Homeಮುಖಪುಟಬಿಎಸ್‌ಪಿಯಿಂದ ಚುನಾವಣೆಗಾಗಿ ರಾಮ ಧ್ಯಾನ: ಮಂದಿರ ನಿರ್ಮಾಣ ತ್ವರಿತಗೊಳಿಸುವ ಭರವಸೆ

ಬಿಎಸ್‌ಪಿಯಿಂದ ಚುನಾವಣೆಗಾಗಿ ರಾಮ ಧ್ಯಾನ: ಮಂದಿರ ನಿರ್ಮಾಣ ತ್ವರಿತಗೊಳಿಸುವ ಭರವಸೆ

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣವನ್ನು ತ್ವರಿತಗೊಳಿಸುವುದಾಗಿ ಮಾಯಾವತಿಯ ಬಹುಜನ ಸಮಾಜ ಪಕ್ಷ ಶುಕ್ರವಾರ ಭರವಸೆ ನೀಡಿದೆ. ದೇವಾಲಯ ನಿರ್ಮಾಣಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುವುದು ಮಾತ್ರ ಬಿಜೆಪಿಯ ಕೆಲಸವಾಗಿದೆ ಎಂದು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದೆ.

ಉತ್ತರ ಪ್ರದೇಶದ ದಲಿತ ಮತಗಳ ಮೇಲೆಯೇ ಕೇಂದ್ರೀತವಾಗಿರುವ ರಾಜಕೀಯ ಪಕ್ಷ ಬಹುಜನ ಸಮಾಜ ಪಕ್ಷದ ಈ ಹೇಳಿಕೆ ಚುನಾವಣಾ ತಂತ್ರವಾಗಿ ನೋಡಲಾಗುತ್ತಿದೆ. ಬ್ರಾಹ್ಮಣರ ಒಲೈಕೆಗಾಗಿ ಇಂತಹ ಹೇಳಿಕೆಗಳು ಬ್ರಾಹ್ಮಣ ಸಮ್ಮೇಳನಗಳನ್ನು ಬಿಎಸ್‌ಪಿ ನಡೆಸುತ್ತಿದೆ.

“ಬಿಜೆಪಿಗರು ರಾಮ ಮಂದಿರದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ಆದರೆ, ಭವ್ಯವಾದ ರಾಮನ ದೇವಾಲಯವನ್ನು ನಿರ್ಮಿಸಲು ಅದನ್ನು ಬಳಸುತ್ತಿಲ್ಲ. ಬಿಜೆಪಿಗರು ದೇವಾಲಯವನ್ನು ನಿರ್ಮಿಸಲು ಬಯಸುವುದಿಲ್ಲ. ನಾವು ಅವರಿಂದ ಈ ಕೆಲಸ ಆಗುವಂತೆ ಮಾಡುತ್ತೇವೆ. ದೇವಾಲಯ ನಿರ್ಮಾಣ ಚುರುಕುಗೊಳಿಸುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಆಪ್ತ ಸತೀಶ್ ಚಂದ್ರ ಮಿಶ್ರಾ ಅಯೋಧ್ಯೆಯಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಸ್ಪರ್ಧೆ: ಓವೈಸಿ ಜೊತೆ ಮೈತ್ರಿ ತಳ್ಳಿ ಹಾಕಿದ ಮಾಯಾವತಿ

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಎಸ್‌ಪಿ ರಾಜ್ಯದಲ್ಲಿ ಬ್ರಾಹ್ಮಣ ಸಮ್ಮೇಳನಗಳನ್ನು ಆಯೋಜಿಸುತ್ತಿದ್ದು, ಇದು ಮೊದಲನೆಯ ಬ್ರಾಹ್ಮಣ ಸಮ್ಮೇಳನವಾಗಿದೆ. ಆದರೆ, ಅಯೋಧ್ಯೆಯಲ್ಲಿ ನಡೆದ ಮೊದಲ ಸಭೆಯಲ್ಲಿ ಮಾಯಾವತಿ ಭಾಗವಹಿಸಸಿರಲಿಲ್ಲ. ಪಕ್ಷದ ಪ್ರಧಾನ ಕಾರ್ಯದರ್ಶಿ ಮಿಶ್ರಾ ಉಸ್ತುವಾರಿ ವಹಿಸಿದ್ದರು.

ಯುಪಿ ಜನಸಂಖ್ಯೆಯ ಅಂದಾಜು ಶೇಕಡಾ 11 ರಷ್ಟು ಬ್ರಾಹ್ಮಣರು ಇದ್ದು, ಸಾಂಪ್ರದಾಯಿಕವಾಗಿ ರಾಜ್ಯದಲ್ಲಿ ರಾಜಕೀಯ ಮತ್ತು ಅಧಿಕಾರ ಸಮೀಕರಣಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಬ್ರಾಹ್ಮಣರು ಮತ್ತು ಪರಿಶಿಷ್ಟ ಜಾತಿಗಳ ಮತಗಳಿಂದ 2007 ರಲ್ಲಿ ಮಾಯಾವತಿ ಪಕ್ಷ ಅಧಿಕಾರಕ್ಕೆ ಬಂದಿತ್ತು.  ಬಹುಮತ ಪಡೆದಿದ್ದ ಮಾಯಾವತಿ ಪಕ್ಷ ಐದು ವರ್ಷಗಳ ಕಾಲ ಆಳಿದ್ದರು. ಬಿಎಸ್‌ಪಿಯಿಂದ ಇಲ್ಲಿಯವರೆಗೆ 40 ಕ್ಕೂ ಹೆಚ್ಚು ಬ್ರಾಹ್ಮಣ ಶಾಸಕರು ಆಯ್ಕೆಯಾಗಿದ್ದಾರೆ.

ಜಾತಿಯ ಆಧಾರದಲ್ಲಿ ಠಾಕೂರ್ ಆಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಾಯಕತ್ವದಲ್ಲಿ ಬ್ರಾಹ್ಮಣ ಸಮುದಾಯವು  ಅಸಮಾಧಾನ ಹೊಂದಿದೆ. ಆದರೆ, ಈ ವಿಚಾರವನ್ನು ಬಿಜೆಪಿ ತಳ್ಳಿಹಾಕಿದೆ.

ಇತ್ತ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಮತ್ತು ಮಾಯಾವತಿಯ ಬಿಎಸ್‌ಪಿ ಎರಡು ಪಕ್ಷಗಳು ಚುನಾವಣೆಗೆ ಮುನ್ನ ಬ್ರಾಹ್ಮಣ ಸಮುದಾಯವನ್ನು ಗೆಲ್ಲುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.


ಇದನ್ನೂ ಓದಿ: ರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದು ಬಹಳ ನೋವಿನ ಸಂಗತಿ, ಚುನಾವಣೆಯಲ್ಲಿ ಗೆಲ್ಲಲು ಬಿ.ಎಸ್.ಪಿ. ಇಂತಹ ಹಾದಿಯನ್ನು ಹಿಡಿಯಬಾರದಿತ್ತು. ಅಂಬೇಡ್ಕರ್ ಮತ್ತು ಕಾನ್ಶೀರಾಂ ಅವರ ಕನಸುಗಳನ್ನು ಮಾಯಾವತಿಯವರು ನುಚ್ಚುನೂರು ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...