತ್ತಿದೆ. ಪ್ರತಿಪಕ್ಷಗಳ ಸಂಸದರಿಗೆ ಮೂಗುದಾರ ಹಾಕಲಾಗುತ್ತಿದೆ, ಅಮಾನತುಗೊಳಿಸಲಾಗುತ್ತಿದೆ, ಮೈಕ್‌ಗಳನ್ನು ಮ್ಯೂಟ್ ಮಾಡಲಾಗುತ್ತಿದೆ, ಭಾಷಣಗಳನ್ನು ಹೊರಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...