Homeಮುಖಪುಟ100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ 100ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಅಪಾರ ಜೀವಹಾನಿ ಮತ್ತು ಭಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯದ ಎಚ್ಚರಿಕೆ, ಪ್ರಾದೇಶಿಕ ಘರ್ಷಣೆಯ ಭೀತಿ ಮಧ್ಯೆ ಇದೀಗ ಯುದ್ಧವನ್ನು ಮತ್ತೆ ಮುಂದುವರಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ.

ಗಾಝಾ ಮೇಲಿನ ಮಿಲಿಟರಿಯ ಆಕ್ರಮಣದ ವಿರುದ್ಧ ತಡೆಯಾಜ್ಞೆಯ ಕುರಿತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಕ್ಕೆ ಎದುರು ನೋಡುತ್ತಿರುವಾಗ ಇಸ್ರೇಲ್‌ ಒಟ್ಟು ವಿಜಯದವರೆಗೆ ಯುದ್ಧ ಮುಂದುವರಿಸುವ ಪ್ರತಿಜ್ಞೆಯನ್ನು ಮಾಡಿದೆ.

ಅ.7ರಂದು ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ದಾಳಿಯನ್ನು ಪ್ರಾರಂಭಿಸಿದ ಬಳಿಕ 23,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸಂಪೂರ್ಣ ವಿಜಯದವರೆಗೆ, ನಾವು ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ ಯುದ್ಧವನ್ನು ಮುಂದುವರೆಸುತ್ತೇವೆ ಎಂದು ನೆತನ್ಯಾಹು ದೂರದರ್ಶನದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಮಾಸ್‌ನ್ನು ನಿರ್ಮೂಲನೆ ಮಾಡುವುದು, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ವಾಪಾಸ್ಸು ಕರೆಸಿಕೊಳ್ಳುವುದು ಮತ್ತು ಗಾಝಾ ಮೇಲೆ ಎಂದಿಗೂ ಮತ್ತೆ ಇಸ್ರೇಲ್‌ ದಾಳಿ ನಡೆಸದಂತೆ ಖಾತ್ರಿಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ಮತ್ತು ಯೆಮೆನ್‌ನ ಹೌತಿಗಳು ಪ್ಯಾಲೆಸ್ತೀನಿಯನ್ನರಿಗೆ ಬೆಂಬಲಿಸಿರುವುದು ವ್ಯಾಪಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿವೆ. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಹೌತಿ ದಾಳಿಗಳಿಗೆ ಪ್ರತಿಯಾಗಿ ಯೆಮೆನ್‌ನಲ್ಲಿನ ಹೌತಿ ಕೇಂದ್ರಿತ ಪ್ರದೇಶಗಳ ಮೇಲೆ ಅಮೆರಿಕ ಗುರುವಾರ ಮತ್ತು ಶುಕ್ರವಾರ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದೇ ವೇಳೆ ಇಸ್ರೇಲ್-ಲೆಬನಾನ್ ಗಡಿಯಾದ್ಯಂತ ಘರ್ಷಣೆಗಳು ಮುಂದುವರಿದಿದೆ.

ಭಾನುವಾರ ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿಯು ಉತ್ತರ ಇಸ್ರೇಲ್‌ನ ಮನೆಯೊಂದಕ್ಕೆ ಬಡಿದಿದೆ. ಘಟನೆಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಲೆಬನಾನ್‌ನಲ್ಲಿನ ಹೆಜ್ಬೊಲ್ಲಾ ಕೇಂದ್ರಗಳ ಮೇಲೆ ತನ್ನ ಫೈಟರ್ ಜೆಟ್‌ಗಳು ದಾಳಿ ಮಾಡಿದೆ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

ಉತ್ತರದ ಗಡಿ ಪ್ರದೇಶಗಳಿಂದ ಸಾವಿರಾರು ಇಸ್ರೇಲ್‌ ನಾಗರಿಕರನ್ನು ಸ್ಥಳಾಂತರಿಸಲಾಗಿದ್ದು, ಗಡಿ ಪ್ರದೇಶದಿಂದ ಸಾವಿರಾರು ಲೆಬನಾನಿನ ನಾಗರಿಕರು ಕೂಡ ನಿವೇಶನಗಳನ್ನು ಬಿಟ್ಟು ತೆರಳಿದ್ದಾರೆ. ಭಾನುವಾರ ಹಿಜ್ಬುಲ್ಲಾದ ನಾಯಕ ಹಸನ್ ನಸ್ರಲ್ಲಾ ಅವರು ಗಾಝಾ ಮೇಲೆ ಇಸ್ರೇಲ್‌ ಯುದ್ಧ 99 ದಿನಕ್ಕೆ ಕಾಲಿಡುತ್ತಿದ್ದಂತೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ. ನಾವು ಅದಕ್ಕೆ ಹೆದರುವುದಿಲ್ಲ ಎಂದು ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇಸ್ರೇಲ್‌ ಗಾಝಾ ಯುದ್ಧ ಇದೀಗ ನಿಧಾನವಾಗಿ ಪ್ರಾದೇಶಿಕ ಘರ್ಷಣೆಯಾಗಿ ಮಾರ್ಪಟ್ಟಿದೆ.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...